Webdunia - Bharat's app for daily news and videos

Install App

ಯೋಗ ಶಿಕ್ಷಕಿಯ ಜೀವಂತ ಸಮಾಧಿ ಮಾಡಿದ ಪ್ರಕರಣಕ್ಕೆ ಟ್ವಿಸ್ಟ್

Krishnaveni K
ಶನಿವಾರ, 9 ನವೆಂಬರ್ 2024 (13:58 IST)
ಬೆಂಗಳೂರು: ಇತ್ತೀಚೆಗೆ ಚಿಕ್ಕಬಳ್ಳಾಪುರದಲ್ಲಿ ಯೋಗ ಶಿಕ್ಷಕಿಯೊಬ್ಬರು ಅಪಹರಣ ಮಾಡಿ ಕೊಲೆ ಮಾಡಲು ಯತ್ನಿಸಿದಾಗ ತಪ್ಪಿಸಿಕೊಳ್ಳಲು ಸತ್ತಂತೆ ನಟಿಸಿ ಜೀವಂತ ಸಮಾಧಿಯಾಗಿರುವ ಘಟನೆ ಎಲ್ಲರನ್ನೂ ಬೆಚ್ಚಿಬೀಳಿಸಿತ್ತು. ಆದರೆ ಆ ಪ್ರಕರಣಕ್ಕೆ  ಈಗ ಹೊಸ ಟ್ವಿಸ್ಟ್ ಸಿಕ್ಕಿದೆ.

ಯೋಗ ಶಿಕ್ಷಕಿ ಸಾವನ್ನಪ್ಪಿದ್ದಾಳೆ ಎಂದು ಭಾವಿಸಿದ ಆರೋಪಿಗಳು ಆಕೆಯನ್ನು ಹೂತು ಹಾಕಿ ಪರಾರಿಯಾಗಿದ್ದರು. ಆದರೆ ಸತ್ತಂತೆ ನಟಿಸಿದ್ದ ಯೋಗ ಶಿಕ್ಷಕಿ ಬಳಿಕ ತಪ್ಪಿಸಿಕೊಂಡಿದ್ದಳು. ಇದೀಗ ಆ ಪ್ರಕರಣದ ಹಿಂದೆ ಆಕೆಯ ಜೊತೆ ಸಲುಗೆಯಿಂದಿದ್ದ ಸಂತೋಷ್ ಕುಮಾರ್ ಎಂಬಾತನ ಪತ್ನಿ ಬಿಂದು ಎಂಬಾಕೆಯ ಕೈವಾಡವಿದೆ ಎಂಬುದು ಬಯಲಾಗಿದೆ.

ಸಂತೋಷ್ ಕುಮಾರ್ ಇತ್ತೀಚೆಗೆ ಯೋಗ ಶಿಕ್ಷಕಿಯೊಂದಿಗೆ ಸಲುಗೆಯಿಂದಿದ್ದ. ಇದರಿಂದ ಪತ್ನಿ, ಮಕ್ಕಳ ಬಗ್ಗೆ ಹೆಚ್ಚು ಗಮನಕೊಡುತ್ತಿರಲಿಲ್ಲ. ಇದರಿಂದ ಸಿಟ್ಟಿಗೆದ್ದಿದ್ದ ಬಿಂದು ಶಿಕ್ಷಕಿ ಕತೆ ಮುಗಿಸಲು ಸತೀಶ್ ರೆಡ್ಡಿ ಎಂಬಾತನಿಗೆ ನಾಲ್ಕು ಲಕ್ಷ ರೂಪಾಯಿಗೆ ಸುಪಾರಿ ನೀಡಿದ್ದಳು.

ಅದರಂತೆ ಸತೀಶ್ ರೆಡ್ಡಿ ಮೊದಲು ಯೋಗ ಶಿಕ್ಷಕಿಯ ಸ್ನೇಹ ಸಂಪಾದಿಸಿದ್ದ. ಬಳಿಕ ಆಕೆಯೊಂದಕ್ಕೆ ಪಾರ್ಟನರ್ ಶಿಪ್ ನಲ್ಲಿ ಜಮೀನು ಖರೀದಿಸುವ ನಾಟಕವಾಡಿದ್ದ. ಅಕ್ಟೋಬರ್ 23 ರಂದು ಯೋಗ ಶಿಕ್ಷಕಿಯ ಅಪಹರಣಕ್ಕೆ ಆತ ಸ್ಕೆಚ್ ಹಾಕಿದ್ದ. ನಾಗರಿಕ ಗನ್ ಟ್ರೈನಿಂಗ್ ಕೊಡುತ್ತೇವೆ ಎಂದು ಪುಸಲಾಯಿಸಿ ಕಾರಿನಲ್ಲಿ ಯೋಗ ಶಿಕ್ಷಕಿಯನ್ನು ಕರೆದೊಯ್ದು ಶಿಡ್ಲಘಟ್ಟ ತಾಲೂಕಿನ ಗೌಡನ ಹಳ್ಳಿ ಬಳಿಯ ಕಾಲುವೆ ಸಮೀಪ ಕರೆದುಕೊಂಡು ಹೋಗಿ ಆಕೆಯ ಕುತ್ತಿಗೆಯಲ್ಲಿದ್ದ ಮಾಂಗಲ್ಯ, ಚಿನ್ನದ ಉಂಗುರವನ್ನು ದೋಚಿದ್ದಾರೆ. ಬಳಿಕ ಯೋಗ ಶಿಕ್ಷಕಿಯನ್ನು ಅರೆಬೆತ್ತಲೆಗೊಳಿಸಿ ಗುಂಡಿಗೆ ನೂಕಿ ಮಣ್ಣು, ಟೊಂಗೆಗಳಿಂದು ಮುಚ್ಚಿದ್ದಾರೆ ಎಂಬುದು ಪೊಲೀಸ್ ತನಿಖೆಯಿಂದ ತಿಳಿದುಬಂದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Viral video: ಸೈಕ್ಲಿಂಗ್ ಮಾಡಲು ಹೋಗಿ ದಢಾರನೆ ಬಿದ್ದ ಡಿಕೆ ಶಿವಕುಮಾರ್

ವಿಧಾನಸೌಧದಲ್ಲಿ 28 ಕ್ಕೆ ಪ್ರಮಾಣವಚನ ಮಾಡ್ತೇವೆ: ಡಿಕೆ ಶಿವಕುಮಾರ್ ಶಾಕಿಂಗ್ ಹೇಳಿಕೆ

ಐಪಿಎಲ್ ಪಂದ್ಯದ ಫ್ಲಡ್ ಲೈಟ್ ಹ್ಯಾಕ್ ಮಾಡಿದ್ವಿ: ಪಾಕ್ ಸಚಿವ ಫುಲ್ ಟ್ರೋಲ್

ಶಿರಾಡಿ ಘಾಟಿಯಲ್ಲಿ ಗುಡ್ಡ ಕುಸಿತ ಭೀತಿ: ಮಂಗಳೂರು, ಬೆಂಗಳೂರು ಪ್ರಯಾಣಿಕರ ಗಮನಕ್ಕೆ

ಇರಾನ್ ಇಸ್ರೇಲ್ ನಡುವಿನ ಯುದ್ಧದಿಂದ ಕರ್ನಾಟಕಕ್ಕಾಗುವ ಪರಿಣಾಮಗಳೇನು

ಮುಂದಿನ ಸುದ್ದಿ
Show comments