Select Your Language

Notifications

webdunia
webdunia
webdunia
webdunia

ಪ್ರೀತಿ ನಿರಾಕರಿಸಿದ ಯುವತಿ ಮುಂದೇನಾಯ್ತು ಗೊತ್ತ?

ಪ್ರೀತಿ ನಿರಾಕರಿಸಿದ ಯುವತಿ ಮುಂದೇನಾಯ್ತು ಗೊತ್ತ?
ಬೆಂಗಳೂರು , ಭಾನುವಾರ, 13 ಫೆಬ್ರವರಿ 2022 (17:06 IST)
ಬೆಂಗಳೂರು :  ಪ್ರೀತಿ ನಿರಾಕರಿಸಿದ ಯುವತಿಗೆ ಚಾಕುವಿನಿಂದ ಇರಿದು ಕೊಲೆ ಯತ್ನ ನಡೆಸಿದ್ದ ಅಪರಾಧಿಗೆ ನಗರದ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಐದು ವರ್ಷ ಕಠಿಣ ಜೈಲು ಶಿಕ್ಷೆ ಮತ್ತು 25 ಸಾವಿರ ರು.
 
ದಂಡ ವಿಧಿಸಿದೆ. ಪ್ರಕರಣ ಸಂಬಂಧ ವಿಚಾರಣೆ ನಡೆಸಿದ ನಗರದ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶ ಸುಭಾಷ್ ಬಿ. ಸಂಕದ್ ಅವರು ಅಪರಾಧಿ ಅನಿಲ್ ಕುಮಾರ್ ಅಲಿಯಾಸ್ ರಾಹುಲ್ಗೆ ಶಿಕ್ಷೆ ವಿಧಿಸಿ, ದಂಡದ ಮೊತ್ತವನ್ನು ಸಂತ್ರಸ್ತ ಯುವತಿಗೆ ಪರಿಹಾರದ ರೂಪದಲ್ಲಿ ನೀಡಲು ಆದೇಶಿಸಿದ್ದಾರೆ.

ದಂಡದ ಮೊತ್ತ ಪಾವತಿಸದಿದ್ದಲ್ಲಿ ಹೆಚ್ಚುವರಿಯಾಗಿ ಆರು ತಿಂಗಳು ಸಾಮಾನ್ಯ ಶಿಕ್ಷೆ ಅನುಭವಿಸಬೇಕು. ಅಪರಾಧಿಯ ಆಸ್ತಿ ಮುಟ್ಟುಗೋಲು ಹಾಕಿಕೊಂಡು ಪರಿಹಾರ ಮೊತ್ತವನ್ನು ವಸೂಲಿ ಮಾಡಬೇಕು ಎಂದು ನ್ಯಾಯಾಲಯ ಆದೇಶದಲ್ಲಿ ತಿಳಿಸಿದೆ.


Share this Story:

Follow Webdunia kannada

ಮುಂದಿನ ಸುದ್ದಿ

ಡ್ರೋನ್ ಆಮದು ನಿಷೇಧ !