Webdunia - Bharat's app for daily news and videos

Install App

ರಮ್ಯಾಳನ್ನು ನೀವೇ ಹುಡುಕಿಕೊಡಿ: ಅಂಬರೀಶ್

Webdunia
ಮಂಗಳವಾರ, 5 ಮೇ 2015 (14:44 IST)
ಕಾಂಗ್ರೆಸ್ ನಾಯಕಿ, ಮಾಜಿ ಸಂಸದೆ, ನಟಿ ರಮ್ಯಾ ಅವರು ನಮ್ಮೊಂದಿಗೆ ಸಂಪರ್ಕದಲ್ಲಿಲ್ಲ. ಈ ಹಿನ್ನೆಲೆಯಲ್ಲಿ ಅವರನ್ನು ನೀವೇ ಹುಡುಕಿಕೊಡಬೇಕು ಎಂದು ರಾಜ್ಯದ ವಸತಿ ಸಚಿವ, ನಟ ಅಬಂರೀಶ್ ಅವರು ಇಂದು ವ್ಯಂಗ್ಯವಾಗಿ ನುಡಿದಿದ್ದಾರೆ. 
 
ನಗರದ ಪ್ರಾದೇಶಿಕ ಕಾಂಗ್ರೆಸ್ ಕಚೇರಿಯಲ್ಲಿ ಆಯೋಜಿಸಲಾಗಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಮ್ಯಾ ಅವರು ಈ ಹಿಂದೆ 6 ತಿಂಗಳು ಸಂಸದೆಯಾಗಿದ್ದರು. ಆದರೆ ಆರು ತಿಂಗಳ ಹಿಂದೆ ಸೋಲನ್ನು ಅನುಭವಿಸಿದ್ದರು. ಇದರಿಂದ ಅವರು ಬೇಸರ ಮಾಡಿಕೊಂಡಿರಬಹುದು ಎಂದ ಅವರು, ರಮ್ಯಾ ಪ್ರಸ್ತುತ ಎಲ್ಲಿದ್ದಾರೆ ಎಂಬ ಬಗ್ಗೆ ಮಾಹಿತಿ ಇಲ್ಲ. ಅಲ್ಲದೆ ನನ್ನ ಸಂಪರ್ಕದಲ್ಲಿಯೂ ಇಲ್ಲ. ಅವರನ್ನು ನೀವೇ ಹುಡುಕಿಕೊಡಬೇಕು ಎಂದು ವ್ಯಂಗ್ಯ ನಗುವಿನೊಂದಿಗೆ ಪ್ರತಿಕ್ರಿಯಿಸಿದರು. 
 
ಕಳೆದ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ರಮ್ಯಾ, ಸೋಲನ್ನು ಅನುಭವಿಸಿದ್ದರು. ಬಳಿಕ ವಿದೇಶಕ್ಕೆ ತೆರಳಿದ್ದಾರೆ ಎಂಬ ಸುದ್ದಿಯೂ ಹಬ್ಬಿತ್ತು. ಆದರೆ ಪ್ರಸ್ತುತ ಎಲ್ಲಿದ್ದಾರೆ ಎಂಬ ಬಗ್ಗೆ ಯಾರೊಬ್ಬರಿಗೂ ತಿಳಿದಿಲ್ಲ. ಈ ಹಿನ್ನೆಲೆಯಲ್ಲಿ ಮಾಧ್ಯಮಗಳು ತಮ್ಮ ಪಕ್ಷದ ಸದಸ್ಯೆ ರಮ್ಯಾ ಎಲ್ಲಿ ಎಂದು ಅಂಬರೀಶ್ ಅವರಲ್ಲಿ ಪ್ರಶ್ನಿಸಿದ್ದು, ಸಚಿವರು ಈ ರೀತಿಯಾಗಿ ಉತ್ತರಿಸಿದ್ದಾರೆ.    

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments