Webdunia - Bharat's app for daily news and videos

Install App

ಕನ್ನಡಿಗರನ್ನು ರೇಸಿಸ್ಟ್ ಎಂದ ಹಿಂದಿವಾಲಾ ಯೂ ಟ್ಯೂಬರ್ ಶ್ರಿಂಕಾಲ್

Krishnaveni K
ಗುರುವಾರ, 14 ಮಾರ್ಚ್ 2024 (13:24 IST)
Photo Courtesy: Instagram
ಬೆಂಗಳೂರು: ಕನ್ನಡಿಗರನ್ನು ರೇಸಿಸ್ಟ್ ಗಳು ಎಂದು ಹಿಂದಿ ಭಾಷಿಕ ಯೂ ಟ್ಯೂಬರ್ ಶ್ರಿಂಕಾಲ್ ಎಂಬಾತ, ಕನ್ನಡಿಗರಿಗೆ ಸವಾಲನ್ನೂ ಹಾಕಿ ವಿವಾದ ಸೃಷ್ಟಿಸಿದ್ದಾನೆ.

ಎಸ್ ಆರ್ ಪೆ ಹೆಸರಿನ ಯೂ ಟ್ಯೂಬ್ ಚಾನೆಲ್ ಹೊಂದಿರುವ ಶ್ರಿಂಕಾಲ್ ಎಂಬಾತ ಕೆಲವು ತಿಂಗಳ ಹಿಂದೆ ವಿಡಿಯೋವೊಂದರಲ್ಲಿ ತನ್ನ ಗೆಳೆಯರೊಂದಿಗೆ ಕನ್ನಡಿಗರನ್ನು ತಮಾಷೆ ಮಾಡುತ್ತಾನೆ. ಮುಂಬೈನಲ್ಲಿ ನೆಲೆಸಿರುವವರನ್ನು ಮುಂಬೈಕರ್ ಎಂದರೆ ಕನ್ನಡಿಗರನ್ನು ಏನೆಂದು ಕರೆಯಬೇಕು ಎಂದು ಗೆಳೆಯರು ಕೇಳಿದಾಗ ಆತ ರೇಸಿಸ್ಟ್ ಗಳು ಎಂದಿದ್ದಾನೆ.

ಈತನ ವಿರುದ್ಧ ಆಗಲೇ ಕನ್ನಡಿಗರು ಆಕ್ರೋಶ ವ್ಯಕ್ತಪಡಿಸಿದ್ದರು. ಆದರೂ ಆತನ ದುರಂಹಕಾರ ಕಡಿಮೆಯಾಗಿಲ್ಲ. ಮತ್ತೊಂದು ವಿಡಿಯೋ ಪ್ರಕಟಿಸಿ ಅಪಾಲಿಜಿಸ್ ಟು ಕನ್ನಡಿಗ ಎಂದು ಥಂಬ್ ನೈಲ್ ಹಾಕಿ ಮತ್ತೊಂದು ವಿಡಿಯೋ ಹರಿಯಬಿಟ್ಟಿದ್ದ. ಇದರಲ್ಲಿ ಮಾರ್ಚ್ 15 ರಂದು ಬೆಂಗಳೂರಿನ ಒರಿಯಾನ್ ಮಾಲ್ ಗೆ ಬರುತ್ತೇನೆ ಎಂದು ಸವಾಲು ಹಾಕಿದ್ದಾನೆ.

ಈತನ ಈ ವಿಡಿಯೋ ಕೂಡಾ ವೈರಲ್ ಆಗಿದ್ದು, ಅನೇಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕನ್ನಡಿಗರು ಸಹಿಷ್ಣುಗಳು ಎನ್ನುವುದಕ್ಕೆ ಬೆಂಗಳೂರಿನಲ್ಲಿರುವ ಅನೇಕ ರಾಜ್ಯದ, ಅನೇಕ ಭಾಷೆ ಮಾತನಾಡುವ ಜನರೇ ಸಾಕ್ಷಿ. ನಿನ್ನಂತಹವರಿಗೆ ಕನ್ನಡಿಗರು ತಕ್ಕ ಪಾಠ ಕಲಿಸಬೇಕಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Air India ‌Flight Crash: ಮೃತ ಪ್ರತಿ ಪ್ರಯಾಣಿಕನ ಕುಟುಂಬಕ್ಕೆ ತಲಾ ₹1 ಕೋಟಿ ಘೋಷಿಸಿದ ಟಾಟಾ ಗ್ರೂಪ್

Air India Plane crash: ವಿಮಾನ ಅಪಘಾತಕ್ಕೆ ಇದೇ ಕಾರಣ: ಮಲ್ಲಿಕಾರ್ಜುನ ಖರ್ಗೆ ಸ್ಪೋಟಕ ಹೇಳಿಕೆ

Air India Plane crash: ಸುತ್ತಲೂ ಹೆಣಗಳ ರಾಶಿಯಿತ್ತು, ಬದುಕುಳಿದ ಏಕೈಕ ವ್ಯಕ್ತಿ ಬಿಚ್ಚಿಟ್ಟ ಭಯಾನಕ ಸತ್ಯ

Air India Flight Crash: ಗಂಡನ ಭೇಟಿಗಾಗಿ ಲಂಡನ್‌ಗೆ ಹೊರಟ್ಟಿದ್ದ ಮಹಿಳೆ ಸೇರಿದ್ದು ಮಸಣಕ್ಕೆ, ಕಣ್ಣೀರ ಕತೆ

Air India Crash: 10 ನಿಮಿಷ ಲೇಟ್‌, ಟ್ರಾಫಿಕ್‌ನಲ್ಲಿ ಸಿಲುಕಿ ಮಹಿಳೆ ಜಸ್ಟ್ ಬಚಾವ್‌

ಮುಂದಿನ ಸುದ್ದಿ
Show comments