Select Your Language

Notifications

webdunia
webdunia
webdunia
webdunia

ಸಾಮಾನ್ಯ ಕಾರ್ಯಕರ್ತನಿಗೆ ಟಿಕೆಟ್ ಕೊಡ್ತೀನಿ ಅಂದ್ರೂ ಓಕೆ : ರೇವಣ್ಣ

ಸಾಮಾನ್ಯ ಕಾರ್ಯಕರ್ತನಿಗೆ ಟಿಕೆಟ್ ಕೊಡ್ತೀನಿ ಅಂದ್ರೂ ಓಕೆ : ರೇವಣ್ಣ
ಹಾಸನ , ಬುಧವಾರ, 12 ಏಪ್ರಿಲ್ 2023 (16:19 IST)
ಹಾಸನ : ದೇವೇಗೌಡರು ಹಾಸನ ಜಿಲ್ಲೆಯಲ್ಲಿ ಸಾಮಾನ್ಯ ಕಾರ್ಯಕರ್ತನಿಗೆ ಟಿಕೆಟ್ ಕೊಡ್ತೀನಿ ಅಂದ್ರೂ ಓಕೆ ಅಂತೀನಿ ಎಂದು ಮಾಜಿ ಸಚಿವ ಹೆಚ್.ಡಿ ರೇವಣ್ಣ ಹೇಳಿದ್ದಾರೆ.
 
ಹೊಳೆನರಸೀಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯುತ್ತೇನೆ ಎಂದು ಎಲ್ಲೂ ಹೇಳಿಲ್ಲ. ನಾನು ಈಗಾಗಲೇ ದೇವೇಗೌಡರ ಬಳಿ ಹೇಳಿದ್ದೇನೆ. ಅದು ನಮ್ಮಿಬ್ಬರಿಗೇ ಗೊತ್ತು. ದೇವೇಗೌಡರೇ ನಮಗೆ ಸುಪ್ರೀಂ ನಾಯಕರು. ಅವರು ಏನು ಹೇಳುತ್ತಾರೋ ಅದಕ್ಕೆ ನಾನು ಬದ್ಧ ದೇವೇಗೌಡರು ಹಾಸನದಲ್ಲಿ ಸಾಮಾನ್ಯ ಕಾರ್ಯಕರ್ತನಿಗೆ ಟಿಕೆಟ್ ಅಂತಾ ಹೇಳಿದ್ರೂ ನಾನು ಓಕೆ ಅಂತೀನಿ ಎಂದು ಹೇಳಿದ್ದಾರೆ. 

ಕಾಂಗ್ರೆಸ್ ನಾಯಕರ ಜೊತೆ ಸಂಪರ್ಕ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಸಿದ್ದರಾಮಯ್ಯ ಮತ್ತು ನನ್ನ ನಡುವಿನ ಬಾಂಧವ್ಯ ಬೇರೆ. ದೇವೇಗೌಡರು, ಕುಮಾರಣ್ಣ ಇಲ್ವಾ? ನಾನೇಕೆ ಕಾಂಗ್ರೆಸ್ಗೆ ಹೊಗಲಿ? ಹಾಸನ ಟಿಕೆಟ್ ವಿಚಾರದಲ್ಲಿ ಯಾವ ಗೊಂದಲವೂ ಇಲ್ಲ, ನಾನು ಕುಮಾರಣ್ಣ ಮೊದಲೇ ಮಾತನಾಡಿಕೊಂಡಿದ್ದೇವೆ ಎಂದು ಸ್ಪಷ್ಟಪಡಿಸಿದ್ದಾರೆ. 


Share this Story:

Follow Webdunia kannada

ಮುಂದಿನ ಸುದ್ದಿ

ಡೆಡ್ಲಿ ಟ್ರಾನ್ಸ್‌ಫಾರ್ಮರ್‌ ಸ್ಥಳಾಂತರಿಸಲು ಹೈಕೋರ್ಟ್ ಸೂಚನೆ