ತನ್ನ ತಂಟೆಗೆ ಬಂದ್ರೆ ಬೆತ್ತಲೆ ಮೆರವಣಿಗೆ ಮಾಡ್ತೀನಿ: ಶಾಸಕ ರಾಜು ಕಾಗೆ ಹೀಗೆ ಹೇಳಿದ್ದು ಯಾರಿಗೆ

Sampriya
ಮಂಗಳವಾರ, 3 ಸೆಪ್ಟಂಬರ್ 2024 (14:20 IST)
Photo Courtesy X
ಬೆಳಗಾವಿ: ಕುಡುಚಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್‌ನ ಶಾಸಕ ರಾಜು ಕಾಗೆ ಅವರು ನಾಲಿಗೆ ಹರಿಬಿಟ್ಟು, ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಅವರ ಹೇಳಿಕೆಯ ವಿಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ.

ತನ್ನ ತಂಟೆಗೆ ಬಂದರೆ ನಿನ್ನ ಬಟ್ಟೆ ಬಿಚ್ಚಿ ಬೆತ್ತಲೆ ಮಾಡಿ‌ ಮೆರವಣಿಗೆ ಮಾಡುತ್ತೇನೆ ಎಂದು ಬಿಜೆಪಿಯ ಮಾಜಿ‌ ಶಾಸಕ ಶ್ರೀಮಂತ ಪಾಟೀಲ್‌ ವಿರುದ್ಧ ರಾಜು ಕಾಗೆ ವಾಗ್ದಾಳಿ ಮಾಡಿದ್ದಾರೆ.

ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಐನಾಪುರ ಪಟ್ಟಣದಲ್ಲಿ ಅಭಿವೃದ್ಧಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ರಾಜು ಕಾಗೆ, ನನ್ನ ಬಗ್ಗೆ ಮಾತನಾಡಲು ನಿನಗೆ ಯೋಗ್ಯತೆ ಇಲ್ಲ. ನೀನು ನನ್ನ ಬಗ್ಗೆ ಮಾತನಾಡ ಬೇಡ, ಅಪ್ಪಿ-ತಪ್ಪಿ ಮಾತನಾಡಿದರೆ ನಾನು ನಿನ್ನ ಬಟ್ಟೆ ಬಿಚ್ಚಿ ಮೆರವಣಿಗೆ ಮಾಡುತ್ತೇನೆ ಎಂದು ಶ್ರೀಮಂತಪಾಟೀಲ್‌ ವಿರುದ್ಧ ಕೆಂಡಕಾರಿದರು.

ನೀನು ಬಹಳ ಸತ್ಯ ಹರಿಶ್ಚಂದ್ರ ತರಹ ಮಾತನಾಡುತ್ತಿದ್ದೀಯಾ. ನಿಮ್ಮ ಕಾರ್ಖಾನೆಯಲ್ಲಿ ಕಾಟಾ ಯಾರು ಹೊಡೆದ್ರಿ? ಕಾರ್ಮಿಕರ ದುಡ್ಡಿನಲ್ಲಿ ಹುಟ್ಟು ಹಬ್ಬ ಆಚರಿಸಿದವರು ಯಾರು? ಎಂದು ಪ್ರಶ್ನಿಸಿದರು.  

ಮಾಜಿ ಶಾಸಕ ಶ್ರೀಮಂತ ಪಾಟೀಲ್ ಈ ಹಿಂದೆ ರಾಜು ಕಾಗೆ ವಿರುದ್ಧ ಭ್ರಷ್ಟಾಚಾರ ಆರೋಪ ಮಾಡಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗೃಹಲಕ್ಷ್ಮಿ ಯೋಜನೆಯಲ್ಲೂ ಹಗರಣವೇ, ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ತಪ್ಪು ಲೆಕ್ಕ ಕೊಟ್ಟ ಆರೋಪ

ಬಗರ್ ಹುಕುಂ ಭೂಮಿಯನ್ನು ಅಕ್ರಮವಾಗಿ ಮಂಜೂರು ಮಾಡಿದರೆ ಶಿಕ್ಷೆ: ಸಚಿವ ಕೃಷ್ಣಭೈರೇಗೌಡ

ಡಿಕೆ ಶಿವಕುಮಾರ್, ವಿಜಯೇಂದ್ರ ಬಗ್ಗೆ ಬೆಚ್ಚಿಬೀಳುವ ಬಾಂಬ್ ಸಿಡಿಸಿದ ಬಸನಗೌಡ ಪಾಟೀಲ್ ಯತ್ನಾಳ್

ಬ್ರೇಕ್ ಫಾಸ್ಟ್, ಡಿನ್ನರ್ ಮೀಟಿಂಗ್ ನಿಂದಲೇ ರಾಜ್ಯ ಕುಲಗೆಟ್ಟಿದೆ: ಬಿವೈ ವಿಜಯೇಂದ್ರ

ವೋಟ್ ಚೋರಿ ಚರಿತ್ರೆಯನ್ನೇ ಹೊಂದಿರುವ ಕಾಂಗ್ರೆಸ್ ಗೆ ಬಿಜೆಪಿ ಮೇಲೆ ಆರೋಪಿಸಲು ನೈತಿಕತೆಯಿಲ್ಲ: ಸಿಟಿ ರವಿ

ಮುಂದಿನ ಸುದ್ದಿ