Webdunia - Bharat's app for daily news and videos

Install App

ಹರಿಹರೆಯದ ಯುವತಿ ಆತ್ಮಹತ್ಯೆಗೆ ಶರಣು: ಕಾರಣ ಕೇಳಿದರೆ ಶಾಕ್ ಆಗ್ತೀರಾ…

Webdunia
ಶುಕ್ರವಾರ, 7 ಡಿಸೆಂಬರ್ 2018 (20:09 IST)
ಆಕೆ ಇನ್ನು ಹರಿಹರೆಯದ ಯುವತಿ. ಜೀವನ ನೋಡುವುದು ಬಹಳಷ್ಟಿತ್ತು. ಆದರೆ ಆಕೆಗೆ ಅಂಟಿದ ವ್ಯಸನ ಆಕೆಯ ಬಾಳನ್ನೇ ನಾಶ ಮಾಡಿದೆ.

ಮಹಾರಾಷ್ಟ್ರದ ನಾಗಪುರದಲ್ಲಿ ಓರ್ವ ಹದಿಹರೆಯದ ಬಾಲಕಿಯ ಆತ್ಮಹತ್ಯೆ ಪ್ರಕರಣ ಹೊಸ ಟ್ವಿಸ್ಟ್ ಪಡೆದುಕೊಂಡಿದೆ. ಅಂತರ್ಜಾಲ ಆಟದ ವ್ಯಸನದ ದುಷ್ಪರಿಣಾಮದಿಂದ ಯುವತಿ ಆತ್ಮಹತ್ಯೆ ಆಗಿರಬಹುದು ಎಂದು ಪೊಲೀಸರು ಶಂಕಿಸಿದ್ದು, ನಿಟ್ಟಿನಲ್ಲಿ ತನಿಖೆ ಕೈಗೊಂಡಿದ್ದಾರೆ.

ನಾಗಪುರದ ಬೆಲ್ತರೋಡಿ ಪ್ರದೇಶದಲ್ಲಿನ ತನ್ನ ಮನೆಯಲ್ಲಿ 17 ವರ್ಷದ ಬಾಲಕಿ ನೇಣು ಬಿಗಿದುಕೊಂಡು ಮೃತಪಟ್ಟಿದ್ದು, ಆಕೆಯ ಮುಂಗೈ ಮೇಲೆಹೊರ ಹೋಗಲು ಇಲ್ಲಿ ತುಂಡರಿಸು” (ಕಟ್ ಹಿಯರ್ ಟು ಎಕ್ಸಿಟ್) ಎಂದು ಬೆರೆದುಕೊಂಡಿರುವುದು ಕಂಡುಬಂದಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಬೆಲ್ತರೋಡಿ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ವಿಜಯ್ ತಲ್ವಾರೆ ಹೇಳಿಕೆ ನೀಡಿದ್ದು, ಮೃತ ಬಾಲಕಿಯ ಪೋಷಕರು ನೀಡಿರುವ ಹೇಳಿಕೆ ಪ್ರಕಾರ ಬಾಲಕಿಯ ಅಧ್ಯಯನಕ್ಕೆಂದು ಪ್ರತ್ಯೇಕ ಕೊಠಡಿ ಇತ್ತು. ಅಲ್ಲಿ ಆಕೆ ಆನ್ಲೈನ್ ಗೇಮ್ಗಳನ್ನು ಆಡುತ್ತಾ ಕಾಲ ಕಳೆಯುತ್ತಿದ್ದಳು. ಹೀಗಾಗಿ ಆಕೆ ಯಾವ ಆಟ ಆಡುತ್ತಿದ್ದಾಳೆ. ಅದೇನಾದರೂ ಅಪಾಯಕಾರಿ ಆಟವಾಗಿರಬಹುದೇ ಎಂದು ಪತ್ತೆಹಚ್ಚಲು ನಾವು ಬಾಲಕಿ ಬಳಸುತ್ತಿದ್ದ ಮೊಬೈಲನ್ನು ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ ಪರಿಶೀಲನೆಗೆಂದು ಕಳುಹಿಸಿದ್ದೇವೆ ಎಂದು ಹೇಳಿದ್ದಾರೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments