Webdunia - Bharat's app for daily news and videos

Install App

ನಾಟಕ ನಂಬಲು ಯುವಕರು ಮೂರ್ಖರಲ್ಲ : ಗುಂಡೂರಾವ್

Webdunia
ಶುಕ್ರವಾರ, 17 ಜೂನ್ 2022 (13:51 IST)
ಬೆಂಗಳೂರು : ಸರ್ಕಾರ ಪ್ರಾರಂಭಿಸಿರುವ ಅಗ್ನಿಪಥ್ ನೇಮಕಾತಿ ಯೋಜನೆಯನ್ನು ವಿರೋಧಿಸಿ ಕಾಂಗ್ರೆಸ್ ನಾಯಕ ದಿನೇಶ್ ಗುಂಡೂರಾವ್ ಆಕ್ರೋಶ ಹೊರ ಹಾಕಿದ್ದಾರೆ.
 
ಈ ಕುರಿತಂತೆ ಸರಣಿ ಟ್ವೀಟ್ ಮಾಡಿರುವ ಅವರು, ಸೇನೆಯ ಅಲ್ಪಾವಧಿ ನೇಮಕ ಯೋಜನೆ ‘ಅಗ್ನಿಪಥ್’ ವಿರುದ್ಧ ದೇಶಾದ್ಯಂತ ಯುವಕರ ಆಕ್ರೋಶ ಭುಗಿಲೆದ್ದಿದೆ. ಯುವಕರ ಆಕ್ರೋಶ ಸಹಜವಾದದ್ದೆ. ಕಳೆದ ಎರಡು ವರ್ಷಗಳಿಂದ ಸೇನೆಗೆ ನೇಮಕಾತಿ ನಡೆದಿಲ್ಲ.

ಈಗ ಅಗ್ನಿಪಥ್ ಯೋಜನೆಯ ಮೂಲಕ ನೇಮಕಾತಿಯಾದರೂ ಅದು ಅಲ್ಪಾವಧಿಯಷ್ಟೆ. ಕೇವಲ ನಾಲ್ಕು ವರ್ಷಕ್ಕೆ ಕಡ್ಡಾಯ ನಿವೃತ್ತಿಯಾಗಬೇಕು. ಆ ನಂತರ ಯುವಕರ ಭವಿಷ್ಯವೇನು ಎಂದು ಪ್ರಶ್ನಿಸಿದ್ದಾರೆ. 

ಅತಿ ಹೆಚ್ಚಿನ ಸಂಖ್ಯೆಯಲ್ಲಿ ಸೇನೆಗೆ ಸೇರುವುದೇ ಬಡ ಮಧ್ಯಮ ವರ್ಗದ ಯುವಕರು. ಹೊಟ್ಟೆ ತುಂಬಿದ ಶ್ರೀಮಂತರ ಮಕ್ಕಳಾಗಲಿ, ನಕಲಿ ದೇಶಪ್ರೇಮದ ಭಾಷಣ ಬಿಗಿಯುವ ಸಂಘ ಪರಿವಾರದ ಹೆತ್ತ ಕುಡಿಗಳಾಗಲಿ ಸೈನ್ಯ ಸೇರುವುದಿಲ್ಲ. ಇದು ಕಟು ವಾಸ್ತವ. ಸೈನ್ಯಕ್ಕೆ ಸೇರಿದ ಬಡ ಮಧ್ಯಮ ವರ್ಗದ ಯುವಕರಿಗೆ ಸೇವಾ ಭದ್ರತೆ ಅತಿ ಅಗತ್ಯ. ಇದನ್ನು ಕೇಂದ್ರ ಅರಿಯಬೇಕು ಎಂದಿದ್ದಾರೆ.

ಅಗ್ನಿಪಥ್ ಯೋಜನೆ ಮೂಲಕ ಸೇನೆಯಲ್ಲಿ ಕಾಲ್ಪನಿಕ ಹುದ್ದೆ ಸೃಷ್ಟಿಸುವುದು ಈ ನಾಟಕದ ಒಂದು ಭಾಗ. ಆದರೆ ಮೋದಿಯವರ ಈ ನಾಟಕ ನಂಬಲು ಯುವಕರು ಮೂರ್ಖರಲ್ಲ ಎಂದು ಕಿಡಿಕಾರಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕನ್ನಡ ಮಾತನಾಡಿದ್ದಕ್ಕೆ ಉಪನ್ಯಾಸಕನನ್ನು ಕೆಲಸದಿಂದ ಕಿತ್ತು ಹಾಕಿದ ಆರ್ ವಿ ಕಾಲೇಜು

Mangaluru Rain: ತಗ್ಗು ಪ್ರದೇಶಗಳು ಜಲಾವೃತ, ರಸ್ತೆಯಲ್ಲಿ ನಡೆಯಲು ಪರದಾಡಿದ ಜನರು, Video

ಏರ್‌ ಇಂಡಿಯಾ ವಿಮಾನ ದುರಂತ: ಕೊನೆಯ ಕ್ಷಣದ ವಿಡಿಯೋ ಮಾಡಿದ ಬಾಲಕನೇ ಪ್ರಮುಖ ಸಾಕ್ಷಿ

ಏರ್‌ ಇಂಡಿಯಾ ವಿಮಾನ ದುರಂತ: ಕೇಂದ್ರದಿಂದ ಪರಿಹಾರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

ಪದ್ಮಶ್ರೀ ಸತ್ಯನಾರಾಯಣ ಬೇಲೇರಿಯ ಕೃಷಿ ಸಾಧನೆ ಕೇರಳ ಪಠ್ಯ ಪುಸ್ತಕದಲ್ಲಿ

ಮುಂದಿನ ಸುದ್ದಿ
Show comments