Webdunia - Bharat's app for daily news and videos

Install App

ಮೃತರ ಆತ್ಮಕ್ಕೆ ವಿಭಿನ್ನವಾಗಿ ಶಾಂತಿಕೋರಿದ ಯುವಕರು

Webdunia
ಮಂಗಳವಾರ, 14 ಆಗಸ್ಟ್ 2018 (16:43 IST)
ಮೃತ ನಾಯಕರೊಬ್ಬರ ಸ್ಮರಣಾರ್ಥ ಅಲ್ಲಿನ  ಯುವಕರು ಬರೋಬ್ಬರಿ 1000 ಯುನಿಟ್ ರಕ್ತ ದಾನ ಮಾಡುವ ಮೂಲಕ ಮೃತರ ಆತ್ಮಕ್ಕೆ ವಿನೂತನವಾಗಿ ಶಾಂತಿ ಕೋರಿದ್ದಾರೆ.

ಪುರಸಭಾ  ಮಾಜಿ ಅಧ್ಯಕ್ಷರ ಅಕಾಲಿಕ ಮರಣದ ಹಿನ್ನೆಲೆ ಅವರ ಆತ್ಮಕ್ಕೆ ಶಾಂತಿಕೋರುವ ಸಲುವಾಗಿ ವಿವಿಧ ಸಂಘಟನೆಗಳು ಸೇರಿ ಬೃಹತ್ ರಕ್ತದಾನ ಶಿಬಿರ ಏರ್ಪಡಿಸಿದ್ದವು. ಸುಮಾರು 1000 ಯೂನಿಟ್ ರಕ್ತ ಸಂಗ್ರಹಿಸಿ ಮೃತರ ಆತ್ಮಕ್ಕೆ ಶಾಂತಿ ಕೋರಿದ್ದಾರೆ. ಆನೇಕಲ್ ಪಟ್ಟಣದ ಪುರಸಭಾ ಮಾಜಿ ಸದಸ್ಯ ಅಶ್ವಥ್ ನಾರಾಯಣ್ ಕೆಲವು ದಿನಗಳ ಹಿಂದೆ ಅಕಾಲಿಕ ಮರಣಕ್ಕೀಡಾಗಿದ್ದರು.

ಆನೇಕಲ್ ಪಟ್ಟಣಕ್ಕೆ ಕಾವೇರಿ ನೀರು ತರುವಲ್ಲಿ ಅಪಾರ ಶ್ರಮವಹಿಸಿದ್ದರು. ಅವರ ನೆನಪಿಗಾಗಿ ಆನೇಕಲ್ ತಾಲೂಕಿನಲ್ಲಿರುವ ಸಂಘಟನೆಗಳ ಸದಸ್ಯರು ಬೃಹತ್ ರಕ್ತದಾನ ಶಿಬಿರ ಏರ್ಪಡಿಸಿದ್ದರು. ಈ ಶಿಬಿರದಲ್ಲಿ ರೈತಪರ ಸಂಘಟನೆಗಳು, ಕನ್ನಡಪರ ಸಂಘಟನೆಗಳು, ದಲಿತ ಸಂಘಟನೆಗಳು, ಆನೇಕಲ್ ಕಾರ್ಯನಿರತ ಪತ್ರಕರ್ತರ ಸಂಘ ಸೇರಿದಂತೆ ಅನೇಕ ಅಭಿಮಾನಿಗಳು ಭಾಗವಹಿಸಿ ರಕ್ತದಾನ ಮಾಡಿದರು.

ದಾಖಲೆಯ 1000 ಕ್ಕೂ ಹೆಚ್ಚು ಯೂನಿಟ್ ರಕ್ತ ಸಂಗ್ರಹವಾಗಿದ್ದು, ಈ ರಕ್ತವನ್ನು ಅಶಕ್ತ ಬಡ ರೋಗಿಗಳಿಗೆ ನೀಡಲು ಅಶ್ವಥ್ ನಾರಾಯಣ ಅಭಿಮಾನಿಗಳು ನಿರ್ಧರಿಸಿದ್ದಾರೆ.



 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿದ್ದರಾಮಯ್ಯ ಸರ್ಕಾರಕ್ಕೆ ದಿವಾಳಿ ಮಾಡೆಲ್ ಆಫ್ ಕರ್ನಾಟಕ ಬಿರುದು ನೀಡಿ ಬಿಜೆಪಿ ವ್ಯಂಗ್ಯ

ಬಲೂಚಿಸ್ತಾನ್ ಶಾಲಾ ಬಸ್ ಸ್ಫೋಟದಲ್ಲಿ ನಾಲ್ವರು ಸಾವು: ಪಾಕ್‌ ಆರೋಪಕ್ಕೆ ಭಾರತದ ಪ್ರತ್ಯುತ್ತರ

ರಾಜ್ಯ ಡಿಜಿಪಿ ಅಲೋಕ್ ಮೋಹನ್ ನಿವೃತ್ತಿ: ಕನ್ನಡಿಗ ಎಂ.ಎ. ಸಲೀಂಗೆ ಒಲಿದ ಮಹತ್ವದ ಹುದ್ದೆ

ಯುವತಿಯ ಶವ ಸೂಟ್‌ಕೇಸ್‌ನಲ್ಲಿ ತುಂಬಿ ರೈಲಿನಿಂದ ಎಸೆದ ಪಾಪಿಗಳು: ರೈಲ್ವೆ ಸೇತುವೆ ಬಳಿ ಪತ್ತೆ

ಜೈಲಿನಲ್ಲಿರುವ ಮಾಜಿ ಐಎಎಸ್‌ ಪ್ರೊಬೇಷನರಿ ಅಧಿಕಾರಿ ಪೂಜಾ ಖೇಡ್ಕರ್‌ಗೆ ಸುಪ್ರೀಂನಿಂದ ಕೊನೆಗೂ ಬಿಗ್‌ ರಿಲೀಫ್‌

ಮುಂದಿನ ಸುದ್ದಿ
Show comments