Select Your Language

Notifications

webdunia
webdunia
webdunia
webdunia

ಪುತ್ತೂರು ಬಿಜೆಪಿ ಮುಖಂಡನ ಮಗನಿಂದ ವಂಚನೆಗೊಳಗಾದ ಯುವತಿ ಗಂಡು ಮಗುವಿಗೆ ಜನನ

ಪುತ್ತೂರು ಬಿಜೆಪಿ ನಾಯಕನ ಮಗನ ಪ್ರಕರಣ

Sampriya

ಪುತ್ತೂರು , ಸೋಮವಾರ, 30 ಜೂನ್ 2025 (17:28 IST)
ಪುತ್ತೂರು: ಬಿಜೆಪಿ ಮುಖಂಡನ ಪುತ್ರನೊಬ್ಬ ಮದುವೆಯಾಗಲು ಮದುವೆಯಾಗುವುದಾಗಿ ನಂಬಿಸಿ ಯುವತಿಯನ್ನು ಗರ್ಭವತಿ ಮಾಡಿ ಬಳಿಕ ಮದುವೆಯಾಗಲು ನಿರಾಕರಿಸಿದ ಪ್ರಕರಣ ಸಂಬಂಧ ಸಂತ್ರಸ್ತೆ ಶುಕ್ರವಾರ  ಗಂಡು ಮಗುವಿಗೆ ಜನ್ಮ ನೀಡಿದ್ದಾಳೆ. 

ಈ ಮೂಲಕ ಈ ಪ್ರಕರಣ ಹೊಸ ತಿರುವು ಪಡೆದುಕೊಂಡಿದೆ. ನಾಪತ್ತೆಯಾದ ಆರೋಪಿಯ ಪತ್ತೆಗೆ ಪೊಲೀಸರು ಶೋಧ ನಡೆಸುತ್ತಿರುವ ನಡುವೆಯೇ, ಸಂಕೀರ್ಣ ಪ್ರಕರಣದ ರಹಸ್ಯ ಬಯಲಿಗೆಳೆಯಲು ಪೊಲೀಸರು ಮಗುವಿನ ಡಿಎನ್‌ಎ ಪರೀಕ್ಷೆಯ ಮೊರೆ ಹೋಗಲಿದ್ದಾರೆ.

ಎಂಜಿನಿಯರಿಂಗ್‌ ಓದುತ್ತಿರುವ ಕೃಷ್ಣ ಜೆ.ರಾವ್‌ ವಿರುದ್ಧ ಸಂತ್ರಸ್ತೆ ಯುವತಿ ಪುತ್ತೂರು ಮಹಿಳಾ ಠಾಣೆಯಲ್ಲಿ ದೂರು ನೀಡಿದ್ದು, ತನ್ನನ್ನು ಆತ ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿದ್ದಾನೆ ಎಂದಿದ್ದಾನೆ. ಗರ್ಭವತಿ ಎಂದು ತಿಳಿದ್ಮೇಲೆ ಆತ ಮದುವೆಯಾಗಲು ನಿರಾಕರಿಸಿ ವಂಚಿಸಿದ್ದಾನೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ. 

ಪೊಲೀಸರು ಆರೋಪಿಗಾಗಿ ಶೋಧ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಈ ನಡುವೆ, ಶುಕ್ರವಾರ ರಾತ್ರಿ ಸಂತ್ರಸ್ತ ಯುವತಿ ಗಂಡು ಮಗುವಿಗೆ ಜನ್ಮ ನೀಡಿದ್ದು, ತಾಯಿ- ಮಗು ಆರೋಗ್ಯವಾಗಿದ್ದಾರೆ. 


Share this Story:

Follow Webdunia kannada

ಮುಂದಿನ ಸುದ್ದಿ

ಲಿವ್‌ ಇನ್‌ ಸಂಗಾತಿಯನ್ನು ಕೊಂದು ಬಿಬಿಎಂಪಿ ಕಸದ ಲಾರಿಗೆ ಎಸೆದ ಪ್ರಿಯಕರ