Webdunia - Bharat's app for daily news and videos

Install App

ಅನುಮಾನಾಸ್ಪದ ರೀತಿಯಲ್ಲಿ ಯುವತಿ ಸಾವು: ತಂದೆಯಿಂದಲೇ ಮರ್ಯಾದಾ ಹತ್ಯೆ!

Webdunia
ಭಾನುವಾರ, 20 ಆಗಸ್ಟ್ 2023 (10:46 IST)
ಚಿಕ್ಕಬಳ್ಳಾಪುರ : ಆಗಸ್ಟ್ 14 ರಂದು 22 ವರ್ಷದ ಪದವಿ ವಿದ್ಯಾರ್ಥಿನಿ ಮನೆಯಲ್ಲಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದು ತಮ್ಮ ಮಗಳು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ತಂದೆ ದೂರು ನೀಡಿದ್ದಾನೆ.

ಸಂಬಂಧಿಕರು, ಇಲ್ಲ ಇದು ಕೊಲೆ. ನಮ್ಮ ಮನೆ ಮಗಳಿಗೆ ನ್ಯಾಯ ನೀಡಿ, ಆತ್ಮಕ್ಕೆ ಶಾಂತಿ ಕೊಡಿಸಿ ಎಂದು ಈಗ ಪೊಲೀಸರ ಮೊರೆ ಹೋಗಿದ್ದಾರೆ.

ಮಗಳನ್ನೇ ತಂದೆ ಕೊಲೆ ಮಾಡಿರುವ ಆರೋಪ ಕೇಳಿ ಬಂದಿರೋದು ಚಿಕ್ಕಬಳ್ಳಾಪುರ ಜಿಲ್ಲೆಯ ಮಂಚೇನಹಳ್ಳಿ ಬಳಿಯ ವರವಣಿ ಗ್ರಾಮದಲ್ಲಿ. ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಯುವತಿ ಶೀಲಾ (22) ವರವಣಿ ಗ್ರಾಮದ ನಿವಾಸಿ.

ಗ್ರಾಮದ ರವಿಶಂಕರ್ ಹಾಗೂ ಜಯಂತಮ್ಮ ದಂಪತಿಯ ಒಬ್ಬಳೇ ಮಗಳು. ಆದರೆ ಶೀಲಾ ಕಳೆದ ಆಗಸ್ಟ್ 14 ರಂದು ಮನೆಯಲ್ಲಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದು, ಮೃತಳ ತಂದೆ ರವಿಶಂಕರ್, ತನ್ನ ಮಗಳು ಹುಷಾರಿಲ್ಲದ ಕಾರಣ ಕಾಲೇಜಿಗೆ ಹೋಗದೆ ಮನೆಯಲ್ಲಿಯೇ ಇದ್ದು ಅನಾರೋಗ್ಯದ ಹಿನ್ನೆಲೆಯಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ದೂರು ನೀಡಿದ್ದಾನೆ.

ಈ ಸಂಬಂಧ ಐಪಿಸಿ ಸೆಕ್ಷನ್ 174 ಸಿ ಅನುಮಾನಾಸ್ಪದ ಸಾವು ಪ್ರಕರಣ ದಾಖಲಿಸಿಕೊಂಡಿರುವ ಮಂಚೇನಹಳ್ಳಿ ಪೊಲೀಸರು ತನಿಖೆ ನಡೆಸಿದ್ದಾರೆ. ಆದರೆ ಈ ಮಧ್ಯೆ ಶೀಲಾ ಸಾವಿನ ಬಗ್ಗೆ ಸಂಬಂಧಿಕರಿಗೆ ಸಾಕಷ್ಟು ಅನುಮಾನಗಳು ಮೂಡಿವೆ. ಹೀಗಾಗಿ ಮೃತ ಶೀಲಾಳ ತಾಯಿ ಜಯಂತಮ್ಮನವರ ಸಹೋದರಿಯರು ಶೀಲಾ ಆತ್ಮಹತ್ಯೆ ಮಾಡಿಕೊಂಡಿಲ್ಲ, ಬದಲಾಗಿ ಆಕೆಯನ್ನು ತಂದೆಯೇ ಹಲ್ಲೆ ಮಾಡಿ ಕೊಲೆ ಮಾಡಿ ನೇಣು ಹಾಕಿದ್ದಾನೆ ಎಂದು ಗಂಭೀರ ಆರೋಪ ಮಾಡಿದ್ದಾರೆ.

ಶೀಲಾ ಯಾರನ್ನೋ ಲವ್ ಮಾಡುತ್ತಿದ್ದಳು ಎನ್ನುವ ಅನುಮಾನದ ಮೇರೆಗೆ ಪದೇ ಪದೆ ಮಗಳಿಗೆ ಹೊಡೆಯೋದು ಬಡಿಯೋದು ಮಾಡಿ ಕಿರುಕುಳ ಸಹ ಕೊಡುತ್ತಿದ್ದ. ಇದೇ ವಿಚಾರದಲ್ಲಿ ಮಗಳು ಕದ್ದು ಮುಚ್ಚಿ ಫೋನ್ ಬಳಸುತ್ತಿದ್ದುದನ್ನು ಕಂಡು ಆಕೆಯ ಮೇಲೆ ಹಲ್ಲೆ ಮಾಡಿ ಕೊಲೆ ಮಾಡಿದ್ದಾನೆ. ನಮಗೆ ನ್ಯಾಯ ಕೊಡಿಸಿ ಎಂದು ಮೃತಳ ಸಂಬಂಧಿಕರು ಈಗ ಚಿಕ್ಕಬಳ್ಳಾಪುರ ವಿಭಾಗದ ಡಿವೈಎಸ್ಪಿ ಮೊರೆ ಹೋಗಿದ್ದಾರೆ. ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿಗಳ ಕಚೇರಿಗೂ ಪತ್ರ ಬರೆದು ನ್ಯಾಯಕ್ಕಾಗಿ ಅಂಗಲಾಚಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments