Webdunia - Bharat's app for daily news and videos

Install App

ವಿದ್ಯಾಭ್ಯಾಸಕ್ಕಾಗಿ ಪ್ರೀತಿಗೆ ಗುಡ್‌ಬೈ ಹೇಳಿದ ಯುವತಿ: ಕೋಪಗೊಂಡ ಯುವಕ ಮಾಡಿದ್ದೇನು

Sampriya
ಶನಿವಾರ, 4 ಜನವರಿ 2025 (18:06 IST)
ಬಳ್ಳಾರಿ: ವಿದ್ಯಾಭ್ಯಾಸಕ್ಕಾಗಿ ಪ್ರೀತಿಗೆ ಬ್ರೇಕ್ ಹಾಕುವ ಎಂದ ಯುವತಿ ಮೇಲೆ ಹಲ್ಲೆ ಮಾಡಿದ ಬಳಿಕ ರೈಲಿಗೆ ತಲೆ ಕೊಟ್ಟು ಯುವಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬಳ್ಳಾರಿ ಜಿಲ್ಲೆಯ ಸಂಡೂರಿನ ಚರ್ಚ್ ಶಾಲೆ ರಸ್ತೆಯಲ್ಲಿ ನಡೆದಿದೆ.

ಭಗ್ನ ಪ್ರೇಮಿಯೊಬ್ಬ ತಾನು ಪ್ರೀತಿಸಿದ ಯುವತಿ ಹಾಗೂ ಮತ್ತವರ ಮನೆಯವರ ಮೇಲೆ ಹಲ್ಲೆ ಮಾಡಿ, ಬಳಿಕ ತಾನೂ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಹೊಸಪೇಟೆ ತಾಲೂಕಿನ ಪಿ.ಕೆ.ಹಳ್ಳಿ ಮೂಲದ ನವೀನ್ ಕುಮಾರ್‌ ಹಲ್ಲೆ ಮಾಡಿ, ಆತ್ಮಹತ್ಯೆ ಮಾಡಿಕೊಂಡಿರುವಾತ.

ನವೀನ್ ಕುಮಾರ್ ಪ್ರೇಯಸಿ ಸೇರಿ ಕುಟುಂಬದ ಮೂವರ ಮೇಲೆ ಮಚ್ಚಿನಿಂದ ಹಲ್ಲೆ ಮಾಡಿದ್ದ.
ಯುವತಿ ಮತ್ತವರ ತಾಯಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಯುವತಿಯ ಅಣ್ಣನಿಗೆ ಬಲವಾಗಿ ಮಚ್ಚಿನೇಟು ಬಿದ್ದಿದೆ. ಚಿಕಿತ್ಸೆಗಾಗಿ ಮೂವರನ್ನೂ ತೋರಣಗಲ್ಲು ಜಿಂದಾಲ್ ಸಂಜೀವಿನಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಆರೋ‍ಪಿ ಪತ್ತೆಗೆ ಹುಡುಕಾಟ ನಡೆಸಿದಾಗ ಆರೋಪಿ ಯಶವಂತ ನಗರ ಬಳಿಯ ರೈಲೆ ಹಳಿ ಮೇಲೆ ನವೀನ್ ಮೃತದೇಹ ಪತ್ತೆಯಾಗಿದೆ.

ಯುವತಿ ಮತ್ತು ಆರೋಪಿ ನವೀನ್ ಹಲವು ವರ್ಷಗಳಿಂದ ಪರಸ್ಪರ ಪ್ರೀತಿಸ್ತಿದ್ದರು. ಬಾಳೆಹಣ್ಣು ವ್ಯಾಪಾರ ಮಾಡ್ತಿದ್ದ ನವೀನ್ ಮತ್ತು ಯುವತಿ ನಡುವೆ ಕಾಲೇಜು ಓದುವಾಗಲೇ ಪ್ರೇಮಾಂಕುರವಾಗಿತ್ತು. ಪ್ರೀತಿಸುವಾಗಲೇ ಪರಸ್ಪರ ಹಾರ ಬದಲಾಯಿಸಿಕೊಂಡಿದ್ದರು. ಎಂಎಸ್ಸಿ ಓದುವ ಹಿನ್ನೆಲೆ ಪ್ರೀತಿ ಪ್ರೇಮಕ್ಕೆ ಬ್ರೇಕ್ ಹಾಕೋದಾಗಿ ಯುವತಿ ಹೇಳಿದ್ದಳು. ಇದರಿಂದ ಅಸಮಾಧಾನಗೊಂಡಿದ್ದ ಪಾಪಿನಾಯಕನಹಳ್ಳಿ ಮೂಲದ ನವೀನ್ ನಿನ್ನೆ ಸಂಜೆ ಸಂಡೂರಿಗೆ ಬಂದು ಪ್ರೇಯಸಿ ಮನೆಯ ಮುಂದೆ ಗಲಾಟೆ ಮಾಡಿದ್ದಾನೆ.

ಈ ವೇಳೆ ಗಲಾಟೆ ನಡೆದು ಯುವತಿ ಮತ್ತವರ ತಾಯಿ ಮೇಲೆ ಹಲ್ಲೆ ಮಾಡಿದ್ದಾನೆ. ಬಿಡಿಸಲು ಬಂದ ಪ್ರೇಯಸಿಯ ಸಹೋದರನ ಮೇಲೂ ಮಚ್ಚು ಬೀಸಿದ್ದಾನೆ. ಗಲಾಟೆ ಜೋರಾಗುತ್ತಿದ್ದಂತೆ ಅಲ್ಲಿಂದ ಓಡಿ ಹೋಗಿದ್ದ ನವೀನ್. ಬಳಿಕ ಇಂದು ಬೆಳಗ್ಗೆ ಶವವಾಗಿ ಪತ್ತೆಯಾಗಿದ್ದಾನೆ. ಸಂಡೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾಳೆಯಿಂದ ಧರ್ಮಸ್ಥಳದಲ್ಲಿ ಹೂತಿಟ್ಟ ಶವಗಳ ಬಗ್ಗೆ ಎಸ್ಐಟಿ ತನಿಖೆ ಶುರು

ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಿ: ಎನ್.ರವಿಕುಮಾರ್

Nimisha Priya: ಅಂತೂ ಮರಣದಂಡನೆಯಿಂದ ಪಾರಾದ ನರ್ಸ್ ನಿಮಿಷ ಪ್ರಿಯಾ

ಧರ್ಮಸ್ಥಳ ಪ್ರಕರಣದ ಎಸ್ಐಟಿ ತಂಡದ ಬಗ್ಗೆ ಜಿ ಪರಮೇಶ್ವರ್ ಮಹತ್ವದ ಹೇಳಿಕೆ

ವ್ಯಾಪಾರಿಗಳಿಗೆ ನೋಟಿಸ್ ನೀಡಿರುವುದರ ಹಿಂದೆ ಕಾಂಗ್ರೆಸ್ ಷಡ್ಯಂತ್ರವಿದೆ ಎಂದ ಸಿಟಿ ರವಿ

ಮುಂದಿನ ಸುದ್ದಿ
Show comments