Webdunia - Bharat's app for daily news and videos

Install App

ನಿಮ್ಮ ತಂದೆ ಈ ಶತಮಾನದ ನಿಜವಾದ ಕಟ್ಟಪ್ಪ: ಪ್ರಿಯಾಂಕ್‌ ಖರ್ಗೆಗೆ ಆರ್‌ ಅಶೋಕ್‌ ಕೌಂಟರ್‌

Sampriya
ಭಾನುವಾರ, 5 ಜನವರಿ 2025 (16:18 IST)
ಬೆಂಗಳೂರು: ಪಾಪ ನಿಮ್ಮ ತಂದೆಯವರು ಈ ಇಳಿ ವಯಸ್ಸಿನಲ್ಲೂ ಆ ಕಾಮಿಡಿ ಪೀಸ್ ನ ಮಾನ ಉಳಿಸಲು ರಾಜ್ಯದಲ್ಲಿ ಸಿಗಬಹುದಾದ ಅಧಿಕಾರವನ್ನು ತ್ಯಾಗ ಮಾಡಿ ಅಲ್ಲಿ ಆ ಕಾಮಿಡಿ ಪೀಸ್ ಗೆ ರಕ್ಷಣೆ ಕೊಡುತ್ತಿದ್ದಾರಲ್ಲ, ಈ ಶತಮಾನದ ನಿಜವಾದ ಕಟ್ಟಪ್ಪ ಅಂದರೆ ಅದು ನಿಮ್ಮ ತಂದೆಯವರೇ ಎಂದು ಪ್ರಿಯಾಂಕ್‌ ಖರ್ಗೆಗೆ ವಿಪಕ್ಷ ನಾಯಕ ಆರ್‌ ಅಶೋಕ್ ಪೋಸ್ಟ್ ಮಾಡಿ ಕೌಂಟರ್ ನೀಡಿದ್ದಾರೆ.

ಬಿಜೆಪಿಯಲ್ಲಿ ಸಹಮತ, ಸಹಬಾಳ್ವೆ, ಸಮಾಧಾನ ಯಾವುದೂ ಇಲ್ಲದೆ ತಮ್ಮ ಹುಳುಕು ಮುಚ್ಚಿಕೊಳ್ಳಲು "ಪ್ರಿಯಾಂಕ್ ಖರ್ಗೆ" ಹೆಸರಿಗೆ ಜೋತು ಬಿದ್ದಿದೆ ಎಂಬ ಪ್ರಿಯಾಂಕ್ ಖರ್ಗೆ ಹೇಳಿಕೆಗೆ ಆರ್‌ ಅಶೋಕ್‌ ಅವರು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಬರೆದು ತಿರುಗೇಟು ನೀಡಿದ್ದಾರೆ.

ಸ್ವಾಮಿ ಪ್ರಿಯಾಂಕ್‌ ಖರ್ಗೆಸ ಅವರೇ, ಭಾರತೀಯತೆಯೂ ಇಲ್ಲದ, ರಾಷ್ಟ್ರೀಯತೆಯೂ ಇಲ್ಲದ ನಿಮ್ಮ ನಕಲಿ ಗಾಂಧಿ ಕಾಂಗ್ರೆಸ್ ಪಕ್ಷ ಕಳೆದ ಹತ್ತು ವರ್ಷಗಳಿಂದ ಈ ದೇಶದ ಅತೀ ದೊಡ್ಡ ಕಾಮಿಡಿ ಸಿನಿಮಾ ಆಗಿದೆ. ಈ ಸೂಪರ್ ಹಿಟ್ ಕಾಮಿಡಿ ಸಿನಿಮಾದ ಸ್ಟಾರ್ ಕಾಮಿಡಿಯನ್ ಯಾರು ಎಂದು ನಾನು ಪ್ರತ್ಯೇಕವಾಗಿ ಹೇಳಬೇಕಾಗಿಲ್ಲ.

ಪಾಪ ನಿಮ್ಮ ತಂದೆಯವರು ಈ ಇಳಿ ವಯಸ್ಸಿನಲ್ಲೂ ಆ ಕಾಮಿಡಿ ಪೀಸ್ ನ ಮಾನ ಉಳಿಸಲು ರಾಜ್ಯದಲ್ಲಿ ಸಿಗಬಹುದಾದ ಅಧಿಕಾರವನ್ನು ತ್ಯಾಗ ಮಾಡಿ ಅಲ್ಲಿ ಆ ಕಾಮಿಡಿ ಪೀಸ್ ಗೆ ರಕ್ಷಣೆ ಕೊಡುತ್ತಿದ್ದಾರಲ್ಲ, ಈ ಶತಮಾನದ ನಿಜವಾದ ಕಟ್ಟಪ್ಪ ಅಂದರೆ ಅದು ನಿಮ್ಮ ತಂದೆಯವರೇ.

ಅಂದಹಾಗೆ ಮೊನ್ನೆ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆಯಲ್ಲಿ 35 ಶಾಸಕರು ಸಭೆ ಸೇರಿದ್ದರಂತಲ್ಲ, ಅಲ್ಲಿ ತಾವು ಇದ್ದರೋ? ಅಥವಾ ಆತ್ಮಹತ್ಯೆಗೆ ಕಾರಣವಾದರೂ ಸರಿ, ಕೊಲೆ ಮಾಡಿದರೂ ಸರಿ, ಎಐಸಿಸಿ ಅಧ್ಯಕ್ಷರ ಕೋಟಾದಲ್ಲಿ ತಮ್ಮ ಕುರ್ಚಿ ಮಾತ್ರ ಸುಭದ್ರ ಎಂದು ಯಾವ ಬಣಕ್ಕೂ ಸೇರದೆ ತಟಸ್ಥರಾಗಿರುವ ನಿರ್ಧಾರ ಮಾಡಿದ್ದೀರೋ?<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Air India Plane Crash: ಮೃತದೇಹಗಳನ್ನು ಗುರುತಿಸುವುದು ಹೇಗೆ ಇಲ್ಲಿದೆ ಪ್ರಕ್ರಿಯೆ

ಇದ್ದಕ್ಕಿದ್ದಂತೆ ಇಂದು ಚಿನ್ನಸ್ವಾಮಿ ಕಾಲ್ತುಳಿತ ವಿರೋಧಿಸಿ ಬಿಜೆಪಿ ಪ್ರತಿಭಟನೆ ಹಿಂಪಡೆದಿದ್ದೇಕೆ

Indore: ರಾಜ ರಘುವಂಶಿ ಜೊತೆ ಇನ್ನೊಬ್ಬ ಮಹಿಳೆಯ ಹತ್ಯೆಗೆ ಸೋನಂ ಆಂಡ್ ಗ್ಯಾಂಗ್ ಸ್ಕೆಚ್ ಹಾಕಿದ್ದೇಕೆ

Air India Plane crash: ಜೀವ ಉಳಿಸಿಕೊಳ್ಳಲು ಹಾಸ್ಟೆಲ್ ಕಟ್ಟಡದಿಂದ ಹಾರಿದ ವಿದ್ಯಾರ್ಥಿಗಳು video

Air India Plane crash: ವಿಮಾನ ದುರಂತದಲ್ಲಿ ಮನುಷ್ಯರೇ ಭಸ್ಮವಾದರೂ ಇದೊಂದು ವಸ್ತು ಹಾಗೆಯೇ ಇತ್ತು video

ಮುಂದಿನ ಸುದ್ದಿ
Show comments