Webdunia - Bharat's app for daily news and videos

Install App

ಹಣಕ್ಕಾಗಿ ಪೊಲೀಸ್ ಪೇದೆಯ ಮೇಲೆ ಹಲ್ಲೆ ಮಾಡಿದ ಯುವಕರು

Webdunia
ಬುಧವಾರ, 2 ಜನವರಿ 2019 (09:16 IST)
ಶಿವಮೊಗ್ಗ : ಗಾಂಜಾ ಮತ್ತಿನಲ್ಲಿದ್ದ ಯುವಕರಿಬ್ಬರು ಹಣಕ್ಕಾಗಿ ಪೊಲೀಸ್ ಪೇದೆಯೊಬ್ಬರ  ಮೇಲೆ ಮಾರಣಾಂತಿಕವಾಗಿ ಹಲ್ಲೆ ಮಾಡಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಬಸ್ ನಿಲ್ದಾಣದಲ್ಲಿ ನಡೆದಿದೆ.


ಮೂಲತಃ ಬಾಗಲಕೋಟೆ ಜಿಲ್ಲೆಯವರಾದ ಮಂಜುನಾಥ್ ಎಂಬುವವರು ಹಲ್ಲೆಗೊಳಗಾದ ಪೊಲೀಸ್ ಪೇದೆಯಾಗಿದ್ದು, ಇವರು ಕುಂಸಿ ಠಾಣೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದರು. ಇವರು ಮಂಗಳವಾರ ರಾತ್ರಿ ಶಿವಮೊಗ್ಗ ಬಸ್ ನಿಲ್ದಾಣದಲ್ಲಿದ್ದಾಗ ಇಬ್ಬರು ಯುವಕರು ಮಂಜುನಾಥ್ ಬಳಿ ಬಂದು ಹಣ ಕೇಳಿದ್ದಾರೆ. ಹಣ ನೀಡುವುದಿಲ್ಲ ಎಂದಿದ್ದಕ್ಕೆ ಕೋಪಗೊಂಡ ಯುವಕರು ಕುತ್ತಿಗೆ, ಕೈ- ಕಾಲಿಗೆ ಬ್ಲೇಡ್ ನಿಂದ ಕೊಯ್ದು ಅಲ್ಲಿಂದ ಪರಾರಿಯಾಗಿದ್ದಾರೆ.


ಅಲ್ಲಿದ್ದವರು ತಕ್ಷಣ ಗಾಯಗೊಂಡ ಮಂಜುನಾಥ್ ಅವರನ್ನು ಮೆಗಾನ್ ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಈ ಘಟನೆ ಸಂಬಂಧ ದೊಡ್ಡಪೇಟೆ ಠಾಣೆ ಪೊಲೀಸರು ಪ್ರತ್ಯಕ್ಷದರ್ಶಿಗಳ ಮಾಹಿತಿಯ ಮೇರೆಗೆ ಆಟೋ ಚಾಲಕ ನದೀಂ ಹಾಗೂ ನಜೀರ್ ಎಂಬ ಇಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Kodi Seer: ಕೊವಿಡ್ ಬಗ್ಗೆ ಅಪಾಯಕಾರಿಯಾಗುತ್ತಾ: ಕೋಡಿ ಶ್ರೀಗಳ ಸ್ಪೋಟಕ ಭವಿಷ್ಯ

Mysore Pak: ಪಾಕಿಸ್ತಾನದ ಮೇಲಿನ ಸಿಟ್ಟಿಗೆ ಮೈಸೂರ್ ಪಾಕ್ ಗತಿ ಏನಾಗಿದೆ ನೋಡಿ

Gold price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಬೆಂಗಳೂರಿನಲ್ಲಿ ಬಾಳೆ ಎಲೆ ರೇಟು ಬಲು ದುಬಾರಿ

Hebbal Accident: ಹೆಬ್ಬಾಳದಲ್ಲಿ ತಡರಾತ್ರಿ ಸರಣಿ ಅಪಘಾತ: ಲಾರಿ ಚಾಲಕ ದುರ್ಮರಣ

ಮುಂದಿನ ಸುದ್ದಿ
Show comments