Webdunia - Bharat's app for daily news and videos

Install App

ಹಣಕ್ಕಾಗಿ ಪೊಲೀಸ್ ಪೇದೆಯ ಮೇಲೆ ಹಲ್ಲೆ ಮಾಡಿದ ಯುವಕರು

Webdunia
ಬುಧವಾರ, 2 ಜನವರಿ 2019 (09:16 IST)
ಶಿವಮೊಗ್ಗ : ಗಾಂಜಾ ಮತ್ತಿನಲ್ಲಿದ್ದ ಯುವಕರಿಬ್ಬರು ಹಣಕ್ಕಾಗಿ ಪೊಲೀಸ್ ಪೇದೆಯೊಬ್ಬರ  ಮೇಲೆ ಮಾರಣಾಂತಿಕವಾಗಿ ಹಲ್ಲೆ ಮಾಡಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಬಸ್ ನಿಲ್ದಾಣದಲ್ಲಿ ನಡೆದಿದೆ.


ಮೂಲತಃ ಬಾಗಲಕೋಟೆ ಜಿಲ್ಲೆಯವರಾದ ಮಂಜುನಾಥ್ ಎಂಬುವವರು ಹಲ್ಲೆಗೊಳಗಾದ ಪೊಲೀಸ್ ಪೇದೆಯಾಗಿದ್ದು, ಇವರು ಕುಂಸಿ ಠಾಣೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದರು. ಇವರು ಮಂಗಳವಾರ ರಾತ್ರಿ ಶಿವಮೊಗ್ಗ ಬಸ್ ನಿಲ್ದಾಣದಲ್ಲಿದ್ದಾಗ ಇಬ್ಬರು ಯುವಕರು ಮಂಜುನಾಥ್ ಬಳಿ ಬಂದು ಹಣ ಕೇಳಿದ್ದಾರೆ. ಹಣ ನೀಡುವುದಿಲ್ಲ ಎಂದಿದ್ದಕ್ಕೆ ಕೋಪಗೊಂಡ ಯುವಕರು ಕುತ್ತಿಗೆ, ಕೈ- ಕಾಲಿಗೆ ಬ್ಲೇಡ್ ನಿಂದ ಕೊಯ್ದು ಅಲ್ಲಿಂದ ಪರಾರಿಯಾಗಿದ್ದಾರೆ.


ಅಲ್ಲಿದ್ದವರು ತಕ್ಷಣ ಗಾಯಗೊಂಡ ಮಂಜುನಾಥ್ ಅವರನ್ನು ಮೆಗಾನ್ ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಈ ಘಟನೆ ಸಂಬಂಧ ದೊಡ್ಡಪೇಟೆ ಠಾಣೆ ಪೊಲೀಸರು ಪ್ರತ್ಯಕ್ಷದರ್ಶಿಗಳ ಮಾಹಿತಿಯ ಮೇರೆಗೆ ಆಟೋ ಚಾಲಕ ನದೀಂ ಹಾಗೂ ನಜೀರ್ ಎಂಬ ಇಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments