Webdunia - Bharat's app for daily news and videos

Install App

ಪ್ರೀತಿಗೆ ವಿರೋಧಿಸಿದ್ದರಿಂದ ಮನನೊಂದ ಯುವಕ ಆತ್ಮಹತ್ಯೆ

Webdunia
ಶನಿವಾರ, 13 ಸೆಪ್ಟಂಬರ್ 2014 (10:40 IST)
ಜಿಲ್ಲೆ ಭಾಲ್ಕಿ ತಾಲೂಕಿನ ಸಿಕಂದರವಾಡಿ ಗ್ರಾಮದಲ್ಲಿ  20 ವರ್ಷ ವಯಸ್ಸಿನ ಕಿರಣ್ ತುಳಸಿರಾಂ ಎಂಬ ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ತಾನು ಪ್ರೀತಿಸಿದ ಯುವತಿಯನ್ನು ಮದುವೆಯಾಗಲು ಪೋಷಕರು ತೀವ್ರ ವಿರೋಧಿಸಿದ್ದರಿಂದ ಮಾನಸಿಕವಾಗಿ ನೊಂದಿದ್ದ ಯುವಕ ನೇಣು ಹಾಕಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ಆತ್ಮಹತ್ಯೆಗೆ ಮುನ್ನ ಯುವಕ ಡೆತ್ ನೋಟ್ ಕೂಡ ಬರೆದಿಟ್ಟಿದ್ದು, ತನ್ನ ಸಾವಿಗೆ ಕಾರಣರಾದವರ 8 ಜನರ ಹೆಸರನ್ನು ಡೆತ್‌ನೋಟ್‌ನಲ್ಲಿ ಉಲ್ಲೇಖಿಸಿದ್ದಾನೆ.

ಸುಮಾರು 2-3 ವರ್ಷಗಳಿಂದ ತಾನು ಯುವತಿಯನ್ನು ಪ್ರೀತಿ ಮಾಡುತ್ತಿದ್ದುದಾಗಿಯೂ, ಯುವತಿಯ ಮನೆಯವರು ಸೇರಿದಂತೆ ತನ್ನ ಪೋಷಕರು  ಪ್ರೀತಿಗೆ  ವಿರೋಧ ವ್ಯಕ್ತಪಡಿಸಿದ್ದಾರೆಂದು ಡೆತ್ ನೋಟ್‌ನಲ್ಲಿ ಬರೆದಿಟ್ಟಿದ್ದು, ತನ್ನ ಪ್ರೀತಿಗೆ ಅಡ್ಡಿಯಾದ 8 ಜನರ ಹೆಸರನ್ನು ಉಲ್ಲೇಖಿಸಿದ್ದಾನೆ.

ಪೊಲೀಸರು ಈ 8 ಜನರನ್ನು ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸಿದ್ದಾರೆ.  ಯುವಕ ಗ್ರಾಮದ ಹೊರವಲಯದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದು ಕಟಕಚಿಂಚೊಳ್ಳಿ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ. 
 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments