Webdunia - Bharat's app for daily news and videos

Install App

ಯೂತ್ ಕಾಂಗ್ರೆಸ್ ಗಲಾಟೆ- ಟಗರು-ಬಂಡೆ ನಡುವೆ ವಾರ್ ಶುರು..!

Webdunia
ಶನಿವಾರ, 3 ಜುಲೈ 2021 (19:02 IST)
ಬೆಂಗಳೂರು: ಪದಾಧಿಕಾರಿಗಳ ಆಯ್ಕೆ ವಿಚಾರ ಆಯ್ತು, ಯೂತ್ ಕಾಂಗ್ರೆಸ್ ಗಲಾಟೆ ಆಯ್ತು. ಇದೀಗ ವಲಸೆ ನಾಯಕರ ವಿಚಾರವಾಗಿ ಟಗರು-ಬಂಡೆ ನಡುವೆ ವಾರ್ ಶುರುವಾದಂತಿದೆ. ಮೈತ್ರಿ ಸರ್ಕಾರವನ್ನ ಕೆಡವಿ ಹೋಗಿದ್ದವರಿಗೆ ಡಿ.ಕೆ ಶಿವಕುಮಾರ್ ಮತ್ತೆ ಗಾಳ ಹಾಕಿದ್ದಾರೆ. ಅದಕ್ಕೆ ಸಿದ್ದರಾಮಯ್ಯ ಡಿಚ್ಚಿ ಕೊಟ್ಟಿದ್ದಾರೆ.ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರವನ್ನ ಕೆಡವಿದವರ ಮೇಲೆ ಡಿ.ಕೆ ಶಿವಕುಮಾರ್‌ಗೆ ಇದ್ದಕ್ಕಿದ್ದಂತೆ ಪ್ರೀತಿ ಹುಟ್ಟಿದಂತಿದೆ. ಕಾಂಗ್ರೆಸ್ ಪಕ್ಷದ ಮೇಲೆ ನಂಬಿಕೆ ಇರೋರು ಯಾರ್ ಬೇಕಾದ್ರೂ ಪಕ್ಷಕ್ಕೆ ಬರಬಹುದು. ಅರ್ಜಿ ಹಾಕಿದ್ಮೇಲೆ ಸ್ಟ್ಯಾಂಡ್ ತೆಗೆದುಕೊಳ್ತೇವೆ ಎಂದ್ರು. 17 ಜನ ವಲಸೆ ನಾಯಕರೂ ಕೂಡ ಅರ್ಜಿ ಹಾಕಬಹುದಾ ಅನ್ನೋದಕ್ಕೆ, ಯಾರು ಬೇಕಾದ್ರೂ ಅರ್ಜಿ ಹಾಕಬಹುದು. ರಾಜಕೀಯದಲ್ಲಿ ಏನುಬೇಕಾದರು ಆಗಬಹುದು ಅಂತಾ ವಲಸಿಗರಿಗೆ ಪರೋಕ್ಷವಾಗಿ ಆಹ್ವಾನ ನೀಡಿದರು.ಇನ್ನು ಡಿ.ಕೆ ಶಿವಕುಮಾರ್ ಹೇಳಿಕೆಗೆ ಸಿಎಲ್‌ಪಿ ನಾಯಕ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. ಪಕ್ಷ ಬಿಟ್ಟು ಹೋದವರನ್ನ ಕರೆಯಲ್ಲ ಅಂತಾ ಖಡಾಖಂಡಿತವಾಗಿ ಮಾತನಾಡಿದ್ದಾರೆ. ಪಕ್ಷ ಬಿಟ್ಟು ಹೋದ 14  ಜನರನ್ನ ಮತ್ತೆ ಬನ್ನಿ ಅಂತ ಡಿ.ಕೆ ಶಿವಕುಮಾರ್ ಹೇಳಿದ್ದಾರಾ..? ಅವ್ರು ಪಕ್ಷ ತೊರೆದು ಹೋದವ್ರು. ನಾನು ಬನ್ನಿ ಎಂದು ಹೇಳಲ್ಲ. ಅಧ್ಯಕ್ಷರ ಜತೆನೂ ಮಾತನಾಡ್ತೀನಿ ನಡೀರಿ ಅಂತ ಸಿದ್ದರಾಮಯ್ಯ ಗರಂ ಆದರೂ ಇದನ್ನೆಲ್ಲಾ ನೋಡುತ್ತಾ ಇದ್ದಾರೆ. ಡಿಕೆಶಿ-ಸಿದ್ದು ನಡುವೆ ಕೋಲ್ಡ್‌ವಾರ್ ನಿಲ್ಲೋದೇ ಇಲ್ಲ ಅನ್ಸುತ್ತೆ. ಆ ಕಡೆ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಕೂಡ, ಆಗಸ್ಟ 17 ಜನ ನನ್ನ ಕಾಪಾಡಿದರು ಅಂತಾ ವಲಸಿಗರ ಪರವಾಗಿ ಮೃಧುವಾಗಿ ಮಾತನಾಡೋಕೆ ಶುರು ಮಾಡಿದ್ದಾರೆ. ಇದ್ರ ಬೆನ್ನಲ್ಲೇ ಡಿ.ಕೆ ಶಿವಕುಮಾರ್ ಕೂಡ ಅರ್ಜಿ ಆಹ್ವಾನ ಮಾಡಿರೋದನ್ನ ನೋಡಿದ್ರೆ, ಇವ್ರ ಲೆಕ್ಕಾಚಾರಗಳೇ ಬೇರೆ ಅನ್ನೋದು ಕನ್ಫರ್ಮ್ ಆಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆನ್‌ಲೈನ್‌ನಲ್ಲಿ ಮಗಳ ಮದುವೆ ನೋಡಿ ಕಣ್ಣೀರಿಟ್ಟ ಹೆತ್ತವರು: Video

ಕರ್ನಾಟಕ ಉದ್ಯಾನವನ ತಿದ್ದುಪಡಿ ಕಾಯ್ದೆ ವಿರುದ್ಧ ಲಾಲ್ ಬಾಗ್‌ನಲ್ಲಿ ಬೃಹತ್ ಪ್ರತಿಭಟನೆ

ನಂಜೊತೆ ಬನ್ನಿ ಎಂದು ಮಹಿಳೆಯನ್ನು ಕರೆದೊಯ್ದ ಬೀದಿ ನಾಯಿ: ಕೊನೆಗೆ ತೋರಿಸಿದ್ದು ಏನು, ನಿಜಕ್ಕೂ ಅಚ್ಚರಿ Video

ಭಾರತದ ರಾಷ್ಟ್ರಧ್ವಜವನ್ನು ಕಾಲಲ್ಲಿ ಹಾಕಿ ತುಳಿದ ಖಲಿಸ್ತಾನಿ ಪುಂಡರು: ನೋಡಿದ್ರೆ ರಕ್ತ ಕುದಿಯುತ್ತೆ Video

ರಸ್ತೆ ಬದಿ ಕಾರು ಡೋರ್ ತೆಗೆಯುವಾಗ ಎಚ್ಚರವಿರಬೇಕೆಂಬುದು ಇದೇ ಕಾರಣಕ್ಕೆ: ಓರ್ವ ವ್ಯಕ್ತಿಯ ಜೀವವೇ ಹೋಯ್ತು Video

ಮುಂದಿನ ಸುದ್ದಿ
Show comments