Select Your Language

Notifications

webdunia
webdunia
webdunia
webdunia

ಜಮೀರ್ ಅಹ್ಮದ್ ವಿರುದ್ಧ ಜಿ.ಪರಮೇಶ್ವರ್‌ಗೆ ದೂರು

ಜಮೀರ್ ಅಹ್ಮದ್ ವಿರುದ್ಧ ಜಿ.ಪರಮೇಶ್ವರ್‌ಗೆ ದೂರು
ಬೆಂಗಳೂರು , ಬುಧವಾರ, 17 ಮೇ 2017 (15:37 IST)
ಜೆಡಿಎಸ್ ಬಂಡಾಯ ಶಾಸಕ ಜಮೀರ್ ಅಹ್ಮದ್ ಕಾಂಗ್ರೆಸ್ ಅಭ್ಯರ್ಥಿ ಎಂದು ಸ್ವಯಂಘೋಷಿಸಿಕೊಂಡು ರಾಜಾರೋಷವಾಗಿ ತಿರುಗುತ್ತಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್‌ಗೆ ದೂರು ನೀಡಲಾಗಿದೆ.
 
ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವವನ್ನು ಕೂಡಾ ಪಡೆಯದೇ ಚಾಮರಾಜಪೇಟೆಯ ಕಾಂಗ್ರೆಸ್ ಅಭ್ಯರ್ಥಿ ಎಂದು ಜಮೀರ್ ಘೋಷಿಸಿಕೊಂಡಿದ್ದಾರೆ ಯುವ ಕಾಂಗ್ರೆಸ್ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
 
ಜಮೀರ್ ಅಹ್ಮದ್ ಜೆಡಿಎಸ್ ಪಕ್ಷವನ್ನು ತೊರೆದಿಲ್ಲ,.ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ಕೂಡಾ ಆಗಿಲ್ಲ. ಹಾಗಿದ್ದರೂ ಕಾಂಗ್ರೆಸ್ ಪಕ್ಷದ ಅಂತರಿಕ ವಿಚಾರದಲ್ಲಿ ಮೂಗು ತೂರಿಸುವುದು ಸರಿಯಲ್ಲ ಎಂದು ಕಿಡಿಕಾರಿದ್ದಾರೆ.
 
ಯುವಕಾಂಗ್ರೆಸ್ ಕಾರ್ಯಕರ್ತರ ದೂರು ಸ್ವೀಕರಿಸಿದ ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್, ಸೂಕ್ತ ಕ್ರಮಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ ಎಂದು ಯುವಕಾಂಗ್ರೆಸ್ ಪದಾಧಿಕಾರಿಗಳು ತಿಳಿಸಿದ್ದಾರೆ. 
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

ಅಕ್ರಮ ಮನೆ ಸಕ್ರಮಕ್ಕೆ ಸಂಪುಟ ಸಭೆ ಅಸ್ತು