ಪ್ರಧಾನಿ ನರೇಂದ್ರ ಮೋದಿ ಜನ್ಮದಿನವನ್ನ ಯುವ ಕಾಂಗ್ರೆಸ್ ರಾಷ್ಟ್ರೀಯ ನಿರುದ್ಯೋಗ ದಿನವಾಗಿ ಆಚರಣೆ

Webdunia
ಶುಕ್ರವಾರ, 17 ಸೆಪ್ಟಂಬರ್ 2021 (21:29 IST)
ಬೆಂಗಳೂರು: . ಯುವ ಕಾಂಗ್ರೆಸ್ ಕಾರ್ಯಕರ್ತರು ರೈಲ್ವೇ ನಿಲ್ದಾಣದಿಂದ ಫ್ರೀಡಂ ಪಾರ್ಕ್​ವರೆಗೆ ಬೃಹತ್​​ ಪ್ರತಿಭಟನಾ ಜಾಥಾ ನಡೆಸಿದರು.
ದೇಶದ ಯುವಜನ ಹಾಗೂ ಎಲ್ಲಾ ವರ್ಗದ ಜನರನ್ನು ಸಂಕಷ್ಟಕ್ಕೆ ತಳ್ಳಿ, ಹೆಚ್ಚು ನಿರುದ್ಯೋಗ ಸಮಸ್ಯೆ ಉಂಟಾಗುವುದಕ್ಕೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್​​ಡಿಎ ಸರ್ಕಾರ ಕಾರಣ. ಹೀಗಾಗಿ ನರೇಂದ್ರ ಮೋದಿ ಉದ್ಯೋಗ ಕೊಡಿ ಎಂದು ವಿವಿಧ ಪದವೀಧರರು, ಆಟೋ ಚಾಲಕರು, ಕಾರ್ಮಿಕರು ಆಗ್ರಹಿಸಿದರು.
ಯುವ ಕಾಂಗ್ರೆಸ್​​ನ ರಾಷ್ಟ್ರೀಯ ಅಧ್ಯಕ್ಷ ಶ್ರೀನಿವಾಸ್ ಬಿ.ವಿ ಮತ್ತು ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ಎಂ.ಎಸ್. ರಕ್ಷಾ ರಾಮಯ್ಯ ಪ್ರತಿಭಟನೆಯ ನೇತೃತ್ವವಹಿಸಿದ್ದರು. ಉದ್ಯೋಗ ಸೃಷ್ಟಿ ಮತ್ತು ಉದ್ಯೋಗ ನಷ್ಟ ತಪ್ಪಿಸುವಂತೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಒತ್ತಾಯಿಸಿ ಪ್ರತಿಭಟನಾಕಾರರು ಘೋಷಣೆ ಕೂಗಿದರು.
ರಾಷ್ಟ್ರೀಯ ಅಧ್ಯಕ್ಷ ಶ್ರೀನಿವಾಸ್ ಬಿ.ವಿ. ಮಾತನಾಡಿ, ಪ್ರಧಾನಿ ಅವರ ಹುಟ್ಟುಹಬ್ಬವನ್ನು ಯುವ ಕಾಂಗ್ರೆಸ್ ದೇಶಾದ್ಯಂತ ನಿರುದ್ಯೋಗ ದಿನವನ್ನಾಗಿ ಆಚರಿಸುತ್ತಿರುವುದು ಈ ದೇಶದ ದುರಂತ. ಈ ಸರ್ಕಾರದಿಂದ ಜನ ಸಾಮಾನ್ಯರಿಗೆ ನ್ಯಾಯ ದೊರೆಯುವುದಿಲ್ಲ. ಸ್ವಾತಂತ್ರ್ಯ ಪೂರ್ವದಲ್ಲಿ ನಡೆದ ಕ್ವಿಟ್ ಇಂಡಿಯಾ ಮಾದರಿಯಲ್ಲಿ ಹಾಲಿ ಬಿಜೆಪಿ ಸರ್ಕಾರದ ವಿರುದ್ಧ ಹೋರಾಟ ತೀವ್ರಗೊಳಿಸಲಾಗುವುದು ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹಿಟ್ಟು ಬೀಸಲೆಂದು ಗಿರಣಿಗೆ ತೆರಳಿದ್ದ ಬಾಲಕಿ ಮೇಲೆ ಗ್ಯಾಂಗ್ ರೇಪ್

ಸಿದ್ದರಾಮಯ್ಯ, ಶಿವಕುಮಾರ್ ಬ್ರೇಕ್‌ಫಾಸ್ಟ್‌ ಮೀಟಿಂಗ್ ಕಥೆ ಬಿಚ್ಚಿಟ್ಟ ಜೆಡಿಎಸ್

ಪೋಕ್ಸೋ ಪ್ರಕರಣದಲ್ಲಿ ಬಿಎಸ್ ಯಡಿಯೂರಪ್ಪ ಬಿಗ್ ರಿಲೀಫ್‌

ಡಿಕೆ ಶಿವಕುಮಾರ್ ಮನೆ ಬ್ರೇಕ್ ಫಾಸ್ಟ್ ಮುಗಿಸಿ ಸಿದ್ದರಾಮಯ್ಯ ನೇರವಾಗಿ ಹೋಗಿದ್ದು ಇಲ್ಲಿಗೆ

ಸ್ಮಾರ್ಟ್ ಮೀಟರ್ ಹಗರಣದಲ್ಲಿ ಇಂಧನ ಸಚಿವ ಕೆ.ಜೆ ಜಾರ್ಜ್‌ಗೆ ಬಿಗ್ ರಿಲೀಫ್ ನೀಡಿದ ಹೈಕೋರ್ಟ್‌

ಮುಂದಿನ ಸುದ್ದಿ
Show comments