Webdunia - Bharat's app for daily news and videos

Install App

ನಾಯಿ ಕಚ್ಚಿದ್ದಕ್ಕೆ ಯುವತಿ ಬಲಿ ..!!!

Webdunia
ಶುಕ್ರವಾರ, 1 ಜುಲೈ 2022 (16:04 IST)
ಹುಚ್ಚು ನಾಯಿ ಕಡಿದು ತಿಂಗಳ ಬಳಿಕ ಯುವತಿಯೊಬ್ಬಳು ಸಾವನ್ನಪ್ಪಿದ ಘಟನೆ ದೇವರ ನಾಡು ಕೇರಳದ ಪಾಲಕ್ಕಾಡ್‌ನಲ್ಲಿ ನಡೆದಿದೆ. ಕಳೆದ ತಿಂಗಳು ನೆರೆ ಮನೆಯವರ ನಾಯಿಯೊಂದು 19 ವರ್ಷದ ಕಾಲೇಜು ವಿದ್ಯಾರ್ಥಿನಿಗೆ ಕಡಿದಿತ್ತು . ಇದಾದ ಬಳಿಕ ವಿದ್ಯಾರ್ಥಿನಿ ಇದಕ್ಕೆ ಲಸಿಕೆ ತೆಗೆದುಕೊಂಡಿದ್ದಳು.
ಆಕೆಗೆ ರೇಬಿಸ್‌ ಶುರುವಾಗಿದ್ದು, ತ್ರಿಶೂರ್‌ನ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ (MCH) ರೇಬಿಸ್‌ಗೆ ಚಿಕಿತ್ಸೆ ಪಡೆಯುತ್ತಿದ್ದಾಗಲೇ ನಿನ್ನೆ(ಜೂ.30) ಗುರುವಾರ ಸಾವನ್ನಪ್ಪಿದ್ದಾಳೆ.
 
ಪಾಲಕ್ಕಾಡ್‌ನ (Palakkad) ಮಂಕರದಲ್ಲಿರುವ (Mankara) ಪಡಿಂಜಕರ (Padinjakara) ಮನೆಯ ಶ್ರೀಲಕ್ಷ್ಮಿ (Sreelakshmi) ಸಾವಿಗೀಡಾದ ತರುಣಿ, ಮೇ 30 ರಂದು ಈಕೆ ಕೊಯಮತ್ತೂರಿನ ಕಾಲೇಜಿಗೆ ತೆರಳುತ್ತಿದ್ದಾಗ ಈಕೆಗೆ ನೆರೆಮನೆಯವರ ನಾಯಿ ಕಡಿದಿತ್ತು. ಘಟನೆಯ ನಂತರ ವೈದ್ಯರು ಸೂಚಿಸಿದ ಆಯಂಟಿ ರೇಬಿಸ್ ಲಸಿಕೆಗಳನ್ನು ಆಕೆ ತೆಗೆದುಕೊಂಡಿದ್ದಾಳೆ ಎಂದು ಆಕೆಯ ಸಂಬಂಧಿಕರು ತಿಳಿಸಿದ್ದಾರೆ. ಆದರೆ, ಎರಡು ದಿನಗಳ ಹಿಂದೆ ರೇಬಿಸ್‌ನ ಲಕ್ಷಣಗಳಲ್ಲಿ ಒಂದಾದ ತೀವ್ರ ಜ್ವರದಿಂದ ಬಳಲುತ್ತಿದ್ದ ಆಕೆಯನ್ನು ತ್ರಿಶೂರ್‌ನ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಬೆಳಗಿನ ಜಾವ 3 ಗಂಟೆ ಸುಮಾರಿಗೆ ಆಕೆ ಸಾವನ್ನಪ್ಪಿದ್ದಾಳೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments