Publish Date: Tue, 25 Apr 2023 (20:05 IST)
Updated Date: Tue, 25 Apr 2023 (20:01 IST)
ಬೆಂಗಳೂರಿನಲ್ಲಿ ಟಿಪ್ಪರ್ ಲಾರಿಗೆ ಯುವಕ ಬಲಿಯಾಗಿರುವ ಘಟನೆ ನಗರದ ನಾಯಂಡಹಳ್ಳಿ ಜಂಕ್ಷನ್ ನಲ್ಲಿ ನಡೆದಿದೆ.ಎಕ್ಸ್ ಎಲ್ ಬೈಕ್ ನಲ್ಲಿ ಇಬ್ಬರು ಯುವಕರು ಬರುತ್ತಿದ್ದು,ಈ ವೇಳೆ ಹಿಂಬದಿಯಿಂದ ಅತಿವೇಗದಿಂದ ಬಂದಿದ್ದ ಟಿಪ್ಪರ್ ಲಾರಿ ಚಾಲಕ ನಿಯಂತ್ರಣ ಸಿಗದೆ ಎಕ್ಸ್ ಎಲ್ ಬೈಕ್ ಗೆ ಡಿಕ್ಕಿ ಹೊಡೆದಿದ್ದಾನೆ.ಈ ವೇಳೆ ಲಾರಿ ಕೆಳಗೆ ಸಿಲುಕಿದ್ದ ಓರ್ವ ಸ್ಥಳದಲ್ಲೇ ಸಾವು, ಮತ್ತೋರ್ವನಿಗೆ ಗಂಭೀರ ಗಾಯವಾಗಿದೆ.ಅಪಘಾತ ಬೆನ್ನಲ್ಲೇ ಲಾರಿ ಬಿಟ್ಟು ಚಾಲಕ ಎಸ್ಕೇಪ್ ಆಗಿದ್ದಾನೆ.ಬ್ಯಾಟರಾಯನಪುರ ಸಂಚಾರಿ ಪೊಲೀಸ್ರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.