Webdunia - Bharat's app for daily news and videos

Install App

ಹಣಕ್ಕೆ ಡಿಮ್ಯಾಂಡ್ ಮಾಡಿ ಲಾಕ್ ಆದ ಯೂಟ್ಯೂಬ್ ಚಾನಲ್

Webdunia
ಮಂಗಳವಾರ, 1 ಆಗಸ್ಟ್ 2023 (18:11 IST)
ಸುದ್ದಿ‌ ಪ್ರಸಾರ ಮಾಡಿ ಬೆದರಿಸಿ ಹಣ ವಸೂಲಿ ಮಾಡುತ್ತಿದ್ದ ಯೂಟ್ಯೂಬ್ ಚಾನೆಲ್ ಮಾಲೀಕ ಸೇರಿ ನಾಲ್ವರನ್ನ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.ಯೂಟ್ಯೂಬ್ ಚಾನೆಲ್ ವಾಗಿರುವ ಎ.ಕೆ.ನ್ಯೂಸ್ ಮಾಲೀಕ ಆತ್ಮಾನಂದ, @ ಆನಂದ, ಶ್ರೀನಿವಾಸ್, ಕೇಶವಮೂರ್ತಿ ಎಂಬುವರನ್ನು ಬಂಧಿಸಲಾಗಿದೆ. ಯೂಟ್ಯೂಬ್ ಚಾನಲ್ ಓನರ್  ಆತ್ಮಾನಂದ ಹಲವು ವರ್ಷಗಳಿಂದ ಚಾನೆಲ್‌ ನಡೆಸುತ್ತಿದ್ದ.‌ ಕಾನೂನುಬಾಹಿರ ಚಟುವಟಿಕೆ ಕಂಡುಬಂದರೆ ಸ್ಥಳಕ್ಕೆ ಹೋಗಿ ವಿಡಿಯೋ ಮಾಡುತ್ತಿದ್ದ ನಂತರ ಸುದ್ದಿ ಪ್ರಸಾರ ಮಾಡುತ್ತೇನೆ,‌ ಪೊಲೀಸರಿಗೆ ಹೇಳಿ‌ ಕೇಸ್ ದಾಖಲಿಸುತ್ತೇನೆ ಎಂದು ಹೆದರಿಸುತ್ತಿದ್ದ.

ಸುದ್ದಿ onair ಆದರೆ ತಮ್ಮ‌ ಕಳ್ಳಾಟ ಬಯಲಾಗುತ್ತೆ ಎಂದು ಹೆದರುತ್ತಿದ್ದ  ದಂಧೆಕೋರರು ಆರೋಪಿಗಳಿಗೆ ಹಣ ನೀಡುತ್ತಿದ್ದರು. ಇದನ್ನೇ ಬಂಡವಾಳ‌ ಮಾಡಿಕೊಳ್ಳುತ್ತಿದ್ದ ಆರೋಪಿಗಳು  ನಗರದಲ್ಲಿ ನಡೆಯುವ ಅಕ್ರಮ ಚಟುವಟಿಕೆಗಳ ಬಗ್ಗೆ ರಹಸ್ಯ ವಿಡಿಯೊ ಮಾಡಿ ಸುದ್ದಿ ಪ್ರಸಾರ ಮಾಡುವುದಾಗಿ ಬೆದರಿಸುತ್ತಿದ್ದರು. ಈ ಹಿಂದೆ‌ ಕೂಡ  ಕೆಮಿಕಲ್ಸ್ ದಂಧೆ, ಗ್ಯಾಸ್ ರಿಫೀಲಿಂಗ್ಸ್, ಅಕ್ರಮವಾಗಿ ದನದ ಮಾಂಸ ಮಾರಾಟ ಹೀಗೆ ನಾನಾ ಕಾನೂನುಬಾಹಿರ ಚಟುವಟಿಕೆಯಲ್ಲಿ ತೊಡಗಿದ್ದರನ್ನ ಬೆದರಿಸಿ ಲಕ್ಷಾಂತರ ರೂಪಾಯಿ ಹಣ ವಸೂಲಿ ಮಾಡಿದ್ದರು.
ಕೆ.ಆರ್‌.ಪುರ ಸೇರಿದಂತೆ ನಗರದ ವಿವಿಧ ಪೊಲೀಸ್ ಠಾಣೆಗಳಲ್ಲಿ ಆರೋಪಿಗಳ ವಿರುದ್ಧ ಕೇಸ್ ದಾಖಲಾಗಿದ್ದು ಸಿಸಿಬಿ ಅಧಿಕಾರಿಗಳು ಡ್ರಿಲ್ ಮಾಡುತ್ತಿದ್ದಾರೆ. ಇಂತಹ ಯೂಟ್ಯೂಬ್ ಚಾನಲ್ ಗಳ ಕಳ್ಳಾಟಕ್ಕೆ . ಬೆದರಿಕೆಗೆ ಕಡಿವಾಣ ಹಾಕಬೇಕು ಇಲ್ಲ ಅಂದ್ರೆ ಜನಕ್ಕೆ‌ ತಪ್ಪು ಸಂದೇಶ ಹೋಗುತ್ತೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಿಡಿಗೇಶಿ ಬಳಿ 19 ನವಿಲುಗಳ ಸಾವು: ಎಚ್ಚೆತ್ತ ಸರ್ಕಾರದಿಂದ ದಿಟ್ಟ ನಿರ್ಧಾರ

ಟೆಸ್ಟ್‌ನಲ್ಲಿ ತುಂಬಾ ಮಿಸ್ ಮಾಡಿಕೊಂಡಿದ್ದೇನೆ, ವಿರಾಟ್‌ ದೇಶಕ್ಕೆ ನಿಮ್ಮ ಅವಶ್ಯಕತೆಯಿದೆ: ಶಶಿ ತರೂರ್ ಪೋಸ್ಟ್‌

ನೇಹಾ ಹಿರೇಮಠ ಹತ್ಯೆ ಸಂಬಂಧ: ಆರೋಪಿಗೆ ಫಯಾಜ್ ಬಿಗ್ ಶಾಕ್

ಧರ್ಮಸ್ಥಳ ಅಸ್ಥಿ ಉತ್ಖನನ: ದೂರುದಾರ ಗುರುತಿಸಿದ 11ನೇ ಪಾಯಿಂಟ್‌ನಲ್ಲಿ ಬಿಗ್‌ಟ್ವಿಸ್ಟ್‌

ಮೈಸೂರಿನತ್ತ ಹೆಜ್ಜೆ ಹಾಕಿದ ಅಭಿಮನ್ಯ ನೇತೃತ್ವದ 9 ಗಜಪಡೆ

ಮುಂದಿನ ಸುದ್ದಿ
Show comments