Webdunia - Bharat's app for daily news and videos

Install App

ಒಂದೇ ದೇಶ ಒಂದೇ ಮೋದಿ ಅನ್ನೋ ಕಾಲ ಬರುತ್ತೆ ಎಚ್ಚರ: ವೈಎಸ್‌ವಿ ದತ್ತಾ

Webdunia
ಬುಧವಾರ, 11 ಅಕ್ಟೋಬರ್ 2017 (13:10 IST)
ಒಂದೇ ದೇಶ ಒಂದೇ ಮೋದಿ ಎನ್ನುವ ಕಾಲ ಬರುತ್ತದೆ ಎಚ್ಚರವಾಗಿರಿ ಎಂದು ಜೆಡಿಎಸ್ ಮುಖಂಡ ವೈಎಸ್‌ವಿ ದತ್ತಾ ಪ್ರಧಾನಿ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಜಯಪ್ರಕಾಶ್ ನಾರಾಯಣ್ ಜನ್ಮದಿನಾಚರಣೆ ಅಂಗವಾಗಿ ಆಯೋಜಿಸಿದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಇದೀಗ ಆಹಾರದ ಮೇಲೆ ತುರ್ತುಪರಿಸ್ಥಿತಿಯಿದೆ. ಮುಂದೆ ರಾಜಕೀಯದಲ್ಲಿ ತುರ್ತುಪರಿಸ್ಥಿತಿ ಬರಬಹುದು ಎಂದು ಆತಂಕ ವ್ಯಕ್ತಪಡಿಸಿದ್ದಾರೆ.
 
ಮಾಜಿ ಪ್ರಧಾನಿ ಇಂದಿರಾ ಗಾಂಧಿಯಾದಂತೆ ನಾನೇ ಪ್ರಧಾನಿ ನಂದೇ ಪಕ್ಷ ಎನ್ನುವಂತೆ ವರ್ತಿಸಿದ್ದರು. ಪ್ರಧಾನಿ ಮೋದಿ ಕೂಡಾ ಅವರಂತೆ ವರ್ತಿಸುತ್ತಿದ್ದಾರೆ. ಇದು ದುರಂಹಕಾರದ ಪರಮಾವಧಿಯಾಗಿದೆ ಎಂದು ಕಿಡಿಕಾರಿದ್ದಾರೆ.
 
ಪ್ರಧಾನಿ ಮೋದಿಯ ವರ್ತನೆ ಹಿಟ್ಲರ್ ವರ್ತನೆಯಂತಿದೆ. ಬಿಜೆಪಿ ಪಕ್ಷದಲ್ಲಿ ತಾವೇ ಎಲ್ಲಾ ಎನ್ನುವಂತೆ ವರ್ತಿಸುತ್ತಿದ್ದಾರೆ. ಹಿರಿಯ ನಾಯಕರನ್ನು ಮೂಲೆಗುಂಪು ಮಾಡಲಾಗಿದೆ ಎಂದು ಜೆಡಿಎಸ್ ಮುಖಂಡ ವೈ.ಎಸ್.ವಿ.ದತ್ತಾ ಆರೋಪಿಸಿದ್ದಾರೆ. 
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments