Publish Date: Sat, 07 Jan 2023 (12:30 IST)
Updated Date: Sat, 07 Jan 2023 (12:32 IST)
ಬೆಂಗಳೂರು : ರಾಷ್ಟ್ರೀಯ ಯುವ ಜನೋತ್ಸವದ ಲೋಗೋ, ಮಸ್ಕಟ್ನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಡಾ. ನಾರಾಯಣ ಗೌಡ ಅವರು ಬಿಡುಗಡೆಗೊಳಿಸಿದರು.
ಸಿಎಂ ಗೃಹ ಕಚೇರಿ ಕೃಷ್ಣದಲ್ಲಿ ನಡೆದ ಲೋಗೋ, ಮಸ್ಕಟ್ನ್ನು ಬಿಡುಗಡೆಗೊಳಿಸಲಾಯಿತು. ಕೇಂದ್ರ ಸರ್ಕಾರದ ಯುವಜನ ಮತ್ತು ಕ್ರೀಡಾ ಸಚಿವ ಅನುರಾಗ್ ಸಿಂಗ್ ಠಾಕೂರ್ ಅವರು ವರ್ಚುವಲ್ ಮೂಲಕ ಭಾಗಿಯಾಗಿದ್ದರು.
ಲೋಗೋ ಬಿಡುಗಡೆ ಬಳಿಕ ಅನುರಾಗ್ ಸಿಂಗ್ ಠಾಕೂರ್ ನೇತೃತ್ವದಲ್ಲಿ ಸ್ಟೀರಿಂಗ್ ಕಮಿಟಿ ಸಭೆ ನಡೆಸಲಾಯಿತು.