Webdunia - Bharat's app for daily news and videos

Install App

ಬಾಲಿವುಡ್ ನಟರನ್ನು ಕರೆಸಿ ತೊಡೆತಟ್ಟಲಿರುವ ಜಮೀರ್ ಅಹಮ್ಮದ್

Webdunia
ಮಂಗಳವಾರ, 1 ಆಗಸ್ಟ್ 2017 (09:38 IST)
ಬೆಂಗಳೂರು: ಜೆಡಿಎಸ್ ನಿಂದ ಉಚ್ಛಾಟನೆಗೊಂಡು ದೇವೇಗೌಡರ ವಿರುದ್ಧ ತೊಡೆ ತಟ್ಟಿರುವ ಶಾಸಕ ಜಮೀರ್ ಅಹಮ್ಮದ್ ಚಾಮರಾಜಪೇಟೆಯಲ್ಲಿ ಶತಾಯ ಗತಾಯ ಪಾರಮ್ಯ ಮೆರೆಯಲು ಮುಂದಾಗಿದ್ದಾರೆ.


ಚಾಮರಾಜಪೇಟೆಯಲ್ಲಿ ಸಮಾವೇಶ ಮಾಡಿ ಬಲಪ್ರದರ್ಶಿಸಿದ್ದ ದೇವೇಗೌಡರಿಗೆ ಸಡ್ಡು ಹೊಡೆಯಲು ಇದೀಗ ಜಮೀರ್ ಅಹಮ್ಮದ್ ಕಾರ್ಯಕ್ರಮವೊಂದನ್ನು ಇಟ್ಟುಕೊಂಡಿದ್ದಾರೆ. ಅದಕ್ಕೆ ತಮ್ಮ ಜನುಮ ದಿನದ ನೆಪ ಮಾಡಿದ್ದಾರೆ.

ಬರ್ತ್ ಡೇ ನೆಪದಲ್ಲಿ ಬಾಲಿವುಡ್ ನ ಘಟಾನುಘಟಿಗಳನ್ನು ಕರೆಸಿ ಚಾಮರಾಜಪೇಟೆಯಲ್ಲಿ ಬಲಪ್ರದರ್ಶನಕ್ಕೆ ಮುಂದಾಗಿದ್ದಾರೆ. ಸಲ್ಮಾನ್ ಖಾನ್ ಸಹೋದರರಾದ ಸೊಹೈಲ್ ಖಾನ್, ಅರ್ಬಾಜ್ ಖಾನ್, ಸೋನು ಸೂದ್, ಗುಲ್ಶನ್ ಗ್ರೋವರ್, ತೆಲುಗು ನಟ ಅಲಿ ಮುಂತಾದವರನ್ನು ಕರೆಸಿ ಜಮೀರ್ ಜನರ ಸಮ್ಮುಖದಲ್ಲಿ ಕೇಕ್ ಕಟ್ ಮಾಡಲಿದ್ದಾರೆ.

ಕಳೆದ ವರ್ಷವೂ ಬಾಲಿವುಡ್ ನಟ ಸಂಜಯ್ ದತ್ ರನ್ನು ಕರೆಸಿ ಅದ್ಧೂರಿಯಾಗಿ ತಮ್ಮ ಬರ್ತ್ ಡೇ ಆಚರಿಸಿಕೊಂಡಿದ್ದರು. ಈ ವರ್ಷ ಇನ್ನಷ್ಟು ತಾರೆಯರನ್ನು ಕರೆತರುತ್ತಿದ್ದಾರೆ. ಮುಂಬೈನಲ್ಲಿ ಉದ್ಯಮಿಯಾಗಿದ್ದ ಜಮೀರ್ ಗೆ ಬಾಲಿವುಡ್ ನಂಟಿದೆ. ಅದೇ ನಂಟನ್ನು ಇದೀಗ ತಮ್ಮ ಶಕ್ತಿಪ್ರದರ್ಶನಕ್ಕೆ ಬಳಸಿಕೊಳ್ಳುತ್ತಿದ್ದಾರೆ.

ಇದನ್ನೂ ಓದಿ..   ‘ಎಲ್ಲಾ ಗೊತ್ತಿದ್ದೂ ರಾಹುಲ್ ಗಾಂಧಿ ಸುಮ್ಮನಿದ್ದುದೇಕೆ?’

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments