ಬಾಲಿವುಡ್ ನಟರನ್ನು ಕರೆಸಿ ತೊಡೆತಟ್ಟಲಿರುವ ಜಮೀರ್ ಅಹಮ್ಮದ್

Webdunia
ಮಂಗಳವಾರ, 1 ಆಗಸ್ಟ್ 2017 (09:38 IST)
ಬೆಂಗಳೂರು: ಜೆಡಿಎಸ್ ನಿಂದ ಉಚ್ಛಾಟನೆಗೊಂಡು ದೇವೇಗೌಡರ ವಿರುದ್ಧ ತೊಡೆ ತಟ್ಟಿರುವ ಶಾಸಕ ಜಮೀರ್ ಅಹಮ್ಮದ್ ಚಾಮರಾಜಪೇಟೆಯಲ್ಲಿ ಶತಾಯ ಗತಾಯ ಪಾರಮ್ಯ ಮೆರೆಯಲು ಮುಂದಾಗಿದ್ದಾರೆ.


ಚಾಮರಾಜಪೇಟೆಯಲ್ಲಿ ಸಮಾವೇಶ ಮಾಡಿ ಬಲಪ್ರದರ್ಶಿಸಿದ್ದ ದೇವೇಗೌಡರಿಗೆ ಸಡ್ಡು ಹೊಡೆಯಲು ಇದೀಗ ಜಮೀರ್ ಅಹಮ್ಮದ್ ಕಾರ್ಯಕ್ರಮವೊಂದನ್ನು ಇಟ್ಟುಕೊಂಡಿದ್ದಾರೆ. ಅದಕ್ಕೆ ತಮ್ಮ ಜನುಮ ದಿನದ ನೆಪ ಮಾಡಿದ್ದಾರೆ.

ಬರ್ತ್ ಡೇ ನೆಪದಲ್ಲಿ ಬಾಲಿವುಡ್ ನ ಘಟಾನುಘಟಿಗಳನ್ನು ಕರೆಸಿ ಚಾಮರಾಜಪೇಟೆಯಲ್ಲಿ ಬಲಪ್ರದರ್ಶನಕ್ಕೆ ಮುಂದಾಗಿದ್ದಾರೆ. ಸಲ್ಮಾನ್ ಖಾನ್ ಸಹೋದರರಾದ ಸೊಹೈಲ್ ಖಾನ್, ಅರ್ಬಾಜ್ ಖಾನ್, ಸೋನು ಸೂದ್, ಗುಲ್ಶನ್ ಗ್ರೋವರ್, ತೆಲುಗು ನಟ ಅಲಿ ಮುಂತಾದವರನ್ನು ಕರೆಸಿ ಜಮೀರ್ ಜನರ ಸಮ್ಮುಖದಲ್ಲಿ ಕೇಕ್ ಕಟ್ ಮಾಡಲಿದ್ದಾರೆ.

ಕಳೆದ ವರ್ಷವೂ ಬಾಲಿವುಡ್ ನಟ ಸಂಜಯ್ ದತ್ ರನ್ನು ಕರೆಸಿ ಅದ್ಧೂರಿಯಾಗಿ ತಮ್ಮ ಬರ್ತ್ ಡೇ ಆಚರಿಸಿಕೊಂಡಿದ್ದರು. ಈ ವರ್ಷ ಇನ್ನಷ್ಟು ತಾರೆಯರನ್ನು ಕರೆತರುತ್ತಿದ್ದಾರೆ. ಮುಂಬೈನಲ್ಲಿ ಉದ್ಯಮಿಯಾಗಿದ್ದ ಜಮೀರ್ ಗೆ ಬಾಲಿವುಡ್ ನಂಟಿದೆ. ಅದೇ ನಂಟನ್ನು ಇದೀಗ ತಮ್ಮ ಶಕ್ತಿಪ್ರದರ್ಶನಕ್ಕೆ ಬಳಸಿಕೊಳ್ಳುತ್ತಿದ್ದಾರೆ.

ಇದನ್ನೂ ಓದಿ..   ‘ಎಲ್ಲಾ ಗೊತ್ತಿದ್ದೂ ರಾಹುಲ್ ಗಾಂಧಿ ಸುಮ್ಮನಿದ್ದುದೇಕೆ?’

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಭಾರತಕ್ಕೆ ಬಂದ ವ್ಲಾಡಿಮಿರ್ ಪುಟಿನ್ ಎಲ್ಲೂ ಮಾಡದ ಕೆಲಸವನ್ನು ಇಲ್ಲಿ ಮಾಡಿದ್ರು

ಮತಿಗೇಡಿಗಳಾದ್ರೂ ಪರವಾಗಿಲ್ಲ, ಲಜ್ಜೆಗೇಡಿಯಾಗಬಾರದು: ಸಿದ್ದರಾಮಯ್ಯಗೆ ಅಶೋಕ್ ಟಾಂಗ್

ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಕುರ್ಚಿ ಫೈಟ್ ಗೆ ಟ್ವಿಸ್ಟ್ ಕೊಡ್ತಿರೋದು ಇವರೇ

Karnataka Weather: ಚಳಿ ನಡುವೆಯೂ ಇಂದು ಈ ಜಿಲ್ಲೆಗಳಲ್ಲಿ ಮಳೆ

ವಾಚ್ ಪ್ರಶ್ನೆಯೆತ್ತಿದ ನಾರಾಯಣಸ್ವಾಮಿಗೆ ಡಿಸಿಎಂ ಡಿಕೆ ಶಿವಕುಮಾರ್ ವ್ಯಂಗ್ಯ ಪ್ರತಿಕ್ರಿಯೆ

ಮುಂದಿನ ಸುದ್ದಿ
Show comments