Publish Date: Tue, 17 Oct 2017 (09:34 IST)
Updated Date: Tue, 17 Oct 2017 (09:36 IST)
ಬೆಂಗಳೂರು: ದೇವೇಗೌಡರು ಮೃತಪಟ್ಟ ನಂತರ ಎಚ್ ಡಿ ರೇವಣ್ಣ ಕಾಂಗ್ರೆಸ್ ಸೇರ್ತಾರೆ ಎಂದಿದ್ದ ಜಮೀರ್ ಅಹಮ್ಮದ್ ಹೇಳಿಕೆ ಬಗ್ಗೆ ಇದೀಗ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.
ಜೆಡಿಎಸ್ ನಾಯಕ ಟಿ ಎ ಶರವಣ ಜೆಡಿಎಸ್ ಕಚೇರಿಯಲ್ಲಿ ಮಾತನಾಡಿ ‘ಇದೇ ಪಕ್ಷದಲ್ಲಿದ್ದ ಜಮೀರ್ ಅವರಿಂದ ಇಂತಹ ಹೇಳಿಕೆ ನಿರೀಕ್ಷಿಸಿರಲಿಲ್ಲ. ಅವರು ಕ್ಷಮೆ ಯಾಚಿಸದಿದ್ದರೆ ಉಗ್ರ ಹೋರಾಟ ಮಾಡಬೇಕಾಗುತ್ತದೆ’ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇನ್ನೊಂದೆಡೆ ಇದಕ್ಕೆ ಸ್ಪಷ್ಟನೆ ನೀಡಿರುವ ಜಮೀರ್ ಅಹಮ್ಮದ್, ‘ನಾನು ದೇವೇಗೌಡರು ಬದುಕಿರುವ ತನಕ ಎಂದಿದ್ದೇನಷ್ಟೇ. ವಿನಾಕಾರಣ ಅಪಪ್ರಚಾರ ಮಾಡಲಾಗುತ್ತಿದೆ. ದೇವೇಗೌಡರು ನೂರ್ಕಾಲ ಬದುಕಲಿ. ನಾನು ಎಂದೂ ಅವರ ಬಗ್ಗೆ ಹಗುರವಾಗಿ ಮಾತನಾಡುವುದಿಲ್ಲ’ ಎಂದಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ