ಪಂಜುರ್ಲಿ ದೈವಕ್ಕೆ ಅವಮಾನ: ಸಚಿವ ಜಮೀರ್ ಅಹ್ಮದ್ ವಿರುದ್ಧ ಆಕ್ರೋಶ

Krishnaveni K
ಮಂಗಳವಾರ, 3 ಡಿಸೆಂಬರ್ 2024 (12:47 IST)
ಬೆಂಗಳೂರು: ಇತ್ತೀಚೆಗೆ ಚಾಮರಾಜಪೇಟೆಯಲ್ಲಿ ನಡೆದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಪಂಜುರ್ಲಿ ವೇಷ ಹಾಕಿದ್ದ ಇಬ್ಬರು ಸಚಿವ ಜಮೀರ್ ಅಹ್ಮದ್ ರನ್ನು ವೇದಿಕೆ ಕರೆತರುವ ಸನ್ನಿವೇಶವಿತ್ತು. ಇದು ದೈವಾರಾಧಕರ ಆಕ್ರೋಶಕ್ಕೆ ಗುರಿಯಾಗಿದೆ.

ತುಳುನಾಡಿನವರಿಗೆ ದೈವಗಳ ಮೇಲೆ ಅಪಾರ ಭಕ್ತಿಯಿದೆ. ಇದಕ್ಕೆ ಅಪಚಾರವಾಗುವಂತಹ ಯಾವುದೇ ಕೃತ್ಯ ಮಾಡುವುದನ್ನೂ ಅವರು ಸಹಿಸುವುದಿಲ್ಲ. ಸಿನಿಮಾಗಳಲ್ಲಿ, ವೇದಿಕೆಗಳಲ್ಲಿ ದೈವದ ವೇಷ ಹಾಕುವುದಕ್ಕೆ ವಿರೋಧ ವ್ಯಕ್ತಪಡಿಸುತ್ತಲೇ ಇರುತ್ತಾರೆ. ಕಾಂತಾರ ಸಿನಿಮಾದಲ್ಲಿ ರಿಷಬ್ ಶೆಟ್ಟಿ ದೈವದ ಪಾತ್ರ ಮಾಡುವಾಗಲೂ ಅಷ್ಟೇ ನೇಮ ನಿಷ್ಠೆ ಆಚರಿಸಿ ಪಾತ್ರ ಮಾಡಿದ್ದರು.

ಇದೀಗ ಚಾಮರಾಜಪೇಟೆಯಲ್ಲಿ ನಡೆದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಇಬ್ಬರಿಗೆ ಪಂಜುರ್ಲಿ ದೈವದ ವೇಷ ಹಾಕಲಾಗಿದ್ದು ಅವರು ಮೊದಲು ವೇದಿಕೆ ಕೆಳಗೆ ಕೂತಿದ್ದ ಸಚಿವ ಜಮೀರ್ ಅಹ್ಮದ್ ಬಳಿ ಹೋಗಿ ಕೈ ಕುಲುಕುತ್ತಾರೆ. ಬಳಿಕ ಅವರ ಕೈ ಹಿಡಿದು ವೇದಿಕೆಗೆ ಕರೆದೊಯ್ಯುತ್ತಾರೆ. ಈ ಫೋಟೋಗಳು ವೈರಲ್ ಆಗಿದ್ದು ಸಚಿವರ ಮತ್ತು ಕಾರ್ಯಕ್ರಮ ಆಯೋಜಕರ  ವಿರುದ್ಧ ಆಕ್ರೋಶ ಕೇಳಿಬಂದಿದೆ.

ದೈವಾರಾಧನೆಗೆ ಅದರದ್ದೇ ಆದ ಗೌರವವಿದೆ. ಆದರೆ ಈ ರೀತಿ ಮನರಂಜನೆಗಾಗಿ ದೈವದ ವೇಷ ಹಾಕಿಕೊಂಡು ಸಚಿವರನ್ನು ಸ್ವಾಗತಿಸಿ ದೈವಗಳಿಗೆ ಅವಮಾನ ಮಾಡಲಾಗಿದೆ ಎಂದು ದೈವಾರಾಧಕರು ಸೋಷಿಯಲ್ ಮೀಡಿಯಾ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಾಚ್ ಪ್ರಶ್ನೆಯೆತ್ತಿದ ನಾರಾಯಣಸ್ವಾಮಿಗೆ ಡಿಸಿಎಂ ಡಿಕೆ ಶಿವಕುಮಾರ್ ವ್ಯಂಗ್ಯ ಪ್ರತಿಕ್ರಿಯೆ

ಸರ್ದಾರ್ ದೆಹಲಿ ವಿಮಾನ ನಿಲ್ದಾಣದಲ್ಲಿ ಇಂಧನ ಕದಿಯುತ್ತಿದ್ದ ಇಬ್ಬರ ಬಂಧನ

ಭಾರತಕ್ಕೆ ಬಂದಿಳಿದ ಪುಟಿನ್,ಅಪ್ಪುಗೆಯೊಂದಿಗೆ ಸ್ವಾಗತಿಸಿದ ನರೇಂದ್ರ ಮೋದಿ

ಕೇಂದ್ರದ ಮಾಜಿ ಸಚಿವೆ ಸುಷ್ಮಾ ಪತಿ ಸ್ವರಾಜ್ ಕೌಶಲ್ ನಿಧನ, ಪುತ್ರಿ ಭಾವನಾತ್ಮಕ ಪೋಸ್ಟ್‌

ನಿಮ್ಮ ಸಮಯ ಸರಿ ಇದ್ದರೆ ವಾಚ್ ವಿಷಯ ಬರುತ್ತಿರಲಿಲ್ಲ: ಛಲವಾದಿ ನಾರಾಯಣಸ್ವಾಮಿ ವ್ಯಂಗ್ಯ

ಮುಂದಿನ ಸುದ್ದಿ
Show comments