Webdunia - Bharat's app for daily news and videos

Install App

ಪಂಜುರ್ಲಿ ದೈವಕ್ಕೆ ಅವಮಾನ: ಸಚಿವ ಜಮೀರ್ ಅಹ್ಮದ್ ವಿರುದ್ಧ ಆಕ್ರೋಶ

Krishnaveni K
ಮಂಗಳವಾರ, 3 ಡಿಸೆಂಬರ್ 2024 (12:47 IST)
ಬೆಂಗಳೂರು: ಇತ್ತೀಚೆಗೆ ಚಾಮರಾಜಪೇಟೆಯಲ್ಲಿ ನಡೆದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಪಂಜುರ್ಲಿ ವೇಷ ಹಾಕಿದ್ದ ಇಬ್ಬರು ಸಚಿವ ಜಮೀರ್ ಅಹ್ಮದ್ ರನ್ನು ವೇದಿಕೆ ಕರೆತರುವ ಸನ್ನಿವೇಶವಿತ್ತು. ಇದು ದೈವಾರಾಧಕರ ಆಕ್ರೋಶಕ್ಕೆ ಗುರಿಯಾಗಿದೆ.

ತುಳುನಾಡಿನವರಿಗೆ ದೈವಗಳ ಮೇಲೆ ಅಪಾರ ಭಕ್ತಿಯಿದೆ. ಇದಕ್ಕೆ ಅಪಚಾರವಾಗುವಂತಹ ಯಾವುದೇ ಕೃತ್ಯ ಮಾಡುವುದನ್ನೂ ಅವರು ಸಹಿಸುವುದಿಲ್ಲ. ಸಿನಿಮಾಗಳಲ್ಲಿ, ವೇದಿಕೆಗಳಲ್ಲಿ ದೈವದ ವೇಷ ಹಾಕುವುದಕ್ಕೆ ವಿರೋಧ ವ್ಯಕ್ತಪಡಿಸುತ್ತಲೇ ಇರುತ್ತಾರೆ. ಕಾಂತಾರ ಸಿನಿಮಾದಲ್ಲಿ ರಿಷಬ್ ಶೆಟ್ಟಿ ದೈವದ ಪಾತ್ರ ಮಾಡುವಾಗಲೂ ಅಷ್ಟೇ ನೇಮ ನಿಷ್ಠೆ ಆಚರಿಸಿ ಪಾತ್ರ ಮಾಡಿದ್ದರು.

ಇದೀಗ ಚಾಮರಾಜಪೇಟೆಯಲ್ಲಿ ನಡೆದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಇಬ್ಬರಿಗೆ ಪಂಜುರ್ಲಿ ದೈವದ ವೇಷ ಹಾಕಲಾಗಿದ್ದು ಅವರು ಮೊದಲು ವೇದಿಕೆ ಕೆಳಗೆ ಕೂತಿದ್ದ ಸಚಿವ ಜಮೀರ್ ಅಹ್ಮದ್ ಬಳಿ ಹೋಗಿ ಕೈ ಕುಲುಕುತ್ತಾರೆ. ಬಳಿಕ ಅವರ ಕೈ ಹಿಡಿದು ವೇದಿಕೆಗೆ ಕರೆದೊಯ್ಯುತ್ತಾರೆ. ಈ ಫೋಟೋಗಳು ವೈರಲ್ ಆಗಿದ್ದು ಸಚಿವರ ಮತ್ತು ಕಾರ್ಯಕ್ರಮ ಆಯೋಜಕರ  ವಿರುದ್ಧ ಆಕ್ರೋಶ ಕೇಳಿಬಂದಿದೆ.

ದೈವಾರಾಧನೆಗೆ ಅದರದ್ದೇ ಆದ ಗೌರವವಿದೆ. ಆದರೆ ಈ ರೀತಿ ಮನರಂಜನೆಗಾಗಿ ದೈವದ ವೇಷ ಹಾಕಿಕೊಂಡು ಸಚಿವರನ್ನು ಸ್ವಾಗತಿಸಿ ದೈವಗಳಿಗೆ ಅವಮಾನ ಮಾಡಲಾಗಿದೆ ಎಂದು ದೈವಾರಾಧಕರು ಸೋಷಿಯಲ್ ಮೀಡಿಯಾ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Indore Raja Raguvamshi murder: ಮಗನಂತೇ ನಾಟಕವಾಡಿ, ರಘುವಂಶಿ ಸಾವಿನ ದಿನ ತಬ್ಬಿ ಸಾಂತ್ವನಿಸಿದ್ದ ಆರೋಪಿ ರಾಜ್

Tejasvi Surya: ಬೀದಿ ಬದಿ ತಿಂಡಿ ಚಪ್ಪರಿಸಿದ ತೇಜಸ್ವಿ ಸೂರ್ಯ: ವಿಡಿಯೋಗೆ ನೆಟ್ಟಿಗರ ಕಾಮೆಂಟ್ ನೋಡಿ

ಚಿನ್ನಸ್ವಾಮಿ ಕಾಲ್ತುಳಿತ ಯಾಕಾಯ್ತು ಎಂದು ಕೇಳಿದರೆ ಸಚಿವ ಎಂಬಿ ಪಾಟೀಲ್ ಹೇಳಿದ್ದೇನು ನೋಡಿ

Arecanut price today: ಅಡಿಕೆ, ಕಾಳುಮೆಣಸು ಇಂದಿನ ಮಾರುಕಟ್ಟೆ ದರ ಹೇಗಿದೆ

Gold Price today: ಚಿನ್ನದ ದರ ಇಂದು ಮತ್ತಷ್ಟು ಕಡಿಮೆ

ಮುಂದಿನ ಸುದ್ದಿ
Show comments