Webdunia - Bharat's app for daily news and videos

Install App

ಕರಿಯ ಕುಮಾರಸ್ವಾಮಿ ಬಿಜೆಪಿಗಿಂತ ಡೇಂಜರ್ ಎಂದ ಜಮೀರ್ ಅಹ್ಮದ್

Krishnaveni K
ಸೋಮವಾರ, 11 ನವೆಂಬರ್ 2024 (11:09 IST)
ಚನ್ನಪಟ್ಟಣ: ಉಪಚುನಾವಣೆಯಲ್ಲಿ ರಾಜಕೀಯ ನಾಯಕರ ನಾಲಿಗೆ ಎಲುಬಿಲ್ಲದೇ ಹರಿದಾಡುತ್ತದೆ. ಇದೀಗ ಸಚಿವ ಜಮೀರ್ ಅಹ್ಮದ್ ಕೂಡಾ ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಬಗ್ಗೆ ನಾಲಿಗೆ ಹರಿಬಿಟ್ಟಿದ್ದಾರೆ.

ಚನ್ನಪಟ್ಟಣದಲ್ಲಿ ಸಿಪಿ ಯೋಗೇಶ್ವರ್ ಪರ ಪ್ರಚಾರ ನಡೆಸಿದ್ದ ಜಮೀರ್ ಅಹ್ಮದ್, ಎದುರಾಳಿ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ತಂದೆ ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿಯವರನ್ನು ಕರಿಯ ಎಂದಿದ್ದಾರೆ. ಈ ಮೂಲಕ ಕುಮಾರಸ್ವಾಮಿ ವಿರುದ್ಧ ಜನಾಂಗೀಯ ನಿಂದನೆ ಮಾಡಿದ್ದಾರೆ.

ಉರ್ದುವಿನಲ್ಲಿ ವಾಗ್ದಾಳಿ ನಡೆಸಿದ್ದ ಅವರು ‘ಬಿಜೆಪಿಯವರಿಗಿಂತ ಕಾಲಾ ಕುಮಾರಸ್ವಾಮಿಯವರೇ ಖತರ್ನಾಕ್’ ಎಂದಿದ್ದರು. ಕಾಲಾ ಎಂದರೆ ಕಪ್ಪು ಎಂದರ್ಥ. ಕುಮಾರಸ್ವಾಮಿ  ವಿರುದ್ಧ ಏಕವಚನದ ವಾಗ್ದಾಳಿ ನಡೆಸಿದ್ದ ಜಮೀರ್ ‘ಬಿಜೆಪಿಯವರಿಗಿಂತ ಕರಿಯ ಕುಮಾರಸ್ವಾಮಿ ಡೇಂಜರ್. ಹಿಂದೆ ಹಿಜಾಬ್ ಬೇಡ ಎಂದಿದ್ದೆ. ಈಗ ಮುಸ್ಲಿಮರ ಮತ ಬೇಕಾ? ಕುಮಾರಸ್ವಾಮಿ ಬಿಜೆಪಿಗೆ ಹೋಗಿ ಮುಸ್ಲಿಮರನ್ನು ಖರೀದಿ ಮಾಡ್ತಾನಂತೆ. ಏ ಕುಮಾರಸ್ವಾಮಿ ನಿನ್ ರೇಟ್ ಹೇಳು. ಮುಸಲ್ಮಾನರು ಒಂದೊಂದು ಪೈಸಾ ಹಾಕಿ ನಿನ್ನ ಕುಟುಂಬವನ್ನೇ ಖರೀದಿ ಮಾಡ್ತಾರೆ’ ಎಂದು ಜಮೀರ್ ಹೇಳಿದ್ದಾರೆ.

ಅವರ ಈ ಹೇಳಿಕೆ ಜೆಡಿಎಸ್ ಕೆಂಗಣ್ಣಿಗೆ ಗುರಿಯಾಗಿದೆ. ಇದನ್ನೇ ಜೆಡಿಎಸ್ ಅಸ್ತ್ರವಾಗಿ ಬಳಸಿಕೊಳ್ಳುವ ಸಾಧ್ಯತೆಯಿದೆ. ಈಗಾಗಲೇ ವಕ್ಫ್ ವಿಚಾರದಲ್ಲಿ ಎಡವಟ್ಟು ಮಾಡಿಕೊಂಡು ಕಾಂಗ್ರೆಸ್ ನವರೇ ಜಮೀರ್ ವಿರುದ್ಧ ಕೆಂಡ ಕಾರುತ್ತಿದ್ದಾರೆ. ಈಗ ಕುಮಾರಸ್ವಾಮಿ  ವಿರುದ್ಧ ಇಂತಹ ಪದ ಬಳಕೆ ಮಾಡಿ ವಿವಾದ ಮೈಮೇಲೆಳೆದುಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಚುನಾವಣಾ ರಾಜಕಾರಣಕ್ಕೆ ಸೋಮಣ್ಣ ನಿವೃತ್ತಿ: ದೇವರೇ ಹೇಳಿದರೂ ಸ್ಪರ್ಧಿಸಲ್ಲ ಎಂದು ಕೇಂದ್ರ ಸಚಿವ

Karnataka Weather: ಹಲವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್: ಏಲ್ಲೆಲ್ಲಿ ಮಳೆ ಸಾಧ್ಯತೆ ಇಲ್ಲಿದೆ ಮಾಹಿತಿ

ಟ್ರಾಫಿಕ್‌ ಫೈನ್‌ ಆಫರ್‌ಗೆ ರಾಜಧಾನಿಯಲ್ಲಿ ಭರ್ಜರಿ ರೆಸ್ಪಾನ್ಸ್‌: ಮೊದಲ ದಿನ ವಸೂಲಿಯಾದ ದಂಡವೆಷ್ಟು ಗೊತ್ತಾ

ತ್ರಿವೇಣಿ ಸಂಗಮದಲ್ಲಿ ಪವಿತ್ರ ಸ್ನಾನಕ್ಕಾಗಿ ತೆರಳುತ್ತಿದ್ದ ಎಂಟು ಮಂದಿ ಭೀಕರ ರಸ್ತೆ ಅಪಘಾತದಲ್ಲಿ ಬಲಿ

ಷರತ್ತುಬದ್ಧ ಜಾಮೀನು ಪಡೆದ ಮಹೇಶ್‌ ಶೆಟ್ಟಿ ತಿಮರೋಡಿಗೆ ಮತ್ತೆ ಬಂಧನದ ಭೀತಿ

ಮುಂದಿನ ಸುದ್ದಿ
Show comments