Webdunia - Bharat's app for daily news and videos

Install App

ಕೊಟ್ಟ ಮಾತಿನಂತೆ ಹಸು ಕೊಡಿಸಿ ಮಾಲಿಕರ ಜೊತೆ ಪೋಸ್ ಕೊಟ್ಟ ಜಮೀರ್ ಅಹ್ಮದ್

Krishnaveni K
ಬುಧವಾರ, 15 ಜನವರಿ 2025 (12:51 IST)
ಬೆಂಗಳೂರು: ಚಾಮರಾಜಪೇಟೆಯಲ್ಲಿ ಹಸುಗಳ ಕೆಚ್ಚಲು ಕೊಯ್ದ ಪ್ರಕರಣದಲ್ಲಿ ಸಂತ್ರಸ್ತ ಮಾಲಿಕರಿಗೆ ಸಚಿವ ಜಮೀರ್ ಅಹ್ಮದ್ ಕೊಟ್ಟ ಮಾತಿನಂತೇ ಹಸು ಕೊಡಿಸಿ ಫೋಟೋಗೆ ಪೋಸ್ ಕೊಟ್ಟಿದ್ದಾರೆ.

ತಮ್ಮ ಸ್ವಕ್ಷೇತ್ರದಲ್ಲಿ ಶನಿವಾರ ತಡರಾತ್ರಿ ದುರುಳರು ಮೂರು ಹಸುಗಳ ಕೆಚ್ಚಲು ಕುಯ್ದು ಮಚ್ಚಿನಿಂದ ಹಲ್ಲೆ ಮಾಡಿ ಕ್ರೌರ್ಯ ಮೆರೆದಿದ್ದರು. ಈ ಘಟನೆ ಬಗ್ಗೆ ಭಾರೀ ಆಕ್ರೋಶ ಕೇಳಿಬಂದಿತ್ತು. ಘಟನೆಗೆ ಸಂಬಂಧಿಸಿದಂತೆ ಶೇಖ್ ನಸ್ರು ಎಂಬಾತನನ್ನು ಬಂಧಿಸಲಾಗಿತ್ತು.

ಚಾಮರಾಜಪೇಟೆ ಸಚಿವ ಜಮೀರ್ ಅಹ್ಮದ್ ಅವರ ಕ್ಷೇತ್ರವಾಗಿದೆ. ಹೀಗಾಗಿ ಸಂತ್ರಸ್ತರ ಮನೆಗೆ ಭೇಟಿ ಕೊಟ್ಟ ಸಚಿವರು ಮೂರು ಹಸು ಕೊಡಿಸುವುದಾಗಿ ಭರವಸೆ ನೀಡಿದ್ದರು. ಅದರಂತೆ ಈಗ ಮೂರು ಹಸುಗಳನ್ನು ಕೊಡಿಸಿದ್ದಾರೆ.

ಹಸುಗಳ ಜೊತೆ ಫೋಟೋಗೆ ಪೋಸ್ ಕೊಟ್ಟ ಜಮೀರ್ ಅಹ್ಮದ್ ಮಾಲಿಕರಿಗೆ ಹಸ್ತಾಂತರಿಸಿದರು. ಮೂರು ಲಕ್ಷ ರೂ. ವೆಚ್ಚದಲ್ಲಿ ತಾವೇ ಹಸು ಖರೀದಿಸಿ ಮಾಲಿಕರಿಗೆ ನೀಡಿದ್ದಾರೆ. ಮೊದಲು ಮಾಲಿಕ ಕರ್ಣ ಹಸು ಪಡೆದುಕೊಳ್ಳಲು ನಿರಾಕರಿಸಿದ್ದರು. ಆದರೆ ಅವರ ಸಹೋದರಿ ಅಮುದಾ ಹಸು ಸ್ವೀಕರಿಸಿದ್ದು ಸಹೋದರನ ಪರವಾಗಿ ಕ್ಷಮೆ ಯಾಚಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments