Webdunia - Bharat's app for daily news and videos

Install App

ಕೊಟ್ಟ ಮಾತು ತಪ್ಪದ ಸಚಿವ ಜಮೀರ್ ಅಹ್ಮದ್: ತುಂಗ ಭದ್ರಾ ಗೇಟ್ ರಿಪೇರಿ ಮಾಡಿದ ಕಾರ್ಮಿಕರಿಗೆ ಭಾರೀ ಮೊತ್ತದ ಬಹುಮಾನ

Krishnaveni K
ಸೋಮವಾರ, 19 ಆಗಸ್ಟ್ 2024 (11:33 IST)
ಕೊಪ್ಪಳ: ತುಂಗ ಭದ್ರಾ ಡ್ಯಾಮ್ ಗೇಟ್ ರಿಪೇರಿ ಮಾಡಿದ ಕಾರ್ಮಿಕರಿಗೆ ಸಚಿವ ಜಮೀರ್ ಅಹ್ಮದ್ ಕೊಟ್ಟ ಮಾತಿನಂತೇ ಭಾರೀ ಮೊತ್ತದ ಬಹುಮಾನ ಹಣ ನೀಡಿದ್ದಾರೆ.

ತುಂಗಭದ್ರಾ ಡ್ಯಾಮ್ ಗೇಟ್ ನ ಚೈನ್ ಕಟ್ ಆಗಿ ಅಪಾರ ಪ್ರಮಾಣದ ನೀರು ಹರಿದು ಹೋಗಿತ್ತು. ಇದರಿಂದಾಗಿ ಸುತ್ತಮುತ್ತಲ ಜನರಿಗೆ ನೆರೆಯ ಭೀತಿ ಎದುರಾಗಿತ್ತು. ಹೀಗೇ ಆದರೆ ಡ್ಯಾಮ್ ನ ಸಂಪೂರ್ಣ ನೀರು ಖಾಲಿಯಾಗುವ ಭೀತಿಯಿತ್ತು. ಇದು ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯ ವಿಚಾರವೂ ಆಗಿತ್ತು.

ಹೀಗಾಗಿ ಗೇಟ್ ದುರಸ್ಥಿ ಕಾರ್ಯದಲ್ಲಿ ತೊಡಗಿಸಿಕೊಂಡ ಕಾರ್ಮಿಕರಿಗೆ ಸಚಿವ ಜಮೀರ್ ಅಹ್ಮದ್ ತಲಾ 50 ಸಾವಿರ ರೂ. ಬಹುಮಾನ ಹಣ ನೀಡುವುದಾಗಿ ಘೋಷಣೆ ಮಾಡಿದ್ದರು. ಸಾಮಾನ್ಯವಾಗಿ ಕೆಲಸವಾದ ಮೇಲೆ ರಾಜಕಾರಣಿಗಳು ಕೊಟ್ಟ ಮಾತನ್ನು ಉಳಿಸಿಕೊಳ್ಳುವುದು ಅಪರೂಪ.

ಆದರೆ ಗೇಟ್ ದುರಸ್ಥಿ ಮಾಡಿ ತಮ್ಮ ಸರ್ಕಾರದ ಮಾನ ಕಾಪಾಡಿದ ಕಾರ್ಮಿಕರಿಗೆ ಜಮೀರ್ ಅಹ್ಮದ್ ಕೊಟ್ಟ ಮಾತಿನಂತೇ ಬಹುಮಾನ ಹಣ ನೀಡಿದ್ದಾರೆ. ಗೇಟ್ ದುರಸ್ಥಿಯಾಗುತ್ತಿದ್ದಂತೇ ಈ ಕಾಯಕದಲ್ಲಿ ತೊಡಗಿಸಿಕೊಂಡಿದ್ದ ಎಲ್ಲಾ ಕಾರ್ಮಿಕರಿಗೆ ತಲಾ 50 ಸಾವಿರ ರೂ. ಹಣ ನೀಡಿದ್ದಾರೆ. ಕ್ರೇನ್ ಆಪರೇಟರ್, ಗೇಟ್ ಇಳಿಸುವ ಕಾರ್ಯದಲ್ಲಿ ತೊಡಗಿಸಿಕೊಂಡವರು ಸೇರಿದಂತೆ ಸುಮಾರು 20 ಕಾರ್ಮಿಕರಿಗೆ 50 ಸಾವಿರ ರೂ. ಬಹುಮಾನ ಹಣ ನೀಡಲಾಗಿದೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Sonia Gandhi: ಮತ್ತೇ ಆಸ್ಪತ್ರೆಗೆ ಭೇಟಿ, ಕಾಂಗ್ರೆಸ್‌ನ ಹಿರಿಯ ನಾಯಕಿಯ ಆರೋಗ್ಯ ಈಗ ಹೀಗಿದೆ

ಹಸಿವು, ನಿರುದ್ಯೋಗದಿಂದ ಬಳಲುತ್ತಿದ್ದರು ಪಾಕ್‌ ಭಯೋತ್ಪಾದನೆ ಬಿಡುತ್ತಿಲ್ಲ: ಸಚಿವ ನಿತಿನ್ ಗಡ್ಕರಿ ಆಕ್ರೋಶ

ಅಧಿಕಾರದಲ್ಲಿ ಮುಂದುವರೆಯಲು ಸಿಎಂ, ಡಿಸಿಎಂಗೆ ಯಾವುದೇ ನೈತಿಕತೆಯಿಲ್ಲ: ಪ್ರಹ್ಲಾದ್ ಜೋಶಿ ಆಕ್ರೋಶ

Bengaluru Stampede: ಈ ದುರಂತದಿಂದ ರಾಜ್ಯ ಸರ್ಕಾರ ಪಾಠ ಕಲಿತಿದೆ, ಡಿಸಿಎಂ ಡಿಕೆ ಶಿವಕುಮಾರ್‌

Bengaluru Stampede: ಅಮಾನತುಗೊಂಡ ಐಪಿಎಸ್ ಅಧಿಕಾರಿಯಿಂದ ಹೊಸ ಹೆಜ್ಜೆ

ಮುಂದಿನ ಸುದ್ದಿ
Show comments