Webdunia - Bharat's app for daily news and videos

Install App

ವಕ್ಫ್ ಆಸ್ತಿ ಯತ್ನಾಳ್ ಅಪ್ಪನ ಆಸ್ತಿನಾ ಬಡವರಿಗೆ ದಾನ ಮಾಡಕ್ಕೆ: ಜಮೀರ್ ಅಹ್ಮದ್

Krishnaveni K
ಮಂಗಳವಾರ, 8 ಅಕ್ಟೋಬರ್ 2024 (16:25 IST)
ಬೆಂಗಳೂರು: ವಕ್ಫ್ ಆಸ್ತಿಯನ್ನು ಬಡವರಿಗೆ ದಾನ ಮಾಡಿ ಎಂದಿದ್ದ ಬಿಜೆಪಿ ಶಾಸಕ ಬಸನಗೌಡ ಯತ್ನಾಳ್ ಗೆ ಸಚಿವ ಜಮೀರ್ ಅಹ್ಮದ್ ತಿರುಗೇಟು ನೀಡಿದ್ದಾರೆ. ಇದೇನು ಅಪ್ಪನ ಆಸ್ತಿನಾ ಎಂದು ಕೇಳಿದ್ದಾರೆ.

ವಕ್ಫ್ ಬೋರ್ಡ್ ತಿದ್ದುಪಡಿ ಬಿಲ್ ಗೆ ಪ್ರತಿಕ್ರಿಯಿಸಿದ್ದ ಬಸನಗೌಡ ಯತ್ನಾಳ್ ವಕ್ಫ್ ಆಸ್ತಿಯನ್ನು ತಾಕತ್ತಿದ್ದರೆ ಬಡವರಿಗೆ ದಾನ ಮಾಡಲಿ. ಇದನ್ನು ಬಡವರ ಉದ್ದಾರಕ್ಕಾಗಿ ಮಾಡಿಕೊಂಡಿದ್ದಲ್ವಾ? ಹಾಗಿದ್ದರೆ ಬಡವರಿಗೆ ಹಂಚಲಿ ಎಂದು ಸವಾಲು ಹಾಕಿದ್ದರು. ಇದಕ್ಕೀಗ ಜಮೀರ್ ಪ್ರತಿಕ್ರಿಯಿಸಿದ್ದಾರೆ.

‘ಮಾಧ್ಯಮಗಳಲ್ಲಿ ಯತ್ನಾಳ್ ಹೇಳುವುದನ್ನು ನೋಡಿದ್ದೇನೆ. ವಕ್ಫ್ ಆಸ್ತಿಯನ್ನು ಬಡವರಿಗೆ ಹಂಚಲಿ ಎಂದಿದ್ದಾರೆ. ವಕ್ಫ್ ಆಸ್ತಿಯನ್ನು ಬಡವರಿಗೆ ಹಂಚಲು ಇದೇನು ನನ್ನ ಅಪ್ಪನ ಆಸ್ತಿನಾ? ಅವರ ಅಪ್ಪನ ಆಸ್ತಿನಾ ಬಡವರಿಗೆ ಹಂಚಲಿ ಎನ್ನುವುದಕ್ಕೆ. ಇದನ್ನು ಸಮಾಜಕ್ಕೆ ಒಳ್ಳೆಯದಾಗಲಿ ಎಂದು ದಾನಿಗಳು ನೀಡಿರುವುದು’ ಎಂದಿದ್ದಾರೆ.

‘ವಕ್ಫ್ ಆಸ್ತಿಯಲ್ಲಿ ಒಂದಿಂಚನ್ನೂ ಅಕ್ರಮವಾಗಿ ತೆಗೆದುಕೊಂಡಿಲ್ಲ. ಎಲ್ಲವನ್ನೂ ದಾನಿಗಳು ದಾನ ಮಾಡಿರೋದು.  ಸುಮಾರ್ 1 ಲಕ್ಷದ 12 ಸಾವಿರ ದಾನಿಗಳು ದಾನ ಮಾಡಿರೋದು. ಒಂದಿಂಚನ್ನೂ ನಾವು ಅಕ್ರಮವಾಗಿ ತೆಗೆದುಕೊಂಡಿಲ್ಲ’ ಎಂದು ಜಮೀರ್ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments