Webdunia - Bharat's app for daily news and videos

Install App

ವಕ್ಫ್ ಆಸ್ತಿ ಯತ್ನಾಳ್ ಅಪ್ಪನ ಆಸ್ತಿನಾ ಬಡವರಿಗೆ ದಾನ ಮಾಡಕ್ಕೆ: ಜಮೀರ್ ಅಹ್ಮದ್

Krishnaveni K
ಮಂಗಳವಾರ, 8 ಅಕ್ಟೋಬರ್ 2024 (16:25 IST)
ಬೆಂಗಳೂರು: ವಕ್ಫ್ ಆಸ್ತಿಯನ್ನು ಬಡವರಿಗೆ ದಾನ ಮಾಡಿ ಎಂದಿದ್ದ ಬಿಜೆಪಿ ಶಾಸಕ ಬಸನಗೌಡ ಯತ್ನಾಳ್ ಗೆ ಸಚಿವ ಜಮೀರ್ ಅಹ್ಮದ್ ತಿರುಗೇಟು ನೀಡಿದ್ದಾರೆ. ಇದೇನು ಅಪ್ಪನ ಆಸ್ತಿನಾ ಎಂದು ಕೇಳಿದ್ದಾರೆ.

ವಕ್ಫ್ ಬೋರ್ಡ್ ತಿದ್ದುಪಡಿ ಬಿಲ್ ಗೆ ಪ್ರತಿಕ್ರಿಯಿಸಿದ್ದ ಬಸನಗೌಡ ಯತ್ನಾಳ್ ವಕ್ಫ್ ಆಸ್ತಿಯನ್ನು ತಾಕತ್ತಿದ್ದರೆ ಬಡವರಿಗೆ ದಾನ ಮಾಡಲಿ. ಇದನ್ನು ಬಡವರ ಉದ್ದಾರಕ್ಕಾಗಿ ಮಾಡಿಕೊಂಡಿದ್ದಲ್ವಾ? ಹಾಗಿದ್ದರೆ ಬಡವರಿಗೆ ಹಂಚಲಿ ಎಂದು ಸವಾಲು ಹಾಕಿದ್ದರು. ಇದಕ್ಕೀಗ ಜಮೀರ್ ಪ್ರತಿಕ್ರಿಯಿಸಿದ್ದಾರೆ.

‘ಮಾಧ್ಯಮಗಳಲ್ಲಿ ಯತ್ನಾಳ್ ಹೇಳುವುದನ್ನು ನೋಡಿದ್ದೇನೆ. ವಕ್ಫ್ ಆಸ್ತಿಯನ್ನು ಬಡವರಿಗೆ ಹಂಚಲಿ ಎಂದಿದ್ದಾರೆ. ವಕ್ಫ್ ಆಸ್ತಿಯನ್ನು ಬಡವರಿಗೆ ಹಂಚಲು ಇದೇನು ನನ್ನ ಅಪ್ಪನ ಆಸ್ತಿನಾ? ಅವರ ಅಪ್ಪನ ಆಸ್ತಿನಾ ಬಡವರಿಗೆ ಹಂಚಲಿ ಎನ್ನುವುದಕ್ಕೆ. ಇದನ್ನು ಸಮಾಜಕ್ಕೆ ಒಳ್ಳೆಯದಾಗಲಿ ಎಂದು ದಾನಿಗಳು ನೀಡಿರುವುದು’ ಎಂದಿದ್ದಾರೆ.

‘ವಕ್ಫ್ ಆಸ್ತಿಯಲ್ಲಿ ಒಂದಿಂಚನ್ನೂ ಅಕ್ರಮವಾಗಿ ತೆಗೆದುಕೊಂಡಿಲ್ಲ. ಎಲ್ಲವನ್ನೂ ದಾನಿಗಳು ದಾನ ಮಾಡಿರೋದು.  ಸುಮಾರ್ 1 ಲಕ್ಷದ 12 ಸಾವಿರ ದಾನಿಗಳು ದಾನ ಮಾಡಿರೋದು. ಒಂದಿಂಚನ್ನೂ ನಾವು ಅಕ್ರಮವಾಗಿ ತೆಗೆದುಕೊಂಡಿಲ್ಲ’ ಎಂದು ಜಮೀರ್ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಾನು ಮುಷ್ತಾಕ್ ಅವರಿಂದ ದಸರಾ ಉದ್ಘಾಟನೆ: ಪ್ರತಾಪಸಿಂಹ ಬೆನ್ನಲ್ಲೇ ಯತ್ನಾಳ್‌ ಆಕ್ಷೇಪ

ಆಗ ಬಾಯಿಮುಚ್ಚಿಕೊಂಡಿದ್ದವರು ಈಗ ಲಾಭಕ್ಕೆ ಕಾಯುತ್ತಿದ್ದಾರೆ: ಚಲುವರಾಯಸ್ವಾಮಿ ಆಕ್ರೋಶ

ಬುರುಡೆ ಪ್ರಕರಣದಲ್ಲಿ ಸಾಮಾನ್ಯಜ್ಞಾನ ಬಳಸಿದ್ದರೆ ಇಷ್ಟೊಂದು ರಾದ್ಧಾಂತ ಆಗುತ್ತಿರಲಿಲ್ಲ: ರಾಜಣ್ಣ

ಕೋಟ್ಯಂತರ ರೂಪಾಯಿ ಅಕ್ರಮ ಹಣ ವರ್ಗಾವಣೆ ಪ್ರಕರಣ: ಇಡಿ ಕಸ್ಟಡಿಗೆ ಕಾಂಗ್ರೆಸ್​ ಶಾಸಕ ಕೆ.ಸಿ. ವೀರೇಂದ್ರ

ಮೈಸೂರು ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಹೇಗೆ ಸೂಕ್ತ ವ್ಯಕ್ತಿ ಆಗುತ್ತಾರೆ: ಪ್ರತಾಪಸಿಂಹ ಪ್ರಶ್ನೆ

ಮುಂದಿನ ಸುದ್ದಿ
Show comments