Webdunia - Bharat's app for daily news and videos

Install App

ಹಿಂದೂಸ್ತಾನ್ ಹಮಾರಾ, ಕಾಂಗ್ರೆಸ್ ಇರೋದೇ ಬಡವರ ಸೇವೆಗೆ: ಎದೆತಟ್ಟಿಕೊಂಡು ಹೇಳಿದ ಜಮೀರ್ ಅಹ್ಮದ್

Krishnaveni K
ಭಾನುವಾರ, 8 ಡಿಸೆಂಬರ್ 2024 (15:48 IST)
ಬಳ್ಳಾರಿ: ಉಪಚುನಾವಣೆ ಗೆಲುವಿನ ಬಳಿಕ ಇಂದು ಬಳ್ಳಾರಿಯಲ್ಲಿ ಅಭಿನಂದನಾ ಸಮಾರಂಭದಲ್ಲಿ ಭಾಗಿಯಾದ ಸಚಿವ ಜಮೀರ್ ಅಹ್ಮದ್, ಹಿಂದೂಸ್ತಾನ್ ಹಮಾರಾ, ಕಾಂಗ್ರೆಸ್ ಇರೋದೇ ಬಡವರ ಸೇವೆಗಾಗಿ ಎಂದು ಎದೆತಟ್ಟಿಕೊಂಡು ಹೇಳಿದ್ದಾರೆ.
 


ಉಪಚುನಾವಣೆ ಸಂದರ್ಭದಲ್ಲಿ ಬಿಜೆಪಿಯವರು ಏನು ಮಾಡಿದ್ರು? ಅವರದ್ದು ಒಂದಾದ್ರೂ ಸಾಧನೆ ಬಗ್ಗೆ ಹೇಳಿದ್ದಾರಾ? ಅವರು ಯಾವತ್ತೂ ಅವರ ಸಾಧನೆ ಬಗ್ಗೆ ಹೇಳಲ್ಲ. ಯಾಕೆಂದರೆ ಅವರು ಬಡವರಿಗಾಗಿ ಏನೂ ಮಾಡಲ್ಲ. ಯಾವಾಗಲೂ ಹಿಂದೂ-ಮುಸ್ಲಿಂ ಎಂದು ತಂದಿಡುವ ಕೆಲಸ ಮಾಡುತ್ತಾ ತಮ್ಮ ರಾಜಕೀಯ ಬೇಳೆ ಬೇಯಿಸುತ್ತಾರೆ ಅಷ್ಟೇ ಎಂದು ಜಮೀರ್ ಅಹ್ಮದ್ ಹೇಳಿದ್ದಾರೆ.

ಆದರೆ ನೀವು ಕಾಂಗ್ರೆಸ್ ಪಕ್ಷದ ಇತಿಹಾಸವನ್ನು ತೆಗೆದು ನೋಡಿ. ನಾವು ಎಲ್ಲಾ ಧರ್ಮದವರನ್ನೂ ಸಮಾನರಾಗಿ ನೋಡುವವರು. ನಮ್ಮ ಸಾಧನೆ ಏನು, ಬಡವರಿಗಾಗಿ ಏನು ಮಾಡಿದ್ದೇವೆ ಎಂದು ಗೊತ್ತಾಗುತ್ತದೆ. ಕಾಂಗ್ರೆಸ್ ಇರುವುದೇ ಬಡವರಿಗಾಗಿ. ನಾವು ಯಾವತ್ತೂ ಜಾತಿ ಹೆಸರಿನಲ್ಲಿ ರಾಜಕಾರಣ ಮಾಡಲ್ಲ. ಸಾರೇ ಜಹಾಂ ಸೆ ಅಚ್ಚಾ, ಹಿಂದೂಸ್ತಾನ್ ಹಮಾರಾ ಎನ್ನುತ್ತೇವೆ ಎಂದು ಎದೆ ತಟ್ಟಿಕೊಂಡು ಗುಡುಗಿದ್ದಾರೆ.

ಬಿಜೆಪಿಯವರಿಗೆ ಬರೀ ಜಾತಿ ಒಂದೇ ಬೇಕಾಗಿರುವುದು. ದಯಮಾಡಿ ಇದನ್ನೆಲ್ಲಾ ಜನರು ಅರ್ಥ ಮಾಡಿಕೊಳ್ಳಬೇಕು ಎಂದು ಜಮೀರ್ ಹೇಳಿದ್ದಾರೆ. ಕಾಂಗ್ರೆಸ್ ಪಕ್ಷ ಎಂದರೆ ಎಲ್ಲಾ ಜಾತಿಯವರನ್ನೂ ಒಟ್ಟಾಗಿ ಕರೆದುಕೊಂಡು ಹೋಗುವ ಪಕ್ಷ ಎಂದು ಅವರು ಹೇಳಿದ್ದಾರೆ. ಅವರು ಇಂದು ಸಂಡೂರಿನಲ್ಲಿ ನಡೆದ ಅಭಿನಂದನೆ ಸಲ್ಲಿಸುವ ಸಮಾವೇಶದಲ್ಲಿ ಮಾತನಾಡಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಿಮಿಷಾ ಪ್ರಿಯಾಗೆ ಕ್ಷಮೆಯೇ ಇಲ್ಲ, ಪರಿಹಾರ ಹಣವೂ ಬೇಡ ಎಂದ ಯೆಮನ್ ಕುಟುಂಬ

Arecanut price: ಅಡಿಕೆ, ಕಾಳುಮೆಣಸು ಇಂದಿನ ಮಾರುಕಟ್ಟೆ ದರ ಹೇಗಿದೆ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

40 ವರ್ಷ ಮೇಲ್ಪಟ್ಟವರು ಹೃದಯಾಘಾತವಾಗದಂತೆ ಈ ಟಿಪ್ಸ್ ಪಾಲಿಸಿ: ಡಾ ದೇವಿಪ್ರಸಾದ್ ಶೆಟ್ಟಿ

ಸುರ್ಜೇವಾಲ ಮೀಟಿಂಗ್ ಬಗ್ಗೆ ಕಾಂಗ್ರೆಸ್ ನೊಳಗೇ ಅಸಮಾಧಾನ

ಮುಂದಿನ ಸುದ್ದಿ
Show comments