Webdunia - Bharat's app for daily news and videos

Install App

ವಕ್ಫ್ ಆಸ್ತಿ ಅಲ್ಲಾಹನದ್ದು, ಅದನ್ನು ಮುಟ್ಟಿದರೆ ಉದ್ದಾರ ಆಗಲ್ಲ: ಜಮೀರ್ ಅಹ್ಮದ್

Krishnaveni K
ಗುರುವಾರ, 19 ಸೆಪ್ಟಂಬರ್ 2024 (10:56 IST)
ಬೆಂಗಳೂರು: ವಕ್ಫ್ ಆಸ್ತಿ ಎಂದರೆ ಅದು ಅಲ್ಲಾಹನದ್ದು, ಅದನ್ನು ಮುಟ್ಟಿದರೆ ಯಾರೂ ಉದ್ದಾರ ಆಗಲ್ಲ ಎಂದು ಸಚಿವ ಜಮೀರ್ ಅಹ್ಮದ್ ಹಿಡಿ ಶಾಪ ಹಾಕಿದ್ದಾರೆ.

ಕಳೆದ ಬಾರಿ ಲೋಕಸಭೆ ಕಲಾಪದಲ್ಲಿ ಕೇಂದ್ರ ಸರ್ಕಾರ ವಕ್ಫ್ ಆಸ್ತಿ ತಿದ್ದುಪಡಿ ಮಸೂದೆ ಮಂಡಿಸಲು ಮುಂದಾಗಿತ್ತು. ಬಳಿಕ ಮಿತ್ರ ಪಕ್ಷಗಳು ಮತ್ತು ವಿಪಕ್ಷಗಳಿಂದ ವಿರೋಧ ವ್ಯಕ್ತವಾದ ಹಿನ್ನಲೆಯಲ್ಲಿ ಚರ್ಚಿಸಿ ನಂತರ ಮಸೂದೆ ಮಂಡಿಸುವುದಾಗಿ ಹೇಳಿತ್ತು. ಇದರ ವಿರುದ್ಧ ಮುಸ್ಲಿಮರು ಈಗಾಗಲೇ ಪ್ರತಿಭಟನೆ ನಡೆಸುತ್ತಿದ್ದಾರೆ.

ಇದೀಗ ಸಚಿವ ಜಮೀರ್ ಅಹ್ಮದ್ ವಕ್ಫ್ ಆಸ್ತಿ ಕಬಳಿಕೆ ಮಾಡಲು ಬಿಡಬಾರದು ಎಂದಿದ್ದಾರೆ. ‘ವಕ್ಫ್ ಆಸ್ತಿ ಅಲ್ಲಾಹನಗೆ ಸೇರಿದ ಆಸ್ತಿ. ಇದನ್ನು ಯಾರೂ ಮುಟ್ಟಬಾರದು. ಅದನ್ನು ಕಬಳಿಸಿದರೆ ಯಾರೂ ಬರಕತ್ (ಉದ್ದಾರ) ಆಗಲ್ಲ. ಹೀಗಾಗಿ ಅಲ್ಲಾಹನ ಆಸ್ತಿಯನ್ನು ನಾವೆಲ್ಲರೂ ಸಂರಕ್ಷಣೆ ಮಾಡಬೇಕು’ ಎಂದು ಜಮೀರ್ ಹೇಳಿದ್ದಾರೆ.

ಅಲ್ಲಾಹನ ಆಸ್ತಿ ನುಂಗಿದವರಿಗೆ ಜೀವನದ ಕೊನೆ ದಿನಗಳು ಅತ್ಯಂತ ಕಠಿಣವಾಗಿರುತ್ತದೆ. ಏನಿದ್ದರೂ ವಕ್ಫ್ ಅದಾಲತ್ ನಲ್ಲಿ ಮಾತನಾಡಬೇಕು. ವಕ್ಫ್ ಆಸ್ತಿ ಸಂರಕ್ಷಿಸಲು ಪ್ರತೀ ಆಸ್ತಿ ಸುತ್ತ ಬೇಲಿ ನಿರ್ಮಿಸಲಾಗುವುದು. ರಾಜ್ಯದಲ್ಲಿ 1.08 ಲಕ್ಷ ಎಕರೆ ವಕ್ಫ್ ಆಸ್ತಿಯಿದೆ. ಇದರಲ್ಲಿ 85 ಸಾವಿರ ಎಕರೆ ಒತ್ತುವರಿಯಾಗಿದೆ’ ಎಂದು ಜಮೀರ್ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Sonia Gandhi: ಮತ್ತೇ ಆಸ್ಪತ್ರೆಗೆ ಭೇಟಿ, ಕಾಂಗ್ರೆಸ್‌ನ ಹಿರಿಯ ನಾಯಕಿಯ ಆರೋಗ್ಯ ಈಗ ಹೀಗಿದೆ

ಹಸಿವು, ನಿರುದ್ಯೋಗದಿಂದ ಬಳಲುತ್ತಿದ್ದರು ಪಾಕ್‌ ಭಯೋತ್ಪಾದನೆ ಬಿಡುತ್ತಿಲ್ಲ: ಸಚಿವ ನಿತಿನ್ ಗಡ್ಕರಿ ಆಕ್ರೋಶ

ಅಧಿಕಾರದಲ್ಲಿ ಮುಂದುವರೆಯಲು ಸಿಎಂ, ಡಿಸಿಎಂಗೆ ಯಾವುದೇ ನೈತಿಕತೆಯಿಲ್ಲ: ಪ್ರಹ್ಲಾದ್ ಜೋಶಿ ಆಕ್ರೋಶ

Bengaluru Stampede: ಈ ದುರಂತದಿಂದ ರಾಜ್ಯ ಸರ್ಕಾರ ಪಾಠ ಕಲಿತಿದೆ, ಡಿಸಿಎಂ ಡಿಕೆ ಶಿವಕುಮಾರ್‌

Bengaluru Stampede: ಅಮಾನತುಗೊಂಡ ಐಪಿಎಸ್ ಅಧಿಕಾರಿಯಿಂದ ಹೊಸ ಹೆಜ್ಜೆ

ಮುಂದಿನ ಸುದ್ದಿ
Show comments