ವಕ್ಫ್ ಬಳಿ 1.12 ಲಕ್ಷ ಆಸ್ತಿಯಿತ್ತು, ಈಗ ಬರೀ 23 ಸಾವಿರ ಎಕರೆ ಇದೆ ಅಷ್ಟೇ: ಜಮೀರ್ ಅಹ್ಮದ್

Krishnaveni K
ಗುರುವಾರ, 7 ನವೆಂಬರ್ 2024 (11:01 IST)
ಹುಬ್ಬಳ್ಳಿ: ಈ ಮೊದಲು ವಕ್ಫ್ ಆಸ್ತಿ 1.12 ಲಕ್ಷ ಎಕರೆ ಇತ್ತು. ಆದರೆ ಈಗ ಬರೀ 23 ಸಾವಿರ ಎಕರೆ ಇದೆ ಅಷ್ಟೇ ಎಂದು ವಕ್ಫ್ ಸಚಿವ ಜಮೀರ್ ಅಹ್ಮದ್ ಲೆಕ್ಕ ಕೊಟ್ಟಿದ್ದಾರೆ.

ವಕ್ಫ್ ವಿವಾದ ಕರ್ನಾಟಕದಲ್ಲಿ ಕಾವೇರಿದ್ದು ಇಂದು ಜೆಪಿಸಿ ಅಧ್ಯಕ್ಷ ಜಗದಾಂಬಿಕಾ ಪಾಲ್ ರಾಜ್ಯಕ್ಕೆ ಆಗಮಿಸಿ ವಕ್ಫ್ ವಿವಾದಕ್ಕೆ ಸಂಬಂಧಪಟ್ಟಂತೆ ರೈತರ ಅಹವಾಲುಗಳನ್ನು ಕೇಳಲಿದ್ದಾರೆ. ಇದಕ್ಕೆ ಜಮೀರ್ ಅಹ್ಮದ್ ವಿರೋಧ ವ್ಯಕ್ತಪಡಿಸಿದ್ದು, ಅವರು ಬರುವ ಅಗತ್ಯವೇ ಇರಲಿಲ್ಲ ಎಂದಿದ್ದಾರೆ.

ಇನ್ನು, ಕರ್ನಾಟಕದಲ್ಲಿ ವಕ್ಫ್ ಆಸ್ತಿ ಹೆಚ್ಚಾಗಿಲ್ಲ ಕಡಿಮೆಯಾಗಿದೆ ಎಂದೂ ಅವರು ಸಮಜಾಯಿಷಿ ನೀಡಿದ್ದಾರೆ. 1954 ರಲ್ಲಿ ಇನಾಮು ಭೂಮಿ ವಿಚಾರದಲ್ಲಿ 47 ಸಾವಿರ ಎಕರೆ ಹೋಗಿದೆ. 1973ರಲ್ಲಿ ಭೂ ಸುಧಾರಣೆ ಕಾಯ್ದೆಯಲ್ಲಿ 17 ಸಾವಿರ ಎಕರೆ ಹೋಗಿದೆ. ಈಗ ಕೇವಲ 23 ಸಾವಿರ ಎಕರೆ ನಮ್ಮ ಬಳಿಯಿದೆ ಎಂದು ಜಮೀರ್ ಅಹ್ಮದ್ ಹೇಳಿದ್ದಾರೆ.

ಬಿಜೆಪಿಯವರು 2023 ರ ಚುನಾವಣಾ ಪ್ರಣಾಳಿಕೆಯಲ್ಲಿ ವಕ್ಫ್ ಆಸ್ತಿ ಒತ್ತುವರಿ ತೆರವು ಮಾಡುತ್ತೇವೆ ಎಂದೂ ಬರೆದುಕೊಂಡಿದ್ದಾರೆ. ಈ ಹಿಂದೆ ಬಸವರಾಜ ಬೊಮ್ಮಾಯಿಯವರು ಸಿಎಂ ಆಗಿದ್ದಾಗ ಅಲ್ಲಾನ ಆಸ್ತಿ ಒತ್ತುವರಿಯಾಗಿರುವುದನ್ನು ಸಹಿಸಿಕೊಳ್ಳಬಾರದು ಎಂದಿದ್ದರು. ಈಗ ಚುನಾವಣೆಗಾಗಿ ಬಿಜೆಪಿಯವರು ವಕ್ಫ್ ಬಗ್ಗೆ ಅಪಪ್ರಚಾರ ಮಾಡುತ್ತಿದ್ದಾರೆ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕ್ಲೈಮ್ಯಾಕ್ಸ್‌ ಹಂತ ತಲುಪಿದ ಧರ್ಮಸ್ಥಳ ಬುರುಡೆ ಕೇಸ್‌: ಎಸ್‌ಐಟಿ ಚಾರ್ಜ್‌ಶೀಟ್‌ನತ್ತ ಎಲ್ಲರ ಚಿತ್ತ

Karur Stampede: ಸ್ವತಂತ್ರ ತನಿಖೆ ಕೋರಿ ಸುಪ್ರೀಂ ಕೋರ್ಟ್‌ ಕದ ತಟ್ಟಿದ ನಟ ವಿಜಯ್‌ ಪಕ್ಷ

ಪಟಾಕಿ ಕಾರ್ಖಾನೆಯಲ್ಲಿ ಮತ್ತೊಂದು ದುರಂತ: ಸ್ಫೋಟ ಸಂಭವಿಸಿ ಆರು ಮಂದಿ ಕಾರ್ಮಿಕರು ಸಜೀವ ದಹನ

ಪಾಕ್‌ನಲ್ಲಿ ರಕ್ತದೋಕುಳಿ: ಎನ್‌ಕೌಂಟರ್‌ ವೇಳೆ 11 ಯೋಧರು ಸೇರಿ 30 ಮಂದಿ ಸಾವು

ಕಮಲದ ವಿನ್ಯಾಸದಲ್ಲಿ ತಯಾರಾದ ಮುಂಬೈನ ಹೊಸ ವಿಮಾನ ನಿಲ್ದಾಣ ಉದ್ಘಾಟಿಸಿದ ಮೋದಿ

ಮುಂದಿನ ಸುದ್ದಿ
Show comments