Webdunia - Bharat's app for daily news and videos

Install App

ಮೂರು ಹೊಸ ಹಸು ಕೊಡಿಸ್ತೇವೆ: ಚಾಮರಾಜಪೇಟೆ ಹಸುಗಳ ಕ್ರೌರ್ಯಕ್ಕೆ ಸ್ಪಂದಿಸಿದ ಜಮೀರ್ ಅಹ್ಮದ್

Krishnaveni K
ಸೋಮವಾರ, 13 ಜನವರಿ 2025 (13:07 IST)
ಬೆಂಗಳೂರು: ಚಾಮರಾಜಪೇಟೆಯಲ್ಲಿ ಹಸುಗಳ ಮೇಲೆ ಕ್ರೌರ್ಯ ನಡೆಸಿದ ಕೃತ್ಯಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಸಚಿವ ಜಮೀರ್ ಅಹ್ಮದ್ ನಾವೇ ಮೂರು ಹಸುಗಳನ್ನು ಕೊಡಿಸುತ್ತೇವೆ ಎಂದು ಮಾಲಿಕರಿಗೆ ಭರವಸೆ ನೀಡಿದ್ದಾರೆ.

ಚಾಮರಾಜಪೇಟೆಯಲ್ಲಿ ಕರ್ಣ ಎಂಬವರ ಹಸುಗಳ ಕೆಚ್ಚಲು ಕುಯ್ದು, ಕಾಲಿಗೆ ಮಚ್ಚಿನಿಂದ ಹಲ್ಲೆ ಮಾಡಿ ದುರುಳರು ವಿಕೃತಿ ಮೆರೆದಿದ್ದರು. ಸಂಕ್ರಾಂತಿ ಸಂದರ್ಭದಲ್ಲಿ ಗೋವುಗಳಿಗೆ ಪೂಜೆ ಮಾಡುವ ಸಂದರ್ಭದಲ್ಲೇ ಇಂತಹದ್ದೊಂದು ವಿಕೃತಿ ಮೆರೆಯಲಾಗಿತ್ತು.

ಘಟನೆ ಸಂಬಂಧ ಆರೋಪಿಗಳಲ್ಲಿ ಒಬ್ಬಾತನಾದ ನಸ್ರುದ್ದೀನ್ ಎಂಬಾತನನ್ನು ಪೊಲೀಸರು ಬಂಧಿಸಿದ್ದರು. ಕುಡಿತದ ಅಮಲಿನಲ್ಲಿ ಕೃತ್ಯವೆಸಗಿದ್ದಾಗಿ ಆರೋಪಿ ಒಪ್ಪಿಕೊಂಡಿದ್ದ. ಇದೀಗ ಆತನನ್ನು ನ್ಯಾಯಾಂಗ ಬಂಧನಕ್ಕೊಪ್ಪಿಸಲಾಗಿದೆ.


ಘಟನೆ ಬಗ್ಗೆ ಪ್ರತಿಕ್ರಿಯಿಸಿರುವ ಜಮೀರ್ ಅಹ್ಮದ್ ‘ನಾನು ಮುಖ್ಯಮಂತ್ರಿಗಳು ಬಳ್ಳಾರಿಯಲ್ಲಿದ್ದಾಗ ವಿಷಯ ಗೊತ್ತಾಯಿತು. ತಕ್ಷಣವೇ ಮುಖ್ಯಮಂತ್ರಿಗಳು ಕಮಿಷನರ್ ಗೆ ಕರೆ ಮಾಡಿ ಯಾರೇ ಆಗಿದ್ದರೂ ಕ್ರಮ ಕೈಗೊಳ್ಳಿ ಎಂದು ಸೂಚಿಸಿದರು. ನಾನೂ  ಪೊಲೀಸರಿಗೆ ಹೇಳಿದ್ದೇನೆ. ಈ ಕೆಲಸ ಮಾಡಿದವರು ಯಾರೇ ಆದರೂ ಕಠಿಣ ಕ್ರಮ ಅಗಬೇಕು. ಮೂರು ಹಸುಗಳನ್ನು ನಾವು ಕೊಡುತ್ತೇವೆ. ಆ ಕುಟುಂಬದ ಜೊತೆ ನಾವಿದ್ದೇವೆ. ಹಸುಗಳನ್ನು ಕೊಡಿಸುವ ಜವಾಬ್ಧಾರಿ ನಮ್ಮದು’ ಎಂದು ಜಮೀರ್ ಅಹ್ಮದ್ ಘೋಷಣೆ ಮಾಡಿದ್ದಾರೆ. ಘಟನೆ ನಡೆದ ಸ್ಥಳಕ್ಕೆ ಭೇಟಿ ನೀಡಿರುವ ಅವರು ಕುಟುಂಬಸ್ಥರ ಜೊತೆಗೂ ಮಾತುಕತೆ ನಡೆಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Pehalgam Attack: ಲೆಫ್ಟಿನೆಂಟ್ ವಿನಯ್ ನರ್ವಾಲ್ ಕೊನೆಯ ವಿಡಿಯೋ ವೈರಲ್: ಪತ್ನಿ ಜೊತೆ ಖುಷಿಯಾಗಿದ್ದ ಕೊನೆಯ ಕ್ಷಣ

Pahalgam Terror Attack:ಮೃತ ಕನ್ನಡಿಗರ ಕುಟುಂಬಕ್ಕೆ ₹10 ಲಕ್ಷ ಪರಿಹಾರ

Terror Attack: ಪ್ರವಾಸಿಗರ ಮೇಲಿನ ದಾಳಿಗೆ ರೊಚ್ಚಿಗೆದ್ದ ಶಾರುಖ್ ಖಾನ್‌, ಪೋಸ್ಟ್ ಮಾಡಿ ಹೀಗಂದ್ರು

Terror Attack, 40ಕ್ಕೂ ಅಧಿಕ ಕನ್ನಡಿಗರನ್ನು ವಿಶೇಷ ವಿಮಾನದಲ್ಲಿ ಕರೆತರುತ್ತೇವೆ: ಸಿಎಂ ಸಿದ್ದರಾಮಯ್ಯ

Terror Attack: ಉಗ್ರರ ವಿರುದ್ಧ ರಾಜಿಯಿಲ್ಲದ ನಿರ್ಧಾರ ಕೈಗೊಳ್ಳುತ್ತೇವೆ, ರಾಜನಾಥ್ ಸಿಂಗ್‌ ತಿರುಗೇಟು

ಮುಂದಿನ ಸುದ್ದಿ
Show comments