ಕುಮಾರಸ್ವಾಮಿಗೆ ಕರಿಯಾ ಎಂದಿದ್ದಕ್ಕೆ ಕೊನೆಗೂ ತಪ್ಪಾಯ್ತು ಕ್ಷಮಿಸಿ ಎಂದ ಜಮೀರ್ ಅಹ್ಮದ್

Sampriya
ಮಂಗಳವಾರ, 12 ನವೆಂಬರ್ 2024 (15:05 IST)
ಮೈಸೂರು: ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರ ಬಣ್ಣದ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದ ಸಚಿವ ಜಮೀರ್ ಅಹ್ಮದ್ ಸಾರ್ವಜನಿಕವಾಗಿ ಕ್ಷಮೆಯಾಚಿಸಿದರು.

ಮೈಸೂರಿನಲ್ಲಿ ಮಾತನಾಡಿದ ಅವರು, ನನ್ನ ಹೇಳಿಕೆಯಿಂದ ಯಾರಿಗಾದರೂ ಬೇಸರವಾಗಿದ್ದರೆ ಕ್ಷಮೆಯಾಚಿಸುತ್ತೇನೆ. ನಾನು ಹೇಳಿರುವ ಉದ್ದೇಶವೇ ಬೇರೆ, ಜೆಡಿಎಸ್ ಕಾರ್ಯಕರ್ತರಿಗೆ ನೋವಾಗಿದ್ದರೆ ಕ್ಷಮೆ ಕೋರುತ್ತೇನೆ ಎಂದು ತಮ್ಮ ಹೇಳಿಕೆ ಬಹಳಷ್ಟು ವಿವಾದ ಸೃಷ್ಟಿಯಾಗ್ತಿದ್ದಂತೆ ಕ್ಷಮೆ ಕೋರಿದರು.

ಜಮೀರ್ ಅಹ್ಮದ್ ಚನ್ನಪಟ್ಟಣದಲ್ಲಿ ಸಿ.ಪಿ.ಯೋಗೇಶ್ವರ್ ಪರ ಪ್ರಚಾರ ಮಾಡುತ್ತಾ, ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ವಿರುದ್ಧ ವಾಗ್ದಾಳಿ ನಡೆಸಿದ್ದರು. "ಬಿಜೆಪಿಯವರಿಗಿಂತ ಕಾಲಾ ಕುಮಾರಸ್ವಾಮಿ (ಕರಿಯ ಕುಮಾರಸ್ವಾಮಿ) ಹೆಚ್ಚು ಖತರ್ನಾಕ್'' ಎಂದು ಹೇಳಿದ್ದರು. ಜಮೀರ್ ಮಾತಿನ ವೀಡಿಯೋ ವೈರಲ್ ಆಗುತ್ತಿದ್ದಂತೆ ಜೆಡಿಎಸ್‌ ಮತ್ತು ಬಿಜೆಪಿ ನಾಯಕರು ಆಕ್ರೋಶವನ್ನು ವ್ಯಕ್ತಪಡಿಸಿದ್ದರು.

ನಾನು ಮತ್ತು ಕುಮಾರಸ್ವಾಮಿ ಅವರು ಆತ್ಮೀಯರಾಗಿದ್ದವರು. ದಿನದ 24 ಗಂಟೆಯಲ್ಲಿ ನಾವಿಬ್ಬರು 14 ಗಂಟೆ ಜತೆಯಾಗಿ ಇರ್ತಿದ್ವಿ. ಅವರು ನನ್ನನ್ನು ಪ್ರೀತಿಯಿಂದ ಕುಳ್ಳ ಅಂತಿದ್ರು, ನಾನು ಕರಿಯ ಅಂತಾ ಕರೆಯುತ್ತಿದ್ದೆ. ಇದೀಗ ಚುನಾವಣೆ ಹಿನ್ನೆಲೆ ಇದು ದೊಡ್ಡ ವಿಚಾರಾ ಆಗ್ತೀದೆ. ನಾನು ಮೊದಲ ಬಾರಿಗೆ ಕರಿಯಣ್ಣ ಅಂತಿಲ್ಲ. ನಾನು ಅಂತಹದ್ದು ಏನು ಹೇಳಿಲ್ಲ. ಪ್ರೀತಿಯಿಂದ ಅವರು ಕುಳ್ಳ ಅಂತಾ ಇದ್ರು, ನಾನು ಕರಿಯಣ್ಣ ಅಂತಾ ಇದ್ದೆ. ನನ್ನ ಮಾತಿಂದ ಯಾರಿಗಾದ್ರು ನಾವಾಗಿದ್ರೆ ನಾನು ಕ್ಷಮೆ ಕೇಳ್ತೀನಿ. ನನ್ನ ಹೇಳಿಕೆಯಿಂದ ಉಪಚುನಾವಣೆ ಮೇಲೆ ಪರಿಮಾಣ ಬೀರಲ್ಲ ಎಂದು ತಿಳಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ಕುರ್ಚಿ ಗುದ್ದಾಟಕ್ಕೆ ಬ್ರೇಕ್ ಬೆನ್ನಲ್ಲೇ ಡಿಕೆ ಸಂಪುಟದಲ್ಲಿ ಮಂತ್ರಿಯಾಗಲ್ಲ ಎಂದ ರಾಜಣ್ಣ

ನಮ್ಮ ಪಕ್ಷಕ್ಕೆ ದುಡ್ಡು ಕೊಡದೇ ಇನ್ಯಾರಿಗೆ ಕೊಡೋಣ: ಡಿ.ಕೆ. ಶಿವಕುಮಾರ್ ಪ್ರಶ್ನೆ

ವಾಚ್ ಬಗ್ಗೆ ಪ್ರಶ್ನಿಸುವವರು ಐಟಿ ಇಲಾಖೆಯಿಂದ ಏಕೆ ತನಿಖೆ ನಡೆಸಬಾರದು

ಪರಪ್ಪನ ಅಗ್ರಹಾರ ಕೈದಿಗಳ ಚಟ ತೀರಿಸಲು ಹೋಗಿ ಅರೆಸ್ಟ್ ಆದ ವಾರ್ಡನ್

Delhi Air Pollution, ರೇಖಾ ಗುಪ್ತಾ ಈ ಬಗ್ಗೆ ಮಹತ್ವದ ಹೇಳಿಕೆ

ಮುಂದಿನ ಸುದ್ದಿ
Show comments