Webdunia - Bharat's app for daily news and videos

Install App

ಜನರ ಆಸ್ತಿ ಒಂದಿಂಚೂ ನಮಗೆ ಬೇಡ, ವಕ್ಫ್ ಆಸ್ತಿ ದಾನಿಗಳು ನೀಡಿದ್ದು: ಜಮೀರ್ ಅಹ್ಮದ್

Krishnaveni K
ಶುಕ್ರವಾರ, 1 ನವೆಂಬರ್ 2024 (14:55 IST)
ಬೆಂಗಳೂರು: ರಾಜ್ಯದಲ್ಲಿ ವಕ್ಫ್ ನೋಟಿಸ್ ವಿವಾದಕ್ಕೀಡಾಗಿರುವ ಬೆನ್ನಲ್ಲೇ ವಕ್ಫ್ ಸಚಿವ ಜಮೀರ್ ಅಹ್ಮದ್ ಜನರ ಆಸ್ತಿಯನ್ನು ಒಂದಿಂಚೂ ತೆಗೆದುಕೊಳ್ಳಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
 

ವಕ್ಫ್ ಬೋರ್ಡ್ ರೈತರ ಜಮೀನುಗಳಿಗೆ ನೋಟಿಸ್ ನೀಡಿರುವ ವಿಚಾರ ಭಾರೀ ವಿವಾದಕ್ಕೀಡಾಗಿದೆ. ಹಲವೆಡೆ ಪ್ರತಿಭಟನೆಗಳು ನಡೆದಿವೆ. ಈ ನಡುವೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಕ್ಫ್ ಆಸ್ತಿಯನ್ನು ರಾಷ್ಟ್ರೀಕೃತಗೊಳಿಸಿ ಎಂದು ಆಗ್ರಹಿಸಿ ಪ್ರಧಾನಿ ಮೋದಿಗೆ ಪತ್ರ ಬರೆದಿದ್ದಾರೆ.

ಧಾರವಾಡ, ಕಲಬುರಗಿ, ವಿಜಯಪುರ ಮುಂತಾದ ಜಿಲ್ಲೆಗಳಲ್ಲಿ ರೈತರ ಜಮೀನು ಪಹಣಿಯಲ್ಲಿ ವಕ್ಫ್ ಆಸ್ತಿ ಎಂದು ನಮೂದಾಗಿರುವುದು ವಿವಾದಕ್ಕೆ ಕಾರಣವಾಗಿದೆ. ಈ ಬಗ್ಗೆ ಇಂದು ವಕ್ಫ್ ಸಚಿವ ಜಮೀರ್ ಅಹ್ಮದ್ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ.

‘ನಾವು ಈಗಾಗಲೇ ಹೇಳಿದ್ದೇವೆ. ಸಿಎಂ ಸಿದ್ದರಾಮಯ್ಯನವರೂ ಹೇಳಿದ್ದಾರೆ. ನಾವು ಸಾಮಾನ್ಯ ಜನರ ಒಂದಿಂಚೂ ತೆಗೆದುಕೊಳ್ಳಲ್ಲ? ಅದು ಹೆಂಗ್ರಿ ಸಾಮಾನ್ಯ ಜನರ ಆಸ್ತಿ ಕಿತ್ತುಕೊಳ್ಳಕ್ಕೆ ಆಗುತ್ತೆ? ವಕ್ಫ್ ಆಸ್ತಿ ಎಂದರೆ ಅದು ದಾನಿಗಳು ನೀಡಿದ ಆಸ್ತಿ ಎಂದರ್ಥ. 1,12 ಸಾವಿರ ಎಕರೆ ಒಟ್ಟು ವಕ್ಫ್ ಆಸ್ತಿಯಿದೆ. ಇದರಲ್ಲಿ ಸ್ವಲ್ಪ ಮಾತ್ರವೇ ನೋಟಿಫಿಕೇಷನ್ ಮಾಡಲು ಬಾಕಿಯಿದೆ. ಅದನ್ನಷ್ಟೇ ಮಾಡುತ್ತಿದ್ದೇವೆ. ಒಂದು ವೇಳೆ ರೈತರ ಜಮೀನಿನಲ್ಲಿ ವಕ್ಫ್ ಆಸ್ತಿ ಎಂದು ನಮೂದಾಗಿದ್ದರೆ ಅದನ್ನು ಸರಿಪಡಿಸುತ್ತೇವೆ. ಈ ಬಗ್ಗೆ ನಾನು ಸದ್ಯದಲ್ಲೇ ಪತ್ರಿಕಾಗೋಷ್ಠಿ ಕರೆದು ಸ್ಪಷ್ಟನೆ ಕೊಡುತ್ತೇನೆ. ಬಿಜೆಪಿಯವರ ಕಾಲದಲ್ಲೂ ವಕ್ಫ್ ಆಸ್ತಿ ನೋಟಿಸ್ ಆಗಿತ್ತು’ ಎಂದು ಜಮೀರ್ ಅಹ್ಮದ್ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Cabinet reshuffle: ಸಿದ್ದರಾಮಯ್ಯ ಸಂಪುಟದಲ್ಲಿ ಇಷ್ಟು ಸಚಿವರಿಗೆ ಕೊಕ್, ಲಿಸ್ಟ್ ನಲ್ಲಿ ಯಾರೆಲ್ಲಾ ಇದ್ದಾರೆ

Indore Raja Raguvamshi Case: ಸೊಸೆಯ ಬಗ್ಗೆ ಇಂಚಿಂಚು ಮಾಹಿತಿ ಬಿಚ್ಚಿಟ್ಟ ರಾಜ ರಘುವಂಶಿ ತಾಯಿ

Coastal Karnataka: ಕರಾವಳಿಯ ಮಳೆಗಾಲದ ಅತಿಥಿ ಕಲ್ಲಣಬೆಗೆ ಭಾರೀ ಡಿಮ್ಯಾಂಡ್‌

Modi: ಮೋದಿ ಎಲ್ಲಿ ಪ್ರಚಾರ ಸಿಗುತ್ತೋ ಅಲ್ಲಿ ಮಾತ್ರ ಹೋಗ್ತಾರಾ: ಪ್ರಲ್ಹಾದ್ ಜೋಶಿ ಏನು ಹೇಳಿದ್ರು

ಕಾಂಗ್ರೆಸ್ ಸರ್ಕಾರ ಪತನವಾಗುತ್ತೆ, ಬಿಜೆಪಿ ಅಧಿಕಾರ ಹಿಡಿಯುತ್ತೆ: ವಿಶ್ವೇಶ್ವರ ಹೆಗಡೆ ಕಾಗೇರಿ

ಮುಂದಿನ ಸುದ್ದಿ
Show comments