Webdunia - Bharat's app for daily news and videos

Install App

ವಕ್ಫ್ ಗಾಗಿ ಯಾವುದೇ ದೇವಸ್ಥಾನ, ರೈತರ ಆಸ್ತಿಯನ್ನು ಮುಟ್ಟಲ್ಲ: ಜಮೀರ್ ಅಹ್ಮದ್

Krishnaveni K
ಶುಕ್ರವಾರ, 13 ಡಿಸೆಂಬರ್ 2024 (11:02 IST)
ಬೆಳಗಾವಿ ಸುವರ್ಣ ಸೌಧ: ವಕ್ಫ್ ಹೆಸರಿನಲ್ಲಿ ನಾವು ಯಾವುದೇ ದೇವಸ್ಥಾನ, ರೈತರ ಆಸ್ತಿಯನ್ನು ಮುಟ್ಟಲ್ಲ ಎಂದು ಸಚಿವ ಜಮೀರ್ ಅಹ್ಮದ್ ಬೆಳಗಾವಿ ಸುವರ್ಣ ಸೌಧದಲ್ಲಿ ಪ್ರಾಮಿಸ್ ಮಾಡಿದ್ದಾರೆ.

ಇತ್ತೀಚೆಗೆ ವಕ್ಫ್ ಬೋರ್ಡ್ ರೈತರು, ದೇವಸ್ಥಾನಗಳ ಆಸ್ತಿಗಳಿಗೆ ನೋಟಿಸ್ ನೀಡಿದ್ದು ಭಾರೀ ವಿವಾದಕ್ಕೆ ಕಾರಣವಾಗಿತ್ತು. ಈ ಬಗ್ಗೆ ರಾಜ್ಯ ಬಿಜೆಪಿ ಘಟಕ ರಾಜ್ಯಾದ್ಯಂತ ಪ್ರತಿಭಟನೆ ನಡೆಸಿತ್ತು. ಸರ್ಕಾರ ರೈತರ ಜಮೀನಿಗೆ ಕೈ ಹಾಕಿದ್ದಕ್ಕೆ ರೈತ ಸಂಘಟನೆಗಳೂ ಹೋರಾಟಕ್ಕಿಳಿದಿದ್ದವು.

ಇದರ ಬಗ್ಗೆ ಈಗ ಬೆಳಗಾವಿ ಅಧಿವೇಶನದಲ್ಲೂ ವಿಪಕ್ಷಗಳು ಪ್ರಸ್ತಾಪ ಮಾಡಿವೆ. ಗುರುವಾರ ವಕ್ಫ್ ವಿಚಾರವಾಗಿ ನಿಯಮ 68 ರ ಅಡಿಯಲ್ಲಿ ನಡೆದ ಚರ್ಚೆ ಸಂದರ್ಭ ವಕ್ಫ್ ಸಚಿವ ಜಮೀರ್ ಅಹ್ಮದ್ ಸ್ಪಷ್ಟನೆ ನೀಡಿದ್ದಾರೆ. ಈ ವೇಳೆ ಮಾತನಾಡಿದ ಅವರು ಅನ್ನದಾತರು, ದೇವಸ್ಥಾನಗಳ ಆಸ್ತಿಯನ್ನು ವಕ್ಫ್ ಮುಟ್ಟುವುದಿಲ್ಲ ಎಂದು ಜಮೀರ್ ಅಹ್ಮದ್ ಹೇಳಿದ್ದಾರೆ.

ರಾಜ್ಯವ್ಯಾಪಿ ಸುಮಾರು 17 ಸಾವಿ ಆಸ್ತಿಗಳನ್ನು ಖಾಸಗಿಯವರು ಒತ್ತುವರಿ ಮಾಡಿದ್ದು,  ಆ ಆಸ್ತಿಗಳನ್ನ ವಶಪಡಿಸಿಕೊಳ್ಳಲಾಗುವುದು ಎಂದಿದ್ದಾರೆ. ಈ ಹಿಂದೆ ವಕ್ಫ್ ಬೋರ್ಡ್ ಹೆಸರಿನಲ್ಲಿ 1.28 ಲಕ್ಷ ಎಕರೆ ಆಸ್ತಿ ದಾನವಾಗಿ ಬಂದಿತ್ತು. ಇದು ಸರ್ಕಾರದ ಆಸ್ತಿಯಲ್ಲ. ದಾನಿಗಳು ನೀಡಿದ ಆಸ್ತಿಯಾಗಿದೆ.  47 ಸಾವಿರ ಎಕರೆ ಭೂ ಸುಧಾರಣೆ ವ್ಯಾಪ್ತಿಗೆ ಹೋಗಿದೆ. ಕೆಲವರು ಖಾಸಗಿ ಆಸ್ತಿಯನ್ನು ಒತ್ತುವರಿ ಮಾಡಿಕೊಂಡಿದ್ದು ಅದನ್ನು ಸಂರಕ್ಷಣೆ ಮಾಡುವ ಕೆಲಸ ನಡೆಯುತ್ತಿದೆ. ಈ ಬಗ್ಗೆ ಜನರಿಗೆ ಅನಗತ್ಯ ಗೊಂದಲ ಬೇಡ. ತಪ್ಪಾಗಿ ಕೆಲವು ಆಸ್ತಿಗಳು ವಕ್ಫ್ ನದ್ದು ಎಂದು ನಮೂದಾಗಿದ್ದರೆ ಅದನ್ನು ಸರಿಪಡಿಸಲಾಗುವುದು ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳದಲ್ಲಿ ಶವ ಹೂತಿಟ್ಟ ಪ್ರಕರಣ: ಎಸ್‌ಐಟಿಯಿಂದ ನಿಷ್ಪಕ್ಷಪಾತ ತನಿಖೆ ಎಂದ ಸಿಎಂ ಸಿದ್ದರಾಮಯ್ಯ

ಮಗನ ಮದುವೆ ಮುರಿಯಲು ಕಾರಣ ಬಿಚ್ಚಿಟ್ಟ ಶಾಸಕ ಪ್ರಭು ಚವಾಣ್, ಇದೆಲ್ಲ ಆ ಮಾಜಿ ಸಚಿವನ ಹುನ್ನಾರ

ಎಚ್‌ಆರ್‌ ಜತೆ ಸರಸವಾಡಿ ಫಜೀತಿಗೆ ಸಿಲುಕಿದ್ದ ಯುಎಸ್‌ ಟೆಕ್‌ ಕಂಪನಿ ಸಿಇಒ ರಾಜೀನಾಮೆ, ಎಚ್‌ಆರ್‌ ಅನ್ನು ರಜೆಯಲ್ಲಿ ಕಳುಹಿಸಿದ ಕಂಪನಿ

ಕಬಿನಿ ಜಲಾಶಯ ಭರ್ತಿ: ಸಿಎಂ ಸಿದ್ದರಾಮಯ್ಯ, ಡಿಸಿಎಂ ಶಿವಕುಮಾರ್‌ ಜೊತೆಯಾಗಿ ಬಾಗಿನ ಅರ್ಪಣೆ

ಪೆಸಿಫಿಕ್ ಸಮುದ್ರದ ಬಳಿ ಪ್ರಬಲ ಭೂಕಂಪನ: ರಷ್ಯಾದ ಪೆನಿನ್ಸುಲಾಗೆ ಸುನಾಮಿ ಎಚ್ಚರಿಕೆ

ಮುಂದಿನ ಸುದ್ದಿ
Show comments