Select Your Language

Notifications

webdunia
webdunia
webdunia
webdunia

ಕುಮಾರಸ್ವಾಮಿ ಹೇಳಿಕೆಗೆ ಜಮೀರ್ ಅಹ್ಮದ್ ತಿರುಗೇಟು

ಕುಮಾರಸ್ವಾಮಿ ಹೇಳಿಕೆಗೆ ಜಮೀರ್ ಅಹ್ಮದ್ ತಿರುಗೇಟು
ಬೆಂಗಳೂರು , ಸೋಮವಾರ, 10 ಜುಲೈ 2017 (19:09 IST)
ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಅಡ್ಡಗೋಡೆಯ ಮೇಲೆ ದೀಪವಿಟ್ಟಂತೆ ಮಾತನಾಡುತ್ತಾರೆ.  ಸೂಟ್‌ಕೇಸ್ ಯಾರು ತೆಗೆದುಕೊಂಡಿದ್ದರು ಎನ್ನುವುದನ್ನು ಹೆಸರಿಟ್ಟು ಹೇಳಲಿ ಎಂದು ಜೆಡಿಎಸ್ ಬಂಡಾಯ ಶಾಸಕ ಜಮೀರ್ ಅಹ್ಮದ್ ತಿರುಗೇಟು ನೀಡಿದ್ದಾರೆ.
 
ಕಳೆದ ಮೂರು ದಿನಗಳಿಂದ ಸುಮ್ಮನಿದ್ದ ಕುಮಾರಸ್ವಾಮಿ, ಪ್ರಜ್ವಲ್ ಹೇಳಿಕೆಗೆ ಉತ್ತರ ಸಿದ್ದಪಡಿಸಿಕೊಂಡು ಹೊರಬಂದಿದ್ದಾರೆ ಎಂದು ಲೇವಡಿ ಮಾಡಿದ್ದಾರೆ.
 
ಶರವಣ, ನಾರಾಯಣಸ್ವಾಮಿ ಇವರನ್ನೆಲ್ಲಾ ಎಂಎಲ್‌ಸಿ ಮಾಡಿದ್ದಾರೆ. ಅವರನ್ನು ಯಾವ ರೀತಿ ಎಂಎಲ್‌ಸಿ ಮಾಡಿದ್ದಾರೆ ಎನ್ನುವುದನ್ನು ಸ್ಪಷ್ಟಪಡಿಸಲಿ. ಸೂಟ್‌ಕೇಸ್ ಯಾರು ತೆಗೆದುಕೊಂಡಿದ್ದಾರೆ, ಕೊಟ್ಟಿದ್ದಾರೆ ಎನ್ನುವ ಬಗ್ಗೆ ತನಿಖೆಯಾಗಲಿ ಎಂದು ಸವಾಲ್ ಹಾಕಿದ್ದಾರೆ.
 
ಕುಮಾರಸ್ವಾಮಿ ತನಿಖೆಗೆ ಸಿದ್ದವಾಗಿದ್ದರೆ ನಾವು ತನಿಖೆಗಾಗಿ ಸಿದ್ದರಿದ್ದೇವೆ ಎಂದು ಜೆಡಿಎಸ್ ಬಂಡಾಯ ಶಾಸಕ ಜಮೀರ್ ಅಹ್ಮದ್ ತಿಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

ಉತ್ತರ ಪ್ರದೇಶದ ಲಷ್ಕರ್ ಇ ತೊಯ್ಬಾ ಅಡಗುದಾಣಗಳ ಮೇಲೆ ದಾಳಿ: ಇಬ್ಬರ ಬಂಧನ