Select Your Language

Notifications

webdunia
webdunia
webdunia
webdunia

ಜಮೀರ್‌ಗೆ ಕಾಂಗ್ರೆಸ್ ಪಕ್ಷಕ್ಕೆ ಬನ್ನಿ ಎಂದು ಕರೆಯೋಲ್ಲ, ಬಂದ್ರೆ ಸ್ವಾಗತಿಸುತ್ತೇನೆ: ಸಿಎಂ

ಜಮೀರ್‌ಗೆ ಕಾಂಗ್ರೆಸ್ ಪಕ್ಷಕ್ಕೆ ಬನ್ನಿ ಎಂದು ಕರೆಯೋಲ್ಲ, ಬಂದ್ರೆ ಸ್ವಾಗತಿಸುತ್ತೇನೆ: ಸಿಎಂ
ಬೆಂಗಳೂರು , ಸೋಮವಾರ, 8 ಫೆಬ್ರವರಿ 2016 (21:12 IST)
ಜೆಡಿಎಸ್ ಮುಖಂಡ ಜಮೀರ್ ಜೊತೆ ನಾನು ಯಾವುದೇ ಮಾತುಕತೆ ನಡೆಸಿಲ್ಲ.ಅವರೊಂದಿಗೆ ಪ್ರೀತಿಯಿಂದ ಮಾತನಾಡುತ್ತೇನೆ ಅಷ್ಟೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
 
ಹೆಬ್ಬಾಳದಲ್ಲಿ ಕಾಂಗ್ರೆಸ್ ಅಭ್ಯರ್ಥಿ ರೆಹಮಾನ್ ಷರೀಫ್ ಪರ ಪ್ರಚಾರ ನಡೆಸಿದ ಸಿದ್ದರಾಮಯ್ಯ, ಹೆಬ್ಬಾಳದಲ್ಲಿ ಕಾಂಗ್ರೆಸ್ ಪಕ್ಷದ ಜಯ ಖಚಿತವಾಗಿದೆ ಎಂದರು. 
 
ಜಮೀರ್ ಅಹ್ಮದ್ ಖಾನ್ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗುವ ವದಂತಿಗಳ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ನಾನು ಯಾರನ್ನೂ ಪಕ್ಷಕ್ಕೆ ಬನ್ನಿ ಎಂದು ಕರೆಯೋಲ್ಲ ಪಕ್ಷದ ಸಿದ್ದಾಂತ ನಂಬಿ ಬಂದಲ್ಲಿ ಸ್ವಾಗತಿಸುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
 
ಜಮೀರ್ ಜಾತ್ಯಾತೀತ ನಿಲುವಿನಲ್ಲಿ ಬದ್ಧತೆ ಹೊಂದಿದಂತಹ ನಾಯಕ. ಅಂತಹ ವ್ಯಕ್ತಿ ಕಾಂಗ್ರೆಸ್ ಪಕ್ಷದ ಸಿದ್ದಾಂತಗಳಿಗೆ ಒಪ್ಪಿ ಬಂದಲ್ಲಿ ತಪ್ಪಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
 

Share this Story:

Follow Webdunia kannada