ತುರ್ತು ಸಂದರ್ಭಗಳಲ್ಲಿ ಮಾತ್ರ ಸಿಎಂ ಗೆ ಝೀರೋ ಟ್ರಾಫಿಕ್ ವ್ಯವಸ್ಥೆ: ಜಂಟಿ ಸಂಚಾರ ಆಯುಕ್ತರ ಆದೇಶ

Webdunia
ಶನಿವಾರ, 14 ಆಗಸ್ಟ್ 2021 (21:14 IST)
ಬೆಂಗಳೂರು: ಝೀರೋ ಟ್ರಾಫಿಕ್ ನೀಡದಂತೆ ಸಿ.ಎಂ ಬೊಮ್ಮಾಯಿ ಪೊಲೀಸ್ ಇಲಾಖೆಗೆ ಈ ಹಿಂದೆ ಸೂಚನೆ ನೀಡಿದ್ದರು. ಈ ಹಿನ್ನಲೆಯಲ್ಲಿ  ತುರ್ತು ಹಾಗೂ ಅನಿವಾರ್ಯ ಸಂದರ್ಭಗಳಲ್ಲಿದ್ದಲ್ಲಿ ಮಾತ್ರ ಝೀರೋ ಟ್ರಾಫಿಕ್ ಸಂಚಾರ ವ್ಯವಸ್ಥೆಯನ್ನು ಕಲ್ಪಿಸಿವಂತೆ ಜಂಟಿ ಸಂಚಾರ ಪೊಲೀಸ್ ಆಯುಕ್ತರಾದ ರವಿಕಾಂತೇಗೌಡ ನಗರದ ಟ್ರಾಫಿಕ್ ಪೊಲೀಸರಿಗೆ ಸೂಚಿಸಿ ಆದೇಶ ಹೊರಡಿಸಿದ್ದಾರೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಾವು ಬೆಂಗಳೂರು ನಗರದಲ್ಲಿ ಸಂಚರಿಸುವ ವೇಳೆ ತಮ್ಮ ವಾಹನಕ್ಕೆ ಝೀರೋ  ಟ್ರಾಫಿಕ್ ನೀಡಬಾರದು. ಇದರಿಂದ ಸಾರ್ವಜನಿಕರಿಗೆ ಹೆಚ್ಚು ತೊಂದರೆಯಾಗುತ್ತದೆ, ಕೆಲವು ವೇಳೆ ತುರ್ತು ವಾಹನಗಳಾದ ಆಂಬ್ಯುಲೆನ್ಸ್, ಅಗ್ನಿಶಾಮಕದಳ ವಾಹನಗಳು ಸಿಲುಕುವುದರಿಂದ ತಮಗೆ  ನೋವು ಮತ್ತು ಮುಜುಗರ ಉಂಟು ಮಾಡುತ್ತದೆ. ಈ ನಿಟ್ಟಿನಲ್ಲಿ  ಝೀರೋ ಟ್ರಾಫಿಕ್ ವ್ಯವಸ್ಥೆಯನ್ನು ರದ್ದುಗೊಳಿಸುವಂತೆ ಪೊಲೀಸ್ ಇಲಾಖೆಗೆ  ಸೂಚನೆ ನೀಡಿದ್ದರು.
ಈ ಹಿನ್ನೆಲೆಯಲ್ಲಿ ಎಲ್ಲಾ ಸಂಚಾರ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿ ವರ್ಗದವರಿಗೆ ಮುಖ್ಯಮಂತ್ರಿಗಳು ಸಂಚರಿಸುವ ವೇಳೆಯಲ್ಲಿ ಝೀರೋ ಟ್ರಾಫಿಕ್ ವ್ಯವಸ್ಥೆಯನ್ನು ರದ್ದುಗೊಳಿಸಿ ಆದೇಶಿಸಲಾಗಿದ್ದು, ಒಂದು ಜಂಕ್ಷನ್‌ನಿಂದ ಮತ್ತೊಂದು ಜಂಕ್ಷನ್‌ಗೆ ಸುಗಮ ಸಂಚಾರ ವ್ಯವಸ್ಥೆಯನ್ನು ಮಾತ್ರ ಮುಖ್ಯಮಂತ್ರಿಗಳಿಗೆ ನೀಡುವಂತೆ ನಿರ್ದೇಶಿಸಲಾಗಿದೆ. ತುರ್ತು ಹಾಗೂ ಅನಿವಾರ್ಯ ಸಂದರ್ಭಗಳಲ್ಲಿದ್ದಲ್ಲಿ ಮಾತ್ರ ಝೀರೋ  ಟ್ರಾಫಿಕ್ ಸಂಚಾರ ವ್ಯವಸ್ಥೆಯನ್ನು ಕಲ್ಪಿಸಿಕೊಡುವಂತೆ ಸೂಚಿಸಲಾಗಿದೆ ಕಲ್ಪಿಸುವಂತೆ ಸೂಚಿಸಲಾಗಿದೆ ಎಂದು ಜಂಟಿ ಸಂಚಾರ ಆಯುಕ್ತ ಡಾ. ಬಿ.ಆರ್. ರವಿಕಾಂತೇಗೌಡ ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Video: ನಮ್ಮ ಮೆಟ್ರೋವನ್ನು ಬೆಡ್ ರೂಂ ಮಾಡಿಕೊಂಡ ಯುವ ಜೋಡಿ: ಅಸಭ್ಯ ವರ್ತನೆ ವಿಡಿಯೋ ವೈರಲ್

ಟೌನ್‍ಶಿಪ್ ಬಗ್ಗೆ ತಲೆ ಕೆಡಿಸಿಕೊಳ್ಳದೇ ಉತ್ತರ ಕರ್ನಾಟಕದ ಅಭಿವೃದ್ಧಿ ಕಡೆ ಗಮನ ಕೊಡಿ: ವಿಜಯೇಂದ್ರ

ತಿಂಗಳಿಗೆ 90 ಸಾವಿರ ದುಡಿತೀನಿ ಸಾರ್.. ಕ್ಯಾಬ್ ಡ್ರೈವರ್ ಹೇಳಿದ ಕತೆ ಕೇಳಿ ಗ್ರಾಹಕ ಫುಲ್ ಶಾಕ್ Video

ರಾಹುಲ್ ಗಾಂಧಿ 20 ದಿನದಿಂದ ವಿದೇಶದಲ್ಲಿದ್ರು, ಎಲ್ಲಿ ಹೋಗಿದ್ರು ಇಷ್ಟು ದಿನ ಎಲ್ಲಿದ್ರು ಕೇಳಿದ್ರಾ: ಬಿಜೆಪಿ ಪ್ರಶ್ನೆ

ಗೃಹಸಚಿವ ಪ್ರಿಯಾಂಕ್ ಖರ್ಗೆ ತವರಲ್ಲೇ ಇದೆಂಥಾ ಭದ್ರತಾ ಲೋಪ: ಮತ್ತೆ ಮೂರು ಖೈದಿಗಳು ಪರಾರಿ

ಮುಂದಿನ ಸುದ್ದಿ
Show comments