Webdunia - Bharat's app for daily news and videos

Install App

ಸಚಿವರ ಮನೆ ಮುಂದೆ ನಾಯಿ ತರಾ ಕಾಯಬೇಕು: ಜಿಪಂ ಸದಸ್ಯರ ಆಕ್ರೋಶ

Webdunia
ಬುಧವಾರ, 28 ಸೆಪ್ಟಂಬರ್ 2016 (17:34 IST)
ಹಳ್ಳಿಗಳ ಸಮಸ್ಯೆ ತೆಗೆದುಕೊಂಡು ನೂರಾರು ಕಿಲೋಮೀಟರ್ ದೂರದಿಂದ ಬಂದು ಸಚಿವರ ಮನೆ ಮುಂದೆ ನಾಯಿ ತರಾ ಕಾಯಬೇಕಾದ ಪರಿಸ್ಥಿತಿ ಎದುರಾಗಿದೆ ಎಂದು ಜಿಲ್ಲಾ ಪಂಚಾಯತ್ ಹಾಗೂ ತಾಲೂಕು ಪಂಚಾಯತ್ ಸದಸ್ಯರು ಕೆಪಿಸಿಸಿ ಕಾರ್ಯಧ್ಯಕ್ಷ ದಿನೇಶ್ ಗುಂಡೂರಾವ್ ಅವರನ್ನು ತರಾಟೆಗೆ ತೆಗೆದುಕೊಂರು.
 
ಬೆಂಗಳೂರಿನ ದೇವರಾಜ್ ಅರಸು ಭವನದಲ್ಲಿ ನಡೆಯುತ್ತಿರುವ ಗ್ರಾಮ ಸ್ವರಾಜ್ ಕಾರ್ಯಕ್ರಮ ನಡೆಯಿತು. ಈ ವೇಳೆ ಕಾಂಗ್ರೆಸ್ ಸರಕಾರ ಮಹಿಳೆಯರಿಗೆ 50 ಪ್ರತಿಶತ ಮೀಸಲಾತಿ ನೀಡಿದೆ ಎಂದು ಹೇಳುತ್ತದೆ. ಆದರೆ, ಮಹಿಳೆಯರಿಗೆ ಎಲ್ಲಿ ಏಷ್ಟು ಪ್ರತಿಶತ ಮೀಸಲಾತಿ ನೀಡಿದ್ದೀರಿ ತೋರಿಸಿ. ಕೇವಲ ಹಣ ನೀಡುವವರಿಗೆ 'ಬಿ' ಫಾರಂ ನೀಡಲಾಗುತ್ತಿದೆ ಎಂದು ಆರೋಪಿಸಿ ಜಿಲ್ಲಾ ಪಂಚಾಯತ್ ಹಾಗೂ ತಾಲೂಕು ಪಂಚಾಯತ್ ಸದಸ್ಯರು ಕೆಪಿಸಿಸಿ ಕಾರ್ಯಧ್ಯಕ್ಷ ದಿನೇಶ್ ಗುಂಡೂರಾವ್ ಅವರನ್ನು ಬಹಿರಂಗವಾಗಿ ತರಾಟೆಗೆ ತೆಗೆದುಕೊಂಡರು. 
 
ಕಾಂಗ್ರೆಸ್ ಘಟಕಕ್ಕೂ ರಾಜ್ಯ ಸರಕಾರಕ್ಕೂ ಸಂಬಂಧವೇ ಇಲ್ಲದಂತಾಗಿದೆ. ನಮ್ಮ ಸಮಸ್ಯೆಗಳಿಗೆ ಸಚಿವದ್ವಯರು ಕ್ಯಾರೆ ಎನ್ನುವುದಿಲ್ಲ ಎಂದು ತಾಲೂಕು ಪಂಚಾಯತ್ ಸದಸ್ಯರು ಆರೋಪಿಸಿದ್ದಾರೆ. ಈ ವೇಳೆ ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ದಿಗ್ವಿಜಯ್ ಸಿಂಗ್ ಅವರು ಮಧ್ಯ ಪ್ರವೇಶಿಸಿ ವಾತಾರಣವನ್ನು ತಿಳಿಗೊಳಿಸಿದರು. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments