Select Your Language

Notifications

webdunia
webdunia
webdunia
webdunia

ಜಿಂದಾಲ್‍ ಗೆ ಭೂಮಿ ಮಾರಾಟ ವಿಚಾರ; ರಾಜ್ಯ ಸರ್ಕಾರದ ವಿರುದ್ಧ ಇಂದಿನಿಂದ ಪ್ರತಿಭಟನೆಗೆ ಮುಂದಾದ ಬಿಜೆಪಿ

ಜಿಂದಾಲ್‍ ಗೆ  ಭೂಮಿ ಮಾರಾಟ ವಿಚಾರ; ರಾಜ್ಯ ಸರ್ಕಾರದ ವಿರುದ್ಧ ಇಂದಿನಿಂದ ಪ್ರತಿಭಟನೆಗೆ ಮುಂದಾದ ಬಿಜೆಪಿ
ಬೆಂಗಳೂರು , ಶುಕ್ರವಾರ, 14 ಜೂನ್ 2019 (12:19 IST)
ಬೆಂಗಳೂರು : ಜಿಂದಾಲ್‍ ಗೆ  ಭೂಮಿ ಮಾರಾಟ, ಬರ ನಿರ್ವಹಣೆ ವೈಫಲ್ಯ ಸೇರಿ ನಾನಾ ವಿಷಯಗಳಿಗೆ ಸಂಬಂಧಿಸಿದಂತೆ ಬಿಜೆಪಿ, ರಾಜ್ಯ ಸರ್ಕಾರದ ವಿರುದ್ಧ ಇಂದಿನಿಂದ 2 ದಿನಗಳ ಕಾಲ ಅಹೋರಾತ್ರಿ ಧರಣಿ ಹಮ್ಮಿಕೊಂಡಿದೆ ಎನ್ನಲಾಗಿದೆ.




ಜಿಂದಾಲ್ ಕಂಪನಿಗೆ 3667 ಎಕರೆ ಭೂಮಿಯನ್ನು ಅತಿ ಕಡಿಮೆ ದರಕ್ಕೆ ಮಾರುವ ರಾಜ್ಯ ಸರ್ಕಾರದ ತೀರ್ಮಾನ ವಿರೋಧಿಸಿ ಮತ್ತು ಪರಿಹಾರ ಕಾರ್ಯ ಕೈಗೊಳ್ಳುವಲ್ಲಿ ವೈಫಲ್ಯ ಖಂಡಿಸಿ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.


ಯಡಿಯೂರಪ್ಪ ನೇತೃತ್ವದಲ್ಲಿ ಬೆಂಗಳೂರಿನ ಮೌರ್ಯ ವೃತ್ತದಲ್ಲಿ ಅಹೋರಾತ್ರಿ ಧರಣಿ ನಡೆಸಲಾಗುತ್ತದೆ. ಬಿಜೆಪಿಯ ಎಲ್ಲ ಶಾಸಕರು, ಪರಿಷತ್ ಸದಸ್ಯರು, ಪಾಲಿಕೆ ಸದಸ್ಯರೂ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂಬಮಾಹಿತಿ ಲಭ್ಯವಾಗಿದೆ.


Share this Story:

Follow Webdunia kannada

ಮುಂದಿನ ಸುದ್ದಿ

ಮಾತುಕತೆ ಮಾಡಿ ಎಂದು ಭಾರತದ ಹಿಂದೆ ಇನ್ಮುಂದೆ ಅಲೆಯಲ್ಲ: ಪಾಕ್ ಆಕ್ರೋಶ