Webdunia - Bharat's app for daily news and videos

Install App

ದೇಶದ ಎಲ್ಲಾ ಸಿಎಂಗಳಿಗೆ ಪ್ರಧಾನಿ ಮೋದಿ ಹೇಳಿದ್ದೇನು? ಹೈಲೈಟ್ಸ್ ಇಲ್ಲಿದೆ

Webdunia
ಗುರುವಾರ, 2 ಏಪ್ರಿಲ್ 2020 (16:40 IST)
ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ದೇಶದ ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ವಿಡಿಯೋ ಸಂವಾದ ನಡೆಸಿದ್ದು, ಅದರ ಮುಖ್ಯಾಂಶಗಳು ಹೀಗಿವೆ.

1. ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ವಿಡಿಯೊ ಕಾನ್ಫರೆನ್ಸ್ ಮೂಲಕ ಸಂವಾದ ನಡೆಸಿ ರಾಜ್ಯಗಳಲ್ಲಿ ಕೋವಿಡ್ 19 ನಿಯಂತ್ರಣ ಮತ್ತು ಲಾಕ್‍ಡೌನ್ ಅನುಷ್ಠಾನದ ಕುರಿತು ಮಾಹಿತಿ ಪಡೆದರು.
2. ಅಗತ್ಯ ವಸ್ತುಗಳ ಪೂರೈಕೆಗೆ ಅಡಚಣೆಯಾಗದಂತೆ ಲಾಕ್‍ಡೌನ್ ಅನ್ನು ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸುವಂತೆ ಸೂಚನೆ ನೀಡಿದರು. ಉಲ್ಲಂಘಿಸಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ತಿಳಿಸಿದರು.
3. ವಲಸೆ ಕಾರ್ಮಿಕರನ್ನು ಪ್ರತ್ಯೇಕವಾಗಿರಿಸಿ, ಅವರಿಗೆ ಎಲ್ಲ ಅಗತ್ಯ ಸೌಲಭ್ಯ ಒದಗಿಸುವಂತೆ ಸೂಚಿಸಿದರು.
4. ಲಾಕ್‍ಡೌನ್ ಅನುಷ್ಠಾವನ್ನು ಪರಿಣಾಮಕಾರಿಯಾಗಿ ಮಾಡುತ್ತಿರುವ ರಾಜ್ಯಗಳನ್ನು ಅವರು ಶ್ಲಾಘಿಸಿದರು.
5. ಕರ್ನಾಟಕದಲ್ಲಿ ಈ ವರೆಗೆ 124 ಪ್ರಕರಣಗಳು ಪತ್ತೆಯಾಗಿದ್ದು, ದೇಶದಲ್ಲಿ 9ನೇ ಸ್ಥಾನದಲ್ಲಿದೆ.
6. ಕೋವಿಡ್ 19 ಸೋಂಕಿನಿಂದಾಗಿ ಜಾಗತಿಕ ಮಟ್ಟದಲ್ಲಿಯೇ ಪರಿಸ್ಥಿತಿ ಬಹಳ ಚಿಂತಾಜನಕವಾಗಿದೆ.
7. ಕೋವಿಡ್ 19 ಅನ್ನು ಎಲ್ಲರೂ ಒಟ್ಟಾಗಿ ಪರಿಣಾಮಕಾರಿಯಾಗಿ ನಿರ್ವಹಿಸುವ ಅಗತ್ಯವಿದೆ ಎಂದು ಅವರು ಪ್ರತಿಪಾದಿಸಿದರು.
8. ಔಷಧ, ಆಹಾರ ಮತ್ತಿತರ ಅಗತ್ಯ ವಸ್ತುಗಳ ಪೂರೈಕೆ ಅಬಾಧಿತವಾಗಿರಬೇಕು.

9. ರಾಜ್ಯಗಳು ಕೋವಿಡ್ 19 ಚಿಕಿತ್ಸೆಗೆ ಪ್ರತ್ಯೇಕ ಆಸ್ಪತ್ರೆಗಳನ್ನು ಅಧಿಸೂಚಿಸಿ, ಜನರಿಗೆ ಈ ಕುರಿತು ಮಾಹಿತಿ ಒದಗಿಸಬೇಕು.
10. ಮುಂದಿನ ದಿನಗಳಲ್ಲಿ ವೈದ್ಯರ ಕೊರತೆಯಾಗದಂತೆ, ಸಾಧ್ಯವಿರುವಲ್ಲೆಲ್ಲಾ ಆಯುಷ್ ವೈದ್ಯರ ಸೇವೆಯನ್ನು ಪಡೆದುಕೊಳ್ಳುವಂತೆ ಹಾಗೂ ಇದಕ್ಕಾಗಿ ಅವರಿಗೆ ಆನ್‍ಲೈನ್ ತರಬೇತಿ ನೀಡುವಂತೆ ಸಲಹೆ ನೀಡಿದರು.
11. ನಮ್ಮ ರೋಗ ನಿರೋಧಕ ಶಕ್ತಿ ಹೆಚ್ಚಿಸುವ ನಿಟ್ಟಿನಲ್ಲಿ ಆಯುಷ್ ಇಲಾಖೆಯು ಹೊರಡಿಸಿರುವ ಮಾರ್ಗಸೂಚಿಗಳನ್ನು ಜನಪ್ರಿಯಗೊಳಿಸಿ, ಜನರು ಅವುಗಳನ್ನು ಪಾಲಿಸಲು ಕ್ರಮ ವಹಿಸುವಂತೆ ಸಲಹೆ ನೀಡಿದರು.
12. ಪಿಎಂ-ಗರೀಬ್ ಕಲ್ಯಾಣ್ ಪ್ಯಾಕೇಜ್‍ನ ಧನ ಸಹಾಯದ ಮೊತ್ತವನ್ನು ಪಡೆಯಲು ಬ್ಯಾಂಕುಗಳಲ್ಲಿ ನೂಕುನುಗ್ಗಲು ಉಂಟಾಗದಂತೆ ಎಚ್ಚರ ವಹಿಸಬೇಕೆಂದು ಪ್ರಧಾನಿ ತಿಳಿಸಿದ್ದಾರೆ.
 13. ಕೃಷಿ ಚಟುವಟಿಕೆಗಳಿಗೆ ಲಾಕ್‍ಡೌನ್ ನಿಂದ ವಿನಾಯಿತಿ ನೀಡಲಾಗಿದೆ. ಆದರೆ ರೈತರು ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಮರೆಯಬಾರದು. ಬೆಳೆ ಕಟಾವು ಸಂದರ್ಭದಲ್ಲಿಯೂ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಅವರು ಎಲ್ಲ ಮುಖ್ಯಮಂತ್ರಿಗಳಿಗೆ ಸೂಚನೆ ನೀಡಿದರು.
14. ಕರ್ನಾಟಕವು ಪ್ರಧಾನ ಮಂತ್ರಿಯವರು ನೀಡಿದ ಬಹುತೇಕ ಸಲಹೆಗಳು ಹಾಗೂ ಮಾರ್ಗಸೂಚಿಗಳನ್ನು ಈಗಾಗಲೇ ಕಾರ್ಯಾನುಷ್ಠಾನಗೊಳಿಸಿದೆ.
15. ಲಾಕ್‍ಡೌನ್ ನಂತರ ಕೈಗೊಳ್ಳಬೇಕಾದ ಮುನ್ನೆಚ್ಚರಿಕೆ ಕ್ರಮಗಳ ಕುರಿತು ಟಾಸ್ಕ್‍ಫೋರ್ಸ್ ರಚನೆ ಮಾಡಲಾಗುವುದು.
16.ಎಲ್ಲ ಧರ್ಮಗುರುಗಳು ಕೋವಿಡ್ 19 ನಿಯಂತ್ರಣಕ್ಕೆ ಸಹಕರಿಸಬೇಕು.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments