Select Your Language

Notifications

webdunia
webdunia
webdunia
webdunia

ನಾಪತ್ತೆಯಾದ ಯುವಕನ ಶವ ಪತ್ತೆ

ನಾಪತ್ತೆಯಾದ ಯುವಕನ ಶವ ಪತ್ತೆ
ಗದಗ , ಮಂಗಳವಾರ, 4 ಜೂನ್ 2019 (12:44 IST)
ಗದಗ : ಗದಗ ಜಿಲ್ಲೆಯ ರೋಣ ತಾಲೂಕಿನ ಕೌಜಗೇರಿ ಗ್ರಾಮದ ಹೊರವಲಯದಲ್ಲಿ ಕೊಳೆತ ವಾಸನೆಯಿಂದ ಯುವಕನ ಮೃತದೇಹವೊಂದು ಪತ್ತೆಯಾಗಿದ್ದು, ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ.




ಸಮೀರ್ (22) ಕೊಲೆಯಾದ ಯುವಕ ಎಂಬುದಾಗಿ ತಿಳಿದುಬಂದಿದ್ದು, ಈತ ಕೌಜಗೇರಿ ಗ್ರಾಮದಲ್ಲಿ ಪೋಸ್ಟ್ ಮ್ಯಾನ್ ಆಗಿ ಕೆಲಸ ಮಾಡುತ್ತಿದ್ದ ಎನ್ನಲಾಗಿದೆ. ಜೂನ್ 1 ರಂದು ನಾಪತ್ತೆಯಾಗಿದ್ದ ಈತನ ಮೃತದೇಹ ಇಂದು ಪತ್ತೆಯಾಗಿದ್ದು, ನಾಪತ್ತೆಯಾದ ದಿನವೇ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ.


ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶಿಲನೆ ನಡೆಸುತ್ತಿದ್ದು, ರೋಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



Share this Story:

Follow Webdunia kannada

ಮುಂದಿನ ಸುದ್ದಿ

ಸಿಎಂ ಕುಮಾರಸ್ವಾಮಿ ಗ್ರಾಮ ವಾಸ್ತವ್ಯದ ಕುರಿತು ಲೇವಡಿ ಮಾಡಿದ ಕೋಟಾ ಶ್ರೀನಿವಾಸ್ ಪೂಜಾರಿ