ಪೌಷ್ಟಿಕ ಆಹಾರ ಸೇವನೆ ಅಗತ್ಯ ಎಂದ ಶಾಸಕ

Webdunia
ಬುಧವಾರ, 26 ಸೆಪ್ಟಂಬರ್ 2018 (17:15 IST)
ಮಕ್ಕಳು ಮತ್ತು ಗರ್ಭಿಣಿಯರು ಪೌಷ್ಟಿಕ ಆಹಾರವನ್ನು ಸೇವಿಸುವ ಮೂಲಕ ಆರೋಗ್ಯವಂತ ಜೀವನ ನಡೆಸಬಹುದು ಎಂದು ಶಾಸಕ ಹೇಳಿದ್ದಾರೆ.

ಯಾದಗಿರಿ ಪಟ್ಟಣದ ಗಾಂಧಿ ಮೈದಾನದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಹಾಗೂ ಶಿಶು ಅಭಿವೃದ್ದಿ ಇಲಾಖೆ, ಗ್ರಾಮೀಣ ಅಭಿವೃದ್ಧಿ ಇಲಾಖೆ, ಆರೋಗ್ಯ ಇಲಾಖೆ, ಶಿಕ್ಷಣ ಇಲಾಖೆ ಹಾಗೂ ಇತರೆ ಇಲಾಖೆಗಳ ಸಹಯೋಗದಲ್ಲಿ ನಡೆದ ಪೋಷಣ ಅಭಿಯಾನ ಮಾಸಾಚರಣೆ ಜನಾಂದೋಲನ ಕಾರ್ಯಕ್ರಮ ಉದ್ಘಾಟಿಸಿ ಶಾಸಕ ನಾಗನಗೌಡ ಕಂದಕೂರ ಮಾತನಾಡಿದರು.

ಹೈದರಾಬಾದ್ ಕರ್ನಾಟಕ ಭಾಗದಲ್ಲಿ ಪೌಷ್ಟಿಕ ಆಹಾರದ ಕೊರತೆಯಿಂದ ಮಕ್ಕಳ ಮತ್ತು ಗರ್ಭೀಣಿಯರ ಮರಣದ ಸಂಖ್ಯೆ ಹೆಚ್ಛಾಗಿತ್ತು. ಸರ್ಕಾರದ ಯೋಜನೆಗಳಿಂದ ಹಾಗೂ ಇಲಾಖೆಗಳ ಉತ್ತಮ ಕಾರ್ಯಕ್ಷಮತೆಯಿಂದಾಗಿ ಅದರ ಪ್ರಮಾಣ ಇಳಿಕೆಯಾಗಿದೆ. ಮಕ್ಕಳು ಸೇರಿದಂತೆ ಪ್ರತಿಯೊಬ್ಬರೂ ಪೌಷ್ಟಿಕ ಆಹಾರ ಸೇವಿಸುವುದರ ಮೂಲಕ ಆರೋಗ್ಯ ವಂತ ಸಮಾಜವನ್ನು ನಿರ್ಮಿಸಬಹುದು ಎಂದು ತಿಳಿಸಿದರು.

ಸರ್ಕಾರವು ಪೌಷ್ಟಿಕ ಆಹಾರ ಆಹಾರವನ್ನು ನೀಡುವ ಉದ್ದೇಶದಿಂದ ಅನೇಕ ಯೋಜನೆಗಳನ್ನು ಜಾರಿಗೆ ತಂದಿದೆ. ಪ್ರತಿ ಅಂಗನವಾಡಿ ಕೇಂದ್ರಗಳಲ್ಲಿ ಮಾತೃಪೂರ್ಣ ಯೋಜನೆ ಅಡಿಯಲ್ಲಿ ಕಾಳು, ಮೊಳಕೆಯುಕ್ತ ಆಹಾರ, ಹಾಲು, ಆಹಾರ ನೀಡುತ್ತಿದೆ. ಅದಕ್ಕೆ ಸಾವಿರಾರು ರೂಗಳನ್ನು ಖರ್ಚು ಮಾಡುತ್ತಿದ್ದು, ಎಲ್ಲರೂ ಯೋಜನೆಯ ಸದುಪಯೋಗ ಪಡೆಯುವಂತೆ ಸಲಹೆ ನೀಡಿದರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪಹಲ್ಗಾಮ್‌ ಭಯೋತ್ಪಾದನಾ ದಾಳಿ: ಎನ್‌ಐಎ ತನಿಖೆಯಲ್ಲಿ ಮಹತ್ವದ ಬೆಳವಣಿಗೆ

ಪಾರ್ಟಿ ಮಾಡುತ್ತಿದ್ದಾಗ ಪೊಲೀಸರ ಎಂಟ್ರಿ, ಹೆದರಿ ನಾಲ್ಕನೇ ಫ್ಲೋರ್‌ನಿಂದ ಹಾರಿದ್ರಾ ಯುವತಿ

ಮಹಿಳೆಯರಿರುವುದು ಗಂಡನ ಜತೆ ಮಲಗುವುದಕ್ಕೆ: ಕೇರಳ ಸಿಪಿಎಂ ಮುಖಂಡನ ವಿವಾದಾತ್ಮಕ ಹೇಳಿಕೆ

ಮೊಟ್ಟೆ ಪ್ರಿಯರೇ ಹುಷಾರ್ : ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಶಾಕಿಂಗ್ ಮಾಹಿತಿ

ಕೌಟುಂಬಿಕ ಕಲಹಕ್ಕೆ ಪತ್ನಿಯನ್ನು ಮುಗಿಸಿ, ತಾನೂ ಆತ್ಮಹತ್ಯೆಗೆ ಶರಣಾದ ಪತಿ

ಮುಂದಿನ ಸುದ್ದಿ
Show comments