Select Your Language

Notifications

webdunia
webdunia
webdunia
webdunia

ಪ್ರಚಾರ ಕಾರ್ಯ ಮುಗಿಸಿದ ಸಿಎಂ ಈಗ ಹೋಗಿದ್ದೆಲ್ಲಿಗೆ ಗೊತ್ತಾ?

ಪ್ರಚಾರ ಕಾರ್ಯ ಮುಗಿಸಿದ ಸಿಎಂ ಈಗ ಹೋಗಿದ್ದೆಲ್ಲಿಗೆ ಗೊತ್ತಾ?
ಉಡುಪಿ , ಸೋಮವಾರ, 22 ಏಪ್ರಿಲ್ 2019 (08:38 IST)
ಉಡುಪಿ : ಏ.23 ರಂದು ನಡೆಯುವ 3ನೇ ಹಂತದ ಮತದಾನದ ಬಹಿರಂಗ ಪ್ರಚಾರಕ್ಕೆ ನಿನ್ನೆ ತೆರೆಬಿದ್ದ ಹಿನ್ನಲೆಯಲ್ಲಿ ಸಿಎಂ ಕುಮಾರಸ್ವಾಮಿ ಪ್ರಚಾರ ಕಾರ್ಯವನ್ನು ಮುಗಿಸಿ ವಿಶ್ರಾಂತಿ ಪಡೆಯಲು ನಿರ್ಧಾರ ಮಾಡಿದ್ದಾರೆ ಎನ್ನಲಾಗಿದೆ.


ಎರಡನೇ ಹಂತದ ಮತದಾನ ವೇಳೆ ಮಂಡ್ಯ ಕ್ಷೇತ್ರ ಸೇರಿದಂತೆ ಹಲವು ಅಭ್ಯರ್ಥಿಗಳ ಪರ ನಡೆಸಿದ ಸಿಎಂ ಕುಮಾರಸ್ವಾಮಿ ಏ.23 ರಂದು ನಡೆಯುವ 3ನೇ ಹಂತದ ಮತದಾನಕ್ಕಾಗಿ  ಶಿವಮೊಗ್ಗದಲ್ಲಿ ಮಧು ಬಂಗಾರಪ್ಪ ಸೇರಿದಂತೆ ಮೈತ್ರಿ ಅಭ್ಯರ್ಥಿಗಳ ಪರ ಪ್ರಚಾರ ನಡೆಸಿದ್ದರು. ನಿನ್ನೆ ಬಹಿರಂಗ ಪ್ರಚಾರಕ್ಕೆ ತೆರೆ ಬಿದ್ದಿದ್ದು ಸದ್ಯಕ್ಕೆ ಸಿಎಂ ವಿಶ್ರಾಂತಿ ತೆಗೆದುಕೊಳ್ಳಲು ಮುಂದಾಗಿದ್ದಾರೆ.


ಉಡುಪಿಯ ಹೆಲ್ತ್ ರೆಸಾರ್ಟ್ ಆಗಿರುವ ಕಾಪುವಿನ ಮೂಳೂರುನಲ್ಲಿರುವ ಸಾಯಿರಾಧಾ ರೆಸಾರ್ಟಿನಲ್ಲಿ ಸಿಎಂ ಎಚ್‍.ಡಿ.ಕೆ ಮೂರು ದಿನ ವಿಶ್ರಾಂತಿ ಪಡೆಯಲಿದ್ದಾರೆ. ಈ ಅವಧಿಯಲ್ಲಿ ಪಂಚಕರ್ಮ ಚಿಕಿತ್ಸೆ, ಧ್ಯಾನ, ಯೋಗದಲ್ಲಿ ಸಿಎಂ ಪಾಲ್ಗೊಳ್ಳಲಿದ್ದಾರೆ ಎಂಬ ಮಾಹಿತಿ ತಿಳಿದುಬಂದಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

Share this Story:

Follow Webdunia kannada

ಮುಂದಿನ ಸುದ್ದಿ

ಧರ್ಮಸ್ಥಳ ದೇವರ ದರ್ಶನ ಮಾಡಿಸುವ ನೆಪದಲ್ಲಿ ಪತಿ ಪತ್ನಿಗೆ ಮಾಡಿದ್ದಾನೆ ಇಂತಹ ವಂಚನೆ